ಕೊಪ್ಪಳ | ರಾತ್ರೋರಾತ್ರಿ ಕೆರೆ ಮಣ್ಣು ಕಳ್ಳತನ; ಗುತ್ತಿಗೆದಾರ ವಿಶ್ವನಾಥ ಕುಂಬಾರನ ವಿರುದ್ಧ ಸೂಕ್ತ ಕ್ರಮವಾಗುವುದೇ?

Date:

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಸಿಗ್ನೇಕೊಪ್ಪ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಹಿಂಬದಿಯಲ್ಲಿರುವ ಕೆಂಪು ಕೆರೆ ಮಣ್ಣು ಕಳ್ಳತನವಾಗಿದ್ದು, ಗರಚು ಮಣ್ಣನ್ನು ರಾತ್ರೋರಾತ್ರಿ ಕಳವು ಮಾಡಿ ಸರಿಸುಮಾರು 200ಕ್ಕೂ ಅಧಿಕ ಟ್ರ್ಯಾಕ್ಟರ್ ಗಾಡಿಗಳಷ್ಟು ಮಣ್ಣನ್ನು ಸಾಗಾಟ ಮಾಡಿದ್ದಾರೆ ಎಂದು ಗ್ರಾಮಸ್ಥರೆಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೆರೆಯ ಮಣ್ಣನ್ನು ರಿಯಲ್ ಎಸ್ಟೇಟ್ ದಧೆಕೋರರು ಪರವಾನಗಿ ಇಲ್ಲದೇ ಆಗಾಗ ಕೆರೆಯ ಮಣ್ಣನ್ನು ಎತ್ತಿಕೊಂಡು ಹೋಗುತ್ತಿದ್ದಾರೆ. ಹೇಳೋರು ಕೇಳೋರು ಯಾರೂ ಇಲ್ಲವೆಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕೆರೆ ಮಣ್ಣು ಕಳುವು 1

“ಕೆರೆಯ ಪಕ್ಕದ ಕೆಲವೇ ಅಂತರದಲ್ಲಿ ಲೇಔಟ್ ನಿರ್ಮಾಣವಾಗುತ್ತಿದ್ದು, ಇದರ ರಸ್ತೆ ನಿರ್ಮಾಣಕ್ಕಾಗಿ ಕೆರೆಯ ಮಣ್ಣನ್ನು ಬಳಸಿಕೊಳ್ಳುವ ಉದ್ದೇಶದಿಂದ ಮಣ್ಣನ್ನು ಕಳವು ಮಾಡಿ ರಾತ್ರೋರಾತ್ರಿ ಲೇಔಟಿನ ರಸ್ತೆಯಲ್ಲಿ ಹಾಕಲಾಗಿದ್ದು, ಬುಧವಾರ ಬೆಳಿಗ್ಗೆ ಗ್ರಾಮದ ಪ್ರಮುಖರು ಗಮನಿಸಿದಾಗ ಲೇಔಟ್ ಅಭಿವೃದ್ಧಿಗೆ ಬಳಸಿಕೊಂಡಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಷ್ಟಗಿ ಪಟ್ಟಣದ ಗುತ್ತಿಗೆದಾರ ವಿಶ್ವನಾಥ ಕುಂಬಾರ ತಾವೇ ತಮ್ಮ ಲೇಔಟ್‌ನ ರಸ್ತೆಗೆ ಹಾಕಿಕೊಂಡಿರುವುದಾಗಿ ತಿಳಿಸಿದ್ದು, ಈ ಕಾರ್ಯಕ್ಕೆ ರಾತ್ರಿ ವೇಳೆಯಲ್ಲಿ ಒಂದು ಜೆಸಿಬಿ ಸೇರಿದಂತೆ ಆರರಿಂದ ಎಂಟು ಟ್ರ್ಯಾಕ್ಟರ್ ಬಳಕೆ ಮಾಡಿರುವುದಾಗಿ ಹೇಳಿದ್ದಾರೆ.

ಪರವಾನಗಿ ಇಲ್ಲದೆ ರಾತ್ರೋರಾತ್ರಿ ಕೆರೆಯ ಮಣ್ಣನ್ನು ಸಾಗಿಸಿದ ಈ ಗುತ್ತಿಗೆದಾರನಿಗೆ ಕಾನೂನಿನ ಅರಿವು ಇಲ್ಲವೇ ಎಂಬುವಂತೆ ಗ್ರಾಮದ ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ʼನಾನೇ ಈ ಕಾರ್ಯ ಮಾಡಿಸಿದ್ದೇನೆʼ ಎಂದು ಗುತ್ತಿಗೆದಾರ ವಿಶ್ವನಾಥ ಕುಂಬಾರ ತನ್ನ ತಪ್ಪೊಪ್ಪಿಕೊಂಡಿದ್ದು, ಕ್ಷಮಿಸುವಂತೆ ಬೇಡಿಕೊಂಡಿರುತ್ತಾನೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಮೃದ್ಧ ದೇಶ ನಿರ್ಮಾಣದಲ್ಲಿ ಮಕ್ಕಳ ಆರೋಗ್ಯದ ಪಾತ್ರ ಮುಖ್ಯ: ಬಸವರಾಜ ಶರಾಬಿ

“ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಇಂತಹ ಘಟನೆಗಳು ಸಂಭವಿಸುವುದಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಕೃತ್ಯ ಎಸಿಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದುನೋಡಬೇಕಾಗಿದೆ” ಎಂದು ಸ್ಥಳೀಯರು ಮಾತನಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...