ಕೊಪ್ಪಳ | ಹಾಲವರ್ತಿ ಗ್ರಾಮದ ಅಸ್ಪೃಶ್ಯತೆ ಆಚರಣೆ ಪ್ರಕರಣ; ಅಧಿಕಾರಿಗಳಿಂದ ಸಂಧಾನ ಸಭೆ

Date:

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು ದೇವಸ್ಥಾನ ಪ್ರವೇಶ ಮಾಡಿಸಿದ್ದಾರೆ.

ಹಾಲವರ್ತಿ ಗ್ರಾಮದಲ್ಲಿ ದಲಿತರು ಹೋಟೆಲ್‌ ಪ್ರವೇಶಿಸಿದರೆ ಹೋಟೆಲ್‌ ಬಂದ್‌ ಮಾಡಲಾಗುತ್ತಿತ್ತು. ಕ್ಷೌರದ ಅಂಗಡಿ, ದೇವಸ್ಥಾನ ಹಾಗೂ ಕೆರೆ ಪ್ರವೇಶಕ್ಕೆ ನಿರ್ಬಂಧವಿತ್ತು. ಮಾಧ್ಯಮಗಳಲ್ಲಿ ಈ ಕುರಿತು ಬುಧವಾರ ವರದಿ ಪ್ರಕಟವಾದ ಬಳಿಕ, ಜಾತಿ ದೌರ್ಜನ್ಯ ಎಸಗಿದ್ದ ಕ್ಷೌರದ ಅಂಗಡಿಯ ಯಂಕೋಬಾ ಹಡಪದ, ಅಂಜಿನಪ್ಪ ಮತ್ತು ಹೋಟೆಲ್‌ ಮಾಲೀಕ ಸಂಜೀವಪ್ಪ ಗುಳದಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇವರಲ್ಲಿ ಯಂಕೋಬಾ ಹಾಗೂ ಸಂಜೀವಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

ಹಾಲವರ್ತಿ 3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕರಿಯಪ್ಪ ಗುಡಿಮನಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಾಲವರ್ತಿ ಗ್ರಾಮದಲ್ಲಿ ದಲಿತರಿಗೆ ಪ್ರವೇಶ ನಿರ್ಬಂಧಿಸಿದ್ದ ಹೋಟೆಲ್‌ನಲ್ಲಿಯೇ ಅಧಿಕಾರಿಗಳು ಉಪಾಹಾರ ವ್ಯವಸ್ಥೆ ಮಾಡಿದ್ದಾರೆ. ಗ್ರಾಮದೇವತೆ ಮತ್ತು ಆಂಜನೇಯನ ದೇವಸ್ಥಾನಕ್ಕೆ ದಲಿತರನ್ನು ಕರೆದುಕೊಂಡು ಹೋದ ಅಧಿಕಾರಿಗಳು, ಎಲ್ಲರ ಸಮ್ಮುಖದಲ್ಲಿ ದೇವರ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ದೇವಾಲಯ ಪ್ರವೇಶ ಮಾಡಿಸಿದರು” ಎಂದು ತಿಳಿಸಿದರು.

ಹಾಲವರ್ತಿ ಅಸ್ಪೃಶ್ಯತೆ 2

“ಗ್ರಾಮದಲ್ಲಿ ಇನ್ನೂ ಕೂಡ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಜನವರಿ 26ರಿಂದ ರಾಜ್ಯ ಸರ್ಕಾರ ಹೊರಡಿಸಿರುವ ಸಂವಿಧಾನ ಜಾಗೃತಿ ಮೆರವಣಿಗೆ ಕಾರ್ಯಕ್ರಮದ ಭಾಗವಾಗಿ, ಸುಮಾರು ಹತ್ತು ದಿನಗಳ ಹಿಂದೆ ಹಾಲವರ್ತಿ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಮೆರವಣಿಗೆ ನಡೆದಿದೆ. ಇದರಿಂದ ಎಚ್ಚೆತ್ತುಕೊಂಡಿದ್ದ ಗ್ರಾಮದ ತಳಸಮುದಾಯದ ಯುವಜನರು ಅಸ್ಪೃಶ್ಯತೆ ವಿರುದ್ಧ ಸವರ್ಣೀಯರನ್ನು ಪ್ರಶ್ನಿಸಲು ಆರಂಭಿಸಿದರು. ಆದರೆ, ಸವರ್ಣೀಯರು ಯುವಜನರಿಗೆ ಜೀವ ಬೆದರಿಕೆ ನೀಡಿದ್ದು, ಹೋಟೆಲ್‌ಗಳಿಗೆ ಕ್ಷೌರದಂಗಡಿಗಳಿಗೆ ಪ್ರವೇಶಿಸದಂತೆ ತಡೆದಿದ್ದರು. ಆದರೆ ವಿದ್ಯಾವಂತ ಯುವಜನರು ಅಸ್ಪೃಶ್ಯತೆ ಆಚರಣೆ ಮಾಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು” ಎಂದು ಹೇಳಿದರು.

ಹಾಲವರ್ತಿ ಅಸ್ಪೃಶ್ಯತೆ 1

“ದಲಿತರು ಹೋಟೆಲ್‌ಗೆ ಬಂದರೆ ತಿಂದು ಬೀಸಾಡುವ ಪ್ಲೇಟ್‌ನಲ್ಲಿ, ಸವರ್ಣೀಯರು ಹೋಟೆಲ್‌ಗೆ ಬಂದರೆ ಸ್ಟೀಲ್‌ ಪ್ಲೇಟ್‌ನಲ್ಲಿ ಆಹಾರ ಕೊಡುತ್ತಿದ್ದರು. ಕ್ಷೌರಿಕರ ಅಂಗಡಿ ತೆರಳಿದರೆ ಕ್ಷೌರ ಮಾಡುತ್ತಿರಲಿಲ್ಲ. ಪ್ರಶ್ನಿಸಿದರೆ ಬೀಗ ಹಾಕಿಕೊಂಡು ಹೋಗಿಬಿಡುತ್ತಿದ್ದರು” ಎಂದರು.

“ಹಾಲವರ್ತಿ ಗ್ರಾಮದವರೊಬ್ಬರಿಗೆ ಅಪಘಾತದಲ್ಲಿ ಕಾಲಿಗೆ ಪೆಟ್ಟಾಗಿದೆ. ಇದರಿಂದ ಕ್ಷೌರ ಮಾಡಿಸಿಕೊಳ್ಳಲು ಬೇರೆ ಊರಿಗೆ ಹೋಗಲು ಸಾಧ್ಯವಾಗದ ಪರಿಸ್ಥಿತಿಯಿದೆ. ಆದ್ದರಿಂದ ಕ್ಷೌರ ಮಾಡುವಂತೆ ಪರಿಪರಿಯಾಗಿ ಬೇಡಿಕೊಂಡರೂ ಅಂಗಡಿ ಬಾಗಿಲು ಮುಚ್ಚಿಕೊಂಡು ಹೋಗುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದರು.

ಹಾಲವರ್ತಿ ಅಸ್ಪೃಶ್ಯತೆ 4

“ಗ್ರಾಮದಲ್ಲಿ ಕೆರೆಯಿದ್ದು ಅಲ್ಲಿನ ನೀರು ದಲಿತರು ಮುಟ್ಟಬಾರದು ಎಂದು ಕೆರೆಗೆ ಕಾವಲುಗಾರನನ್ನು ನಿಯೋಜಿಸಿದ್ದಾರೆ. ಇದನ್ನು ಪ್ರಶ್ನಿಸಿದರೆ ‘ಕೆರೆಯ ನೀರು ಕೊಳಚೆಯಾಗಬಾರದೆಂದು ಹೀಗೆ ಮಾಡಿದ್ದೇವೆಂದು ಸಬೂಬು ಹೇಳುತ್ತಾರೆ” ಎಂದು ಆರೋಪಿಸಿದರು.

ಹಾಲವರ್ತಿ ಅಸ್ಪೃಶ್ಯತೆ

“ಸಂವಿಧಾನ ಜಾಗೃತಿ ವೇಳೆ ಅಸ್ಪೃಶ್ಯತೆ ಆಚರಣೆ ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಎಲ್ಲ ಹೋಟೆಲ್‌ಗಳ ಮಾಲೀಕರನ್ನು ವಿಚಾರಿಸಿದರು. ಬಳಿಕ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲೆಗೂ ಹೆಚ್ಚಿನ ಯೋಜನೆ ಪ್ರಕಟ; ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ: ಸಚಿವ ಮಧು ಬಂಗಾರಪ್ಪ

“ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ‍್ಟನ್‌ ಮಹೇಶ ಮಾಲಗಿತ್ತಿ ಮತ್ತು ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಅವರು ಗುರುವಾರ ಎಲ್ಲ ಸಮದಾಯಗಳ ಶಾಂತಿ ಸಭೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ಈ ರೀತಿಯ ಘಟನೆ ಮುರುಕಳಿಸಿದಂತೆ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...