ಕೊಪ್ಪಳ | ಖಾಲಿ ಹುದ್ದೆ, ಹೊಸ ಹುದ್ದೆ ನೇಮಕಾತಿಗೆ ಕೇಂದ್ರ ಬಜೆಟ್ ಮೌನ: ಎಐಡಿವೈಒ ಅಸಮಾಧಾನ

Date:

ಯುವಜನತೆ, ಮಹಿಳೆಯರು ಮತ್ತು ರೈತರ ನಾಮಜಪ ಮಾಡುತ್ತಲೇ ಈ ಸಮುದಾಯಗಳನ್ನು ಕೇಂದ್ರ ಬಜೆಟ್ -2025 ಕಡೆಗಣಿಸಿದೆ. ನಯಮಂಡನೆಯಾದ 2025-26ರ ಬಜೆಟ್ ಮತ್ತೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಕೊಪ್ಪಳ ಜಿಲ್ಲಾ ಎಐಡಿವೈಒ ಅಸಮಾಧಾನ ವ್ಯಕ್ತಪಡಿಸಿದೆ.

ದೇಶದ ಯುವಜನರಲ್ಲಿ ಬಹಳ ಸಮಯದಿಂದ ಮಡುಗಟ್ಟಿರುವ ಹತಾಶ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಬಜೆಟ್‌ನ ಪತ್ರದ ತುಂಬೆಲ್ಲ ಯುವಜನರು, ಮಹಿಳೆಯರು ಮತ್ತು ರೈತರ ಬಗ್ಗೆ ಅಬ್ಬರದ ಮಾತುಗಳೇ ತುಂಬಿವೆ. ದೇಶದ ಜನಸಂಖ್ಯೆಯ ಶೇ.65ಕ್ಕಿಂತ ಹೆಚ್ಚಿನ ವಿಭಾಗವಾಗಿರುವ ದುಡಿಯುವ ವಯಸ್ಸಿನ(15-59ವರ್ಷಗಳು) 90 ಕೋಟಿಗೂ ಅಧಿಕ ಜನರ ಬದುಕಿನ ಮೇಲೆ ಕೇಂದ್ರ ಬಜೆಟ್  ಯಾವುದೇ ನಿಜವಾದ ಧನಾತ್ಮಕ ಪ್ರಭಾವವನ್ನೂ ಉಂಟುಮಾಡಿಲ್ಲ.

ನೇರವಾಗಿ ಉದ್ಯೋಗ ಸೃಷ್ಟಿಸುವ ಅಥವಾ ಅಸ್ತಿತ್ವದಲ್ಲಿರುವ ಲಕ್ಷಗಟ್ಟಲೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಯಾವುದೇ ಪ್ರಸ್ತಾಪ ಬಜೆಟ್‌ನಲ್ಲಿ ಇಲ್ಲ. ಎಂಎಸ್‌ಪಿಇಗಳು, ಸಣ್ಣ ಉದ್ಯಮಗಳು, ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ತಳಮಟ್ಟದಲ್ಲಿ ಉದ್ಯೋಗ ಸೃಷ್ಟಿಮಾಡುವ ಮಾತನಾಡುತ್ತ ಕೇವಲ ಕ್ರೆಡಿಟ್ ಗ್ಯಾರಂಟಿ ಕವರನ್ನು ₹5 ಕೋಟಿಯಿಂದ ₹10 ಕೋಟಿಗೆ ಹೆಚ್ಚಿಸಿ ಅಬ್ಬರಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಮೂಲಸೌಕರ್ಯಕ್ಕಾಗಿ ಒಂದು ಲಕ್ಷ ಕೋಟಿ ರೂಪಾಯಿಗಳ ಆಯವ್ಯಯವನ್ನು ಮೀಸಲಿಟ್ಟಿರುವ ಬಜೆಟ್‌ನಲ್ಲಿ, ಸಾಮಾಜಿಕ ವೆಚ್ಚದ ಪ್ರಮುಖ ಕ್ಷೇತ್ರಗಳಾದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮೊತ್ತವನ್ನು ತೀವ್ರವಾಗಿ ಕಡಿತಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೂ ಕ್ಷೇತ್ರಗಳ ವೆಚ್ಚದಲ್ಲಿ ತಲಾ ಸುಮಾರು ₹11,000 ಕೋಟಿ ಖೋತಾ ಆಗಿದೆ. ಶೇ.60ಕ್ಕಿಂತ ಹೆಚ್ಚು ಗ್ರಾಮೀಣ ಉದ್ಯೋಗಿಗಳನ್ನು ಮತ್ತು ಸುಮಾರು ಶೇ.10ರಷ್ಟು ನಗರ ಉದ್ಯೋಗಿಗಳನ್ನು ಹೊಂದಿರುವ ದೇಶದ ಅತಿ ದೊಡ್ಡ ಉದ್ಯೋಗದಾತ ಕ್ಷೇತ್ರವಾಗಿರುವ ಕೃಷಿ ರಂಗಕ್ಕೆ ಮೀಸಲಿರಿಸಿರುವ ಹಣದಲ್ಲಿ 2024ರ ಬಜೆಟ್ ಹಂಚಿಕೆಗೆ ಹೋಲಿಸಿದರೆ ₹9,000 ಕೋಟಿ ಕಡಿಮೆಯಾಗಿದೆ. ₹13 ಕೋಟಿಗೂ ಹೆಚ್ಚು ಸಕ್ರಿಯ ಕಾರ್ಮಿಕರು ಜೀವನೋಪಾಯಕ್ಕಾಗಿ ಅವಲಂಭಿಸಿರುವ ಉದ್ಯೋಗ ಖಾತ್ರಿ ಯೋಜನೆಗೆ ಇನ್ನಷ್ಟು ಹಣವನ್ನು ಕಡಿತಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಶೈಕ್ಷಣಿಕ ಶುಲ್ಕ ಭರಿಸಲಾಗದೆ ವಿದ್ಯಾಭ್ಯಾಸ ಮೊಟಕು; ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀ ನೆರವು

₹12000 ಕೋಟಿ ಖರ್ಚು ಮಾಡುವ ಮೂಲಕ ದೇಶದ 500 ಪ್ರಮುಖ ಕಾರ್ಪೊರೇಟ್‌ಗಳಿಂದ ಇಂಟರ್ನ್‌ ಶಿಪ್‌ಗಳನ್ನು ಒದಗಿಸುವ ‘ಪಿಒ ಜಾಬ್ ಲಿಂಕ್ಡ್ ಇನ್ಸೆಂಟಿವ್ʼ ಎಂಬ ತನ್ನ ಕಳೆದ ಬಜೆಟ್ ನೀತಿಯ ಬಗ್ಗೆ 2025ರ ಬಜೆಟ್ ಸಂಪೂರ್ಣ ಮೌನವಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ, ಆಹಾರ ಸಂಸ್ಕರಣೆ, ಜವಳಿ ಮತ್ತು ಎಲೆಕ್ಟ್ರಾನಿಕ್ಸ್‌ ಉತ್ಪಾದನೆ ಇತ್ಯಾದಿಗಳಲ್ಲಿ 21 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮಾತುಗಳು ಬಜೆಟ್‌ನಲ್ಲಿವೆ. ಆದರೆ ಆ ದಿಸೆಯಲ್ಲಿ ಯಾವುದೇ ಸ್ಪಷ್ಟವಾದ ನೀತಿ ನಿರೂಪಣೆ ಬಜೆಟ್‌ನಲ್ಲಿ ಇಲ್ಲ.

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗೆ ಕಾನೂನು ಖಾತರಿಗಾಗಿ ರೈತರು ಆಂದೋಲನ ನಡೆಸುತ್ತಿರುವ ಸಮಯದಲ್ಲಿ, ಅದರ ಅನುಷ್ಠಾನವನ್ನು ಒಪ್ಪದ ಸರ್ಕಾರವು ಈ ಬಜೆಟ್‌ ಮೂಲಕ ‘ಫಸಲ್ ವಿಮಾ ಯೋಜನೆ’ಯನ್ನು ಮತ್ತಷ್ಟು ಭದ್ರಗೊಳಿಸುತ್ತದೆ ಮತ್ತು ಶೇ.52ಕ್ಕಿಂತ ಅಧಿಕ ಲಾಭ ದೋಚುತ್ತಿರುವ ಈ ‘ಫಸಲ್ ವಿಮಾ ಕಂಪನಿ’ಗಳಿಗೆ ಭಾರೀ ಲಾಭವನ್ನು ಬಜೆಟ್ ನೀಡಲಿದೆ. ಈವರೆಗೆ ಕೇವಲ ಶೇ.9ರಿಂದ ಶೇ.12ರಷ್ಟು ರೈತರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...