ಕೊಪ್ಪಳ | ಭೂಗಳ್ಳರ ವಿರುದ್ಧ ಆಮ್ ಆದ್ಮಿ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಆಕ್ರೋಶ

Date:

  • ಆಮ್‌ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ
  • ಬೆಳ್ಳಂಬೆಳ್ಳಿಗೆ ಮತ ಬೇಟೆ ಆರಂಭಿಸಿದ ಆಮ್ ಆದ್ಮಿ ಅಭ್ಯರ್ಥಿ

ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಅವರು ಗಂಗಾವತಿಯ ಜೂನಿಯರ್ ಕಾಲೇಜ್ ಮೈದಾನದಲ್ಲಿ ವಾಯು ವಿಹಾರಕ್ಕೆ ಬಂದಿದ್ದ ನೂರಾರು ಸಾರ್ವಜನಿಕರನ್ನು ಭೇಟಿಮಾಡಿ, ಮತಯಾಚನೆ ಮಾಡಿದರು.

ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, “ಗಂಗಾವತಿ ನಗರದಲ್ಲಿ 150ಕ್ಕೂ ಹೆಚ್ಚು ಪಾರ್ಕ್‌ಗಳಿದ್ದು, ಅದರಲ್ಲಿ 113 ಪಾರ್ಕ್‌ಗಳು ವಾಯು ವಿಹಾರಕ್ಕೆ ಯೋಗ್ಯವಾಗಿವೆ. ಆದರೆ, ಹಲವು ಪಾರ್ಕ್‌ಗಳನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಚಾಕು ಹಿಡಿದು ಹಾಡಹಗಲೇ ಬೆದರಿಕೆ ಹಾಕಿದ ಟಾಟಾ ಏಸ್‌ ಚಾಲಕ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಭೂಗಳ್ಳರ ಹಾವಳಿಯಿಂದ ವಾಯು ವಿಹಾರಕ್ಕೆ ಬರುವವರಿಗೆ ಗಂಗಾವತಿ ನಗರದ ಜೂನಿಯರ್ ಕಾಲೇಜ್ ಮೈದಾನ ಒಂದೇ ಆಧಾರವಾಗಿದೆ. ಆದ್ದರಿಂದ ಪೊರಕೆ ಗುರುತಿಗೆ ಮತ ಹಾಕುವ ಮೂಲಕ ನನ್ನನ್ನು ಬೆಂಬಲಿಸಿದರೆ, ವಾಯುವಿಹಾರದ ಜಾಗಗಳನ್ನು ತೆರವುಗೊಳಿಸಿ ಜನರ ಉಪಯೋಗಕ್ಕೆ ಬರುವಂತೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಅಲ್ಲಿದ್ದ ಕೆಲವರು ಇದಕ್ಕೆ ಪ್ರತಿಕ್ರಿಯಿಸಿ, “ಸಾಮಾನ್ಯರು ರಾಜಕೀಯಕ್ಕೆ ಬಂದು ಅಧಿಕಾರ ಹಿಡಿದಾಗ ಮಾತ್ರ ಜನಸಾಮಾನ್ಯರ ಕಷ್ಟಗಳನ್ನು ನಿವಾರಿಸಲು ಸಾಧ್ಯ ಆಗುತ್ತದೆ. ಅದು ನಿಮ್ಮಂತ ಯುವಕರಿಂದ ಮಾತ್ರ ಸಾಧ್ಯ “ಎಂದು ತಿಳಿಸಿ ಶುಭ ಕೋರಿದರು.

ಈ ವೇಳೆ ಮುಖಂಡ ವೆಂಕಟೇಶ್, ಮನೀಶ್, ಶಿವರಾಜ್ ದೊಡ್ಡಬಸಪ್ಪ ಸೇರಿದಂತೆ ಹಲವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...