ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಯನ್ನು ಮೂವರು ದುರುಳರು ಕಲ್ಲಿನಿಂದ ಹಲ್ಲೆ ನಡೆಸಿದ ಬಳಿಕ ಅತ್ಯಾಚಾರ ನಡೆಸಿ, ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರನ್ನು ಅತ್ಯಾಚಾರ ನಡೆಸಿ, ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ವಿದೇಶಿ ಯುವಕ, ಒಬ್ಬಳು ವಿದೇಶಿ ಯುವತಿಯ ಸಹಿತ ಅನ್ಯರಾಜ್ಯದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, 100₹ ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುರುಳರು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕನ ವಿವರ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ವಿದೇಶಿ ಯುವತಿಯು 27 ವರ್ಷದ ಇಸ್ರೇಲ್ ದೇಶದ ಪ್ರಜೆ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಸ್ಥಳೀಯ ಯುವತಿಯು 29 ವರ್ಷದವಳೆಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕ ಅಮೆರಿಕದವನಾಗಿದ್ದು, ಇನ್ನೊಬ್ಬ ಭಾರತೀಯ ಮಹಾರಾಷ್ಟ್ರ ರಾಜ್ಯದವ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದ ಬಳಿಕ ನಾಪತ್ತೆಯಾಗಿರುವ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ದ್ವಿಚಕ್ರ ವಾಹನ, ಹ್ಯಾಂಡ್ ಬ್ಯಾಗ್‌ ಲಭಿಸಿವೆ. ಹ್ಯಾಂಡ್‌ಬ್ಯಾಗ್‌ನಲ್ಲಿ ಕ್ಯಾಮೆರಾ, ಪವರ್‌ ಬ್ಯಾಂಕ್, ಪೆನ್ನು, ಮುರಿದು ಬಿದ್ದ ಗಿಟಾರ್, ಕೈ ವಸ್ತ್ರ, ಸಿಗರೇಟ್, ರಕ್ತದ ಕಲೆ ಇರುವ ಬಟ್ಟೆ ಲಭ್ಯವಾಗಿವೆ.

ಘಟನೆಯ ಬಗ್ಗೆ ಈದಿನ ಡಾಟ್ ಕಾಮ್ ಜೊತೆಗೆ ಮಾತನಾಡಿರುವ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಯವರು ಯವರು, “ಘಟನೆಗೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಘಟನೆ ನಡೆದ ಸಂದರ್ಭದಲ್ಲಿ ಓಡಾಟ ನಡೆಸಿದವರ ಮೊಬೈಲ್ ಫೋನ್ ಟ್ರ್ಯಾಕ್ ಮಾಡುತ್ತಿದ್ದೇವೆ. ಮೂವರು ಆರೋಪಿಗಳು ಇದ್ದರೆಂದು ಸ್ಥಳೀಯ ಸಂತ್ರಸ್ತ ಯುವತಿ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಮೂವರು ಆರೋಪಿಗಳನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದೇವೆ. ಕಾಲುವೆಗೆ ದೂಡಿ ಹಾಕಿದ ಬಳಿಕ ನಾಪತ್ತೆಯಾಗಿರುವ ಒಡಿಶಾದ ಯುವಕ ಇನ್ನೂ ಪತ್ತೆಯಾಗಿಲ್ಲ. ಹುಡುಕಾಟ ಮುಂದುವರಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...