ಕೊಪ್ಪಳ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ

Date:

ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ‌ ನೂತನ ಕಚೇರಿ ಮತ್ತು ನೀರು ಬಳಕೆದಾರರ ಸಂಘದ ನೂತನ ಕಟ್ಟಡವನ್ನು ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ಕೆ ರಾಜಶೇಖರ ಹಿಟ್ನಾಳ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, “ಸಹಕಾರ ಸಂಘದ ಮೂಲಕ ಹಲವು ವ್ಯಾಪಾರಸ್ಥರಿಗೆ, ನೂರಾರು ರೈತರಿಗೆ ಕೋಟ್ಯಂತರ ರೂಪಾಯಿ ಕೃಷಿ ಸಾಲ ನೀಡಲಾಗುತ್ತಿದ್ದು, ಸಹಕಾರಿ ಸಂಘದಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಆರ್ಥಿಕವಾಗಿ ಸೋತವರಿಗೆ ಸಹಕಾರ ಸಂಘ ನೆರವಾಗಿದೆ. ಎರಡೂ ಸರ್ಕಾರಗಳು ಸಹಕಾರ ಸಂಘಗಳಿಗೆ ಆದ್ಯತೆ ನೀಡುತ್ತಿವೆ. ಸರ್ಕಾರದ ಕಟ್ಟಡಗಳನ್ನು ನಮ್ಮ ಕಟ್ಟಡವೆಂದು ಉಳಿಸಬೇಕು. ಸಹಕಾರ ಸಂಘಗಳು ನಮ್ಮ ಬ್ಯಾಂಕುಗಳಿಗೆ ಹಾಗೂ ರೈತರಿಗೆ ಬೆನ್ನೆಲುಬಾಗಿ ನಿಂತಿವೆ” ಎಂದರು.

ಹನುಮಂತಪ್ಪ ಬನ್ನಿಕೊಪ್ಪ ಮಾತನಾಡಿ, “ಬಂಡಿಹರ್ಲಾಪುರ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಸಹಕಾರ ಸಂಘವು ಆರಂಭವಾಯಿತು. ಹಲವು ಮುಖಂಡರ ಸಹಕಾರದಿಂದ ಇಂದು ಉತ್ತಮ ಕಟ್ಟಡ ನಿರ್ಮಾಣವಾಗಿದೆ. ಈ ಮೊದಲು 199 ಷೇರುದಾರರು ಇದ್ದು, ಈಗ 665 ಷೇರುದಾರರು ಇದ್ದಾರೆ. ಮೊದಲು ಬಂಡವಾಳ 2 ಲಕ್ಷ 90 ಸಾವಿರದಿಂದ, 3 ಕೋಟಿ 8 ಲಕ್ಷ ಸಾವಿರ ಪ್ರಗತಿಯತ್ತ ಸಾಗುತ್ತಿದೆ. ಸಹಕಾರಿ ಶಿಕ್ಷಣ ಕ್ಷೇತ್ರದ ಜತೆಗೆ ಹಲವು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಗತಿಯತ್ತ ಸಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರಿ ಧುರೀಣ ರಮೇಶ್ ವೈದ್ಯ ಮಾತನಾಡಿ, “ಜಿಲ್ಲಾ, ತಾಲೂಕು ಸಹಕಾರ ಸಂಘಗಳಲ್ಲಿ ಮೊದಲಿಗೆ ಕುರ್ಚಿ ಇರಲಿಲ್ಲ, ಈಗ ಸಮೃದ್ಧಿಯಾಗಿವೆ. ದೇಶಕ್ಕೆ ಎರಡು ಪವಿತ್ರ ಕ್ಷೇತ್ರಗಳು ಶಿಕ್ಷಣ ಮತ್ತು ಸಹಕಾರ ಸಂಘಕ್ಕೆ ಜೀವ ಕೊಟ್ಟಾಗ ಮಾತ್ರ ಗ್ರಾಮ ಅಭಿವೃದ್ಧಿ ಸಾಧ್ಯ. ಈಗ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ ₹1300 ಕೋಟಿ ಪ್ರಗತಿಯಲ್ಲಿದೆ. ಸಹಕಾರಿ ಸಂಘದಲ್ಲಿ ರಾಜಕೀಯ ಇರಬಾರದು” ಎಂದು ನಿರ್ದೇಶಕರಲ್ಲಿ ಮನವರಿಕೆ ಮಾಡಿದರು.

ಇದನ್ನೂ ಓದಿದ್ದೀರಾ? ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

ಸಹಕಾರಿ ಸಂಘದ ಅಧ್ಯಕ್ಷ ಕೆ ಚಂದ್ರಶೇಖರ್, ಕೆ ವೆಂಕಟಯ್ಯ, ಕಾಷಯ್ಯ ಸ್ವಾಮಿ ಗವಿಮಠ, ಮಾಜಿ ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರಾಜು, ಗ್ರಾಮ ಪಂಚಾಯಿತಿ ಸದಸ್ಯ ಚನ್ನಕೃಷ್ಣ ಗೊಲ್ಲರ, ರಬೇಕಾ ಬಾಬು, ವಿ ಎಸ್ ಗಿರೆಡ್ಡಿ, ಶರಣಪ್ಪ ರಾಟಿ, ಉಪನಿಬಂಧಕ ಪ್ರಕಾಶ್ ಸಜ್ಜನ್, ಸುದರ್ಶನ್ ಶರ್ಮಾ, ಶಾಖಾ ವ್ಯವಸ್ಥಾಪಕ ತೇಜಪ್ಪ ಎಲ್ ದೊರೆಸ್ವಾಮಿ, ಯಂಕಪ್ಪ ಹೊಸಳ್ಳಿ , ಸಂಗಮೇಶ ದೆಸಾಯಿ, ವಿಠ್ಠಲ್ ನಾವ್ಡೆ, ನಿರ್ದೇಶಕರಾದ ಎಂ ಮೋಹನ್, ಶಂಕರ್ ಶ್ಯಾಸಲ್, ಯಂಕಪ್ಪ ಜಿ, ರಾಮಮೂರ್ತಿ, ಸಣ್ಣ ಚೆನ್ನರೆಡ್ಡಿ, ಮೀರ್ ಅಹ್ಮದ್ ಖಾನ್, ಕನಕಪ್ಪ ಮುಂಡರಗಿ, ಅಬ್ಬಲೆಗೆಪ್ಪ, ಚಿನ್ನತಾಂಬಿ, ಭಾಗ್ಯಲಕ್ಷ್ಮಿ, ರೇಣುಕಮ್ಮ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಸವನಗೌಡ ಪಾಟೀಲ್, ಸಿಬ್ಬಂದಿ ರಾಘವೇಂದ್ರ ಇಲ್ಲೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...