ಕೊಪ್ಪಳ | ಬಸ್ ತಂಗುದಾಣ ನಿರ್ಮಿಸಲು ವಿದ್ಯಾರ್ಥಿಗಳಿಂದ ರಸ್ತೆ ತಡೆ; ಎಐಡಿಎಸ್ಒ ಬೆಂಬಲ

Date:

ಬೂದಗುಂಪ ಗ್ರಾಮಕ್ಕೆ ಬಸ್ ನಿಲುಗಡೆ ಹಾಗೂ ಬಸ್ ತಂಗುದಾಣ ನಿರ್ಮಿಸವಂತೆ ಬಸ್‌ಗಳನ್ನು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ನೀಡಿತು.

ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಿಂದ ನಗರದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಹಳ ಮಂದಿ ಇದ್ದಾರೆ. ಸರಿಯಾದ ಬಸ್ ತಂಗುದಾಣ ಇಲ್ಲದಿರುವುದರಿಂದ ಬಸ್ಸುಗಳು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆ ಗ್ರಾಮದ ವಿದ್ಯಾರ್ಥಿಗಳು ಬಸ್ ನಿಲ್ಲಿಸಿ ಸುಮಾರು 3 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿ ಸಾರಿಗೆ ಸಂಸ್ಥೆಯ ಮೇಲ್ವಿಚಾರಕ ಮಂಜುನಾಥ ಹಾಗೂ ಗ್ರಾಮದ ಪಿಡಿಒಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿನಿ ಭಾಗ್ಯಶ್ರೀ ಮಾತನಾಡಿ, “ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ನಮಗೆ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬಸ್ ನಿಲುಗಡೆ ಆಗದೇ ತಡೆರಹಿತವಾಗಿ ಚಲಿಸುತ್ತವೆ. ಇದರಿಂದ ದಿನನಿತ್ಯ ನಮಗೆ ತೊಂದರೆಯಾಗಿದೆ” ಎಂದು ಆಕ್ರೋಶಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೊಮ್ಮೆ ವಿದ್ಯಾರ್ಥಿನಿ ಬಸ್ಸಿನಿಂದ ಕೆಳಗೆ ಬಿದ್ದರೂ ಬಸ್ ಚಾಲಕನು ಹಾಗೆಯೇ ಬಸ್ ಚಾಲನೆ ಮಾಡಿಕೊಂಡು ಹೋದ ಘಟನೆ ನಡೆದಿದೆ. ವಯೋವೃದ್ಧರು, ಸಣ್ಣ ಮಕ್ಕಳು ಮತ್ತು ವಿದ್ಯಾರ್ಥಿಗಳು ಬಿಸಿಲಿನಲ್ಲಿ ನಿಂತು ಬಸ್ಸಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ಘಟನೆಗಳಿಂದ ಕುಪಿತಗೊಂಡಂತ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಬಸ್ ತಡೆದು ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಮುಖಂಡ ತುಳಜಾ ರಾಮ್ ಹಾಗೂ ಸಿಂಧು ಕೌದಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಬೆಂಬಲಿಸಿ ಮಾತನಾಡಿ, “ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಇಚಲಕರಂಜಿ, ಹುಬ್ಬಳ್ಳಿ, ಕಾರವಾರ, ಸಿಂಧನೂರು ಮತ್ತು ರಾಯಚೂರು ಸೇರಿದಂತೆ ಬೂದಗುಂಪ ಮಾರ್ಗವಾಗಿ ಚಲಿಸುವ ಬಸ್ಸುಗಳನ್ನು ನಿಲುಗಡೆ ಮಾಡಬೇಕು. ಬೂದುಗುಂಪದಲ್ಲಿ ಎರಡು ಕಡೆ ಬಸ್ ತಂಗುದಾಣವನ್ನು ನಿರ್ಮಿಸಬೇಕು” ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳಾದ ಭಾಗ್ಯಶ್ರೀ, ಮಂಜವ್ವ, ಕವಿತಾ, ಕೀರ್ತನ, ಪವಿತ್ರ, ಹನುಮಂತಿ, ಶಶಿಕಲಾ, ಅಕ್ಷತಾ, ಕರಿಯಮ್ಮ, ನಫೀಜ, ಕರಿಯಣ್ಣ, ಮಲ್ಲಿಕಾರ್ಜುನ, ದೀಪಿಕಾ, ಬಸಮ್ಮ, ರೇಣುಕಾ, ಭೀಮಶ್ರೀ, ಸೌಂದರ್ಯ, ಲಕ್ಷ್ಮಿ, ರೈತ ಸಂಘಟನೆಯ ಹನುಮಂತಪ್ಪ, ಫಕೀರಪ್ಪ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...