ಕೊಪ್ಪಳ | ಶಾಲೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮನವಿ

Date:

ಶಾಲೆಗಳಲ್ಲಿ ಬೋಧನಾ ಗುಣಮಟ್ಟದ ಸುಧಾರಣೆಗೆ ಪರಿಣಾಮಕಾರಿಯಾದಂತಹ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಪಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು.
       
ಕೊಪ್ಪಳ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸಾರ್ವತ್ರಿಕವಾಗಿ ಪ್ರತಿವರ್ಷವೂ ಶೈಕ್ಷಣಿಕ ಬೋಧನಾ ಗುಣಮಟ್ಟ ಕುಸಿಯುತ್ತಾ ಬಂದಿದೆ. ಪರಿಣಾಮ ಪ್ರೌಢ ಶಾಲೆಯಲ್ಲಿ ಕಾಣುತ್ತಿದೆ. ಕಳಪೆ ಗುಣಮಟ್ಟದ ಬೋಧನೆ ಮಾಡುತ್ತಿರುವುದರಿಂದ ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯುತ್ತಿದ್ದಾರೆ. ಅನರ್ಹ ಶಿಕ್ಷಕರಿಂದ ತಮ್ಮ ತರಗತಿಯ ಬೋಧನಾ ಅವಧಿಯಲ್ಲಿ ಮಕ್ಕಳಿಗೆ ಒಳಗೆ ನಡಿ, ಕೈ ಕಟ್, ಗಪ್ ಚುಪ್, ಬಾಯಿ ಮುಚ್, ಘಂಟೆ ಹೊಡೆ, ಹೊರ ನಡಿ ಅನ್ನುವಂತಾಗಬಾರದು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ಕೆಲ ತಿಂಗಳುಗಳ ಹಿಂದೆ ನಡೆಸಿದ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 7,000ಕ್ಕೂ ಹೆಚ್ಚು ಆಯಾ ಮಾಧ್ಯಮಗಳಲ್ಲಿ ವಿದ್ಯಾರ್ಥಿಗಳು ಕಲಿತ ಕನ್ನಡ, ಆಂಗ್ಲ ಭಾಷೆ ಓದಲು, ಬರೆಯಲು ಬರುತ್ತಿಲ್ಲ ಎಂಬ ಸಂಗತಿ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಗಮನ ಕೊಟ್ಟು ಸಮರ್ಥವಾಗಿ ಬೋಧಿಸುವಂತೆ ಈ ಹಿಂದಿನ ಅಧಿಕಾರಿಗಳು ಸೂಚಿಸಿದ್ದರೂ ಕೆಲ ಶಿಕ್ಷಕರು ಅನುಷ್ಠಾನಗೊಳಿಸದೆ, ವಿದ್ಯಾರ್ಥಿಗಳನ್ನೆ ಹೊಣೆಗಾರರನ್ನಾಗಿ ಮಾಡಿ ತಮ್ಮ ಜವಾಬ್ದಾರಿಯಿಂದ ನುಣಿಚಿಕೊಳ್ಳುತ್ತಾ ಬಂದಿದ್ದಾರೆ. ಮಕ್ಕಳ ಮನೋವಿಜ್ಞಾನ ಪುಸ್ತಕಗಳನ್ನು ಓದದ ಅಥವಾ ಓದಿಯೂ ವೈಜ್ಞಾನಿಕವಾಗಿ ಬೋಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮದ ಶಾಲೆಗಳಾಗಿದ್ದರೂ ಬಹುತೇಕ ವಿದ್ಯಾರ್ಥಿಗಳು ವ್ಯಾಕರಣಬದ್ಧವಾಗಿ ಕನ್ನಡವಾಗಲೀ ಆಂಗ್ಲ ಭಾಷೆಯನ್ನಾಗಲೀ ಕಲಿತಿಲ್ಲ ಅನ್ನೋದಕ್ಕಿಂತ ಕನ್ನಡ, ಆಂಗ್ಲ ಹಾಗೂ ಹಿಂದಿ ವಿಷಯಗಳನ್ನು ಸ್ಪಷ್ಟವಾಗಿ ಓದಲು ಬರೆಯಲು ಸಹ ಬಾರದ ಮಕ್ಕಳ ಸಂಖ್ಯೆ ಹೆಚ್ಚಿದೆ. ಆಯಾ ಶಾಲೆಗಳ ಮಕ್ಕಳ ಫಲಿತಾಂಶ ದಾಖಲೆಗಳನ್ನು ಪರಿಶೀಲಿಸಿ ಕಡಿಮೆ ಅಂಕ ಪಡೆದ ವಿಷಯಗಳ ಆಯಾ ಬೋಧಕರನ್ನು ತಕ್ಷಣ ಸೇವೆಯಿಂದ ತೆಗೆದು ಹಾಕಿ. ಉನ್ನತ ಅರ್ಹತಾ ಪದವಿಗಳನ್ನು ಪಡೆದ ಮಕ್ಕಳ ಮನೋವಿಜ್ಞಾನ ಓದಿ ತಿಳಿದುಕೊಂಡು ಗುಣಮಟ್ಟದಿಂದ ಬೋಧಿಸುವ ಶಿಕ್ಷಕರನ್ನು ನೇಮಕ ಮಾಡುವ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ದೃಢವಾದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ವೃತ್ತಿಪರ ಹಾಸ್ಟೆಲ್‌ ನಿರ್ಮಾಣಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹ

ಈ ವೇಳೆ ಶಾಲಾ ಪಾಲಕರ ಹೋರಾಟ ಸಮಿತಿ ಸಂಚಾಲಕ ಎಸ್ ಎ ಗಫಾರ್, ಸಂಘಟನಾ ಸಂಚಾಲಕ ಸುಂಕಪ್ಪ ಮೀಸಿ, ಭ್ರಾತೃತ್ವ ಸಮಿತಿ ಜಿಲ್ಲಾ ಸಹ ಸಂಚಾಲಕ ಚನ್ನಬಸಪ್ಪ ಅಪ್ಪಣ್ಣವರ್, ವಿಮುಕ್ತಿ ವಿದ್ಯಾ ಸಂಸ್ಥೆಯ ಕಾರ್ಯಕರ್ತ ವೀರೇಶ್ ತೆಗ್ಗಿನಮನಿ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...