ಕೊಪ್ಪಳ | ಆಯುಕ್ತರ‌ ಆಹಾರ ಪಟ್ಟಿ ಆದೇಶ ಉಲ್ಲಂಘನೆ; ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯ(ಬಿಸಿಎಂ ಹಾಸ್ಟೆಲ್)ದ ಆಯುಕ್ತರ ಆದೇಶದಂತೆ ನೀಡಬೇಕಿದ್ದ ಆಹಾರ ಪಟ್ಟಿಯನ್ನು ಬದಲಿಸಿ ಸ್ಥಳೀಯ ಅಧಿಕಾರಿಗಳು ತಮ್ಮ ಇಚ್ಛೆಯಂತೆ ಆಹಾರ ಒದಗಿಸುತ್ತಿದ್ದು, ಆಯುಕ್ತರ‌ ಆಹಾರ ಪಟ್ಟಿ ಆದೇಶ ಉಲ್ಲಂಘನೆ ಮಾಡಿತ್ತಿದ್ದಾರೆಂದು ಆರೋಪಿಸಿ ವಸತಿ ನಿಲಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಗಂಗಾವತಿ ತಾಲೂಕು ಪಂಚಾಯತ್ ಎದುರು ಎಸ್‌ಎಫ್‌ಐ ಸಂಘಟನೆಯ ನೇತೃತ್ವದಲ್ಲಿ ಬಿಸಿಎಂ ಇಲಾಖೆಯ ವಿವಿಧ ವಸತಿ ನಿಲಯ ವಿದ್ಯಾರ್ಥಿಗಳು ಪ್ರತಿಭಟಿಸಿ ತಾಲೂಕು ಪಂಚಾಯತಿ ಇಒ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರು ಮಾತನಾಡಿ, “ಗಂಗಾವತಿ ತಾಲೂಕಿನಾದ್ಯಂತ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆಹಾರಪಟ್ಟಿ ಹಾಗೂ ಗ್ರಂಥಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಇದ್ದು, ಹಲವಾರು ಬಾರಿ ಪ್ರತಿಭಟನೆ ಮೂಲಕ ಮನವಿ ಮಾಡಿದರು ಪ್ರಯೋಜನವಾಗಿಲ್ಲ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕಿನಾದ್ಯಾಂತ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಗ್ರಂಥಾಲಯ ಹಾಗೂ ಗಣಕಯಂತ್ರ, ಶೌಚಾಲಯ, ಕುಡಿಯುವ ನೀರು ಮತ್ತು ಸ್ವಚ್ಛತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ವಸತಿ ನಿಲಯದಲ್ಲಿ ಸ್ವಚ್ಛತೆ ಇಲ್ಲದ ಕಾರಣ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುತ್ತಿದೆ” ಎಂದರು.‌

ಬಿಸಿಎಂ ಹಾಸ್ಟೆಲ್

“ರಾಜ್ಯ ಸರ್ಕಾರ ಮತ್ತು ಆಯುಕ್ತರ ಕಚೇರಿ, ʼವಿದ್ಯಾರ್ಥಿಗಳು ಅಪೌಷ್ಠಿಕತೆಯಿಂದ ಬಳಲಬಾರದುʼ ಎಂದು ಸರ್ಕಾರ ಪೌಷ್ಠಿಕ ಆಹಾರವನ್ನು ನೀಡಬೇ‌ಕಾಗಿ ಆಹಾರ ಪಟ್ಟಿ ತಯಾರಿಸಿದೆ. ಆದರೆ ಸ್ಥಳಿಯ ಬಿಸಿಎಂ ಕಲ್ಯಾಣಾಧಿಕಾರಿಗಳು ಆಯುಕ್ತರ ಆದೇಶವನ್ನು ಸಂಫೂರ್ಣ ಉಲ್ಲಂಘನೆ ಮಾಡಿ ಬೆಲೆ ಏರಿಕೆಯ ನೆಪ ಒಡ್ಡಿ ವಿದ್ಯಾರ್ಥಿಗಳ ಅನ್ನಕ್ಕೆ ಕನ್ನ ಹಾಕಿದ್ದಾರೆ” ಎಂದು ಆರೋಪಿಸಿದರು.

“ಜಾರಿಯಲ್ಲಿರುವ ಆಹಾರ ಪಟ್ಟಿ ಹಿಂಪಡೆಯಬೇಕು. ಆಯುಕ್ತರ ಆದೇಶದಂತೆ ಹಳೆಯ ಪಟ್ಟಿಯಂತೆ ಆಹಾರ ನೀಡಬೇಕು. ವಸತಿ ನಿಲಯಗಳಲ್ಲಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಒದಗಿಸಬೇಕು. ಎಲ್ಲ ವಸತಿ ನಿಲಯಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು” ಎಂದು ಬೇಡಿಕೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕುಡಿಯುವ ನೀರಿಗೆ ಹಾಹಾಕಾರ; ನದಿಗಳಲ್ಲಿ ಕೊಳವೆ ಬಾವಿ ಕೊರೆತ

ಅಮರೇಶ್ ಕಡಗದ, ಜಿಲ್ಲಾ ಅಧ್ಯಕ್ಷ ಗ್ಯಾನೇಶ್ ಕಡಗದ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಈಚನಾಳ್, ತಾಲೂಕು ಅಧ್ಯಕ್ಷ ನಾಗರಾಜ್ ಯು, ತಾಲೂಕು ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಮುಖಂಡರಾದ ರಮೇಶ್, ಮಲ್ಲೇಶ್, ಮಂಜುನಾಥ್, ಅಕ್ಬರ್, ವಿದ್ಯಾರ್ಥಿಗಳಾದ ಸಹನಾ, ಶ್ರೀದೇವಿ, ಜ್ಯೋತಿ, ಅನನ್ಯ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...