ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್‌ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Date:

2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 3 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಚಂದ್ರಶೇಖರ ಮಾಲಿಪಾಟೀಲ್ ‘ಸಹಕಾರ ಕ್ಷೇತ್ರ’ಕ್ಕೆ, ದೇವೇಂದ್ರಕುಮಾರ ಪತ್ತಾರ ‘ಸಂಗೀತ ಕ್ಷೇತ್ರ’ಕ್ಕೆ ಹಾಗೂ ಬಸಪ್ಪ ಭರಮಪ್ಪ ಚೌಡ್ಕಿ ‘ಜಾನಪದ ಕ್ಷೇತ್ರ’ ಸೇವೆಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಸಪ್ಪ ಭರಮಪ್ಪ ಚೌಡ್ಕಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತೆಗ್ಗಿಹಾಳ ಗ್ರಾಮದಲ್ಲಿ ಜನಿಸಿದ್ದಾರೆ. ಬಾಲ್ಯದಿಂದಲೂ ಚೌಡ್ಕಿ ಪದ, ಗೀಗೀ ಪದ, ಶ್ರೀಕೃಷ್ಣ ಪಾರಿಜಾತ, ಮೊಹರಂ ಪದಗಳು, ತತ್ವಪದಗಳು ವಿವಿಧ ಕಲಾಪ್ರಕಾರಗಳಲ್ಲಿ ಗಾಯಕರಾಗಿ, ವಾದಕರಾಗಿ, ನಟ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಈವರೆಗೂ 4500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿರುತ್ತಾರೆ. ಅನೆಕ ರಾಜ್ಯ ಹಾಗೂ ಕೇಂದ್ರದ ಸರಕಾರಿ ಆಯೋಜಿತ ಪ್ರತಿಷ್ಟಿತ ಕಾರ್ಯಕ್ರಮಗಳಲ್ಲಿ ತಮ್ಮ ಕಲಾಪ್ರದರ್ಶನ ಮಾಡಿದ್ದಾರೆ. ತತ್ವಪದ ಹಾಗೂ ಚೌಡ್ಕಿ ಜಾನಪದ ಕಲೆ ತಮ್ಮ ಕುಟುಂಬದ ಪಾರಂಪರಿಕ ಕಲೆಯನ್ನು ಇಂದಿಗೂ ಉಳಿಸಿಕೊಂಡು ಬಂದಿದ್ದಾರೆ. ಕುಟುಂಬದ ಮೂಲ ಕಲಾಪ್ರಕಾರವನ್ನು ತಮ್ಮ ಶಿಷ್ಯ ಬಳಗಕ್ಕೆ ಕಲಿಸುತ್ತಿದ್ದಾರೆ.

ಚಂದ್ರಶೇಖರಗೌಡ ಮಾಲಿಪಾಟೀಲ್ ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಗುಮಗೇರ ಗ್ರಾಮದಲ್ಲಿ ಜನಿಸಿದರು. ಸಿಂಧನೂರಲ್ಲಿ ಬಿಎ ಪದವಿ ಮುಗಿಸಿದ್ದಾರೆ. 1978-79 ರಲ್ಲಿ ಪ್ರಥಮ ದರ್ಜೆ ಕಾಲೇಜ್ ಸಿಂಧನೂರಿನಲ್ಲಿ ವಿದ್ಯಾರ್ಥಿ ಸಂಘಕ್ಕೆ ಸಹ-ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಕಾಲೇಜ್ ದಿನಗಳಲ್ಲಿ ‌ಅನೇಕ ವಿದ್ಯಾರ್ಥಿ ಸಂಘಟನೆಯ ಜವಾಬ್ದಾರಿಯನ್ನು ಹೊತ್ತು ಕೆಲಸ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ರಾಯಚೂರು, ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ, ಜಿಲ್ಲಾ ಯುವ ಮಹಾಮಂಡಳ ನಿ., ಕೊಪ್ಪಳ, ಪಿಕಾರ್ಡ ಬ್ಯಾಂಕ್ ನಿ., ಕುಷ್ಟಗಿ, ಶ್ರೀ ಹೇಮರಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘ ನಿ.. ಕುಷ್ಟಗಿ, ಶ್ರೀ ವಿಜಯಚಂದ್ರಶೇಖರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ವಿಶ್ವಸ್ಥ ಮಂಡಳಿ ಕುಷ್ಟಗಿ ಅದ್ಯಕ್ಷರಾಗಿ ಕಾರ್ಯನಿರ್ವಿಸಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘ-ಸಂಸ್ಥೆಯ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ಬೆಂಗಳೂರು, ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಮಧ್ಯವರ್ತಿ ಬ್ಯಾಂಕ್  ರಾಯಚೂರು ಪಿಕಾರ್ಡ ಬ್ಯಾಂಕ್ ನಿ., ಕುಷ್ಟಗಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗುಮಗೇರಾ, ಶ್ರೀ ಹೇಮರಡ್ಡಿ ಮಲ್ಲಮ್ಮ ಪತ್ತಿನ ಸಹಕಾರ ಸಂಘ ಕುಷ್ಟಗಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್, ಸಾಧನಾ ಶಿಕ್ಷಣ ಸಂಸ್ಥೆ ಕುಷ್ಟಗಿ, ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ಕುಷ್ಟಗಿ ಅದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ದೇವೇಂದ್ರ ಕುಮಾರ್ ಪತ್ತಾರ ದೇವೇಂದ್ರಕುಮಾರ ಪತ್ತಾರ್ ಕೊಪ್ಪಳ ಜಿಲ್ಲೆ, ಯಲಬುರ್ಗಾ ತಾಲೂಕಿನ ಮುದೋಳ ಗ್ರಾಮದಲ್ಲಿ 14ನೇ ಡಿಸೆಂಬರ್ 1955ರಲ್ಲಿ ಜನಿಸಿದ್ದಾರೆ. ಪದ್ಮಭೂಷಣ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಹಾಗೂ ಸುಗಮ ಸಂಗೀತವನ್ನು ಗ್ವಾಲಿಯರ್ ಘರಾಣಾ ಪದ್ಧತಿಯಲ್ಲಿ ಹಾಗೂ ಪಂಚಾಕ್ಷರ ಗದಗ ಘರಾಣಾ ಪರಂಪರೆಯಲ್ಲಿ 12 ವರ್ಷಗಳ ಕಾಲ ಗುರುಕುಲ ಪದ್ಧತಿಯಂತೆ ತರಬೇತಿ ಪಡೆಯುತ್ತಾರೆ.

1978 ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ “ವಿದ್ವತ್ ಗ್ರೇಡ್ ಹಾಗೂ ಗಂಧರ್ವ ಮಹಾವಿದ್ಯಾಲಯ ಮಂಡಳಿಯ “ಸಂಗೀತ ವಿಶಾರದ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ 1983 ರಿಂದ ಆಕಾಶವಾಣಿ ಧಾರವಾಡ ಗುಲ್ಬರ್ಗ ಕೇಂದ್ರದ ಬಿ.ಹೈ ಶ್ರೇಣಿಯ ಕಲಾವಿದರಾಗಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದಾರೆ. 1982ರಲ್ಲಿ ಸಂಡೂರಿನ ಎಸ್.ಆ‌ರ್.ಎಸ್‌. ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಸೇವೆಯನ್ನು ಆರಂಭಿಸಿ ಇವರು ಗಾನಯೋಗಿ ಪಂ. ಪಂಚಾಕ್ಷರ ಗವಾಯಿಗಳ ಹೆಸರಿನಲ್ಲಿ ಸಂಗೀತ ಶಾಲೆಯನ್ನು ಆರಂಭಿಸಿ ನೂರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಗೀತ ತರಬೇತಿಯನ್ನು ನೀಡುತ್ತಾ ಬಂದಿದ್ದು, ಇವರ ಶಿಷ್ಯತ್ವದಲ್ಲಿ ಹಲವಾರು ಜನ ಕಲಾವಿದರಾಗಿ-ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮುಂದುವರೆದು ಇವರ ಸೇವೆಯು ಮುದಗಲ್ ಹಾಗೂ ಸಿಂಧನೂರು ಪಟ್ಟಣದಲ್ಲಿ ತಮ್ಮ ಸಂಗೀತ ಸಂಸ್ಥೆಯಡಿಯಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಸಂಗೀತ ಪಾಠ ಮಾಡುವುದಲ್ಲದೇ ಪ್ರತಿವರ್ಷ ಸಂಗೀತ ಸಮಾರಂಭಗಳನ್ನು ಏರ್ಪಡಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳ ಕಲಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುತ್ತಾ ಕಲಿಕೆಗೆ ಉತ್ತೇಜನ ನೀಡುತ್ತಾ ಬಂದಿದ್ದಾರೆ. ಹಾಗೂ ನಾಡಿನ ಹಿರಿಯ ಕಲಾವಿದರಿಂದ ಸಂಗೀತ ಕಛೇರಿಯನ್ನು ಏರ್ಪಡಿಸಿ ಜನರಲ್ಲಿ ಸಂಗೀತ ಬೆಳವಣಿಗೆ ಕುರಿತು ಅಭಿರುಚಿಯನ್ನು ಉಂಟು ಮಾಡಿ ಗುರು ಪುಟ್ಟರಾಜ ಗವಾಯಿಗಳ ಅಪ್ಪಣೆಯಂತೆ ಕಲಾ ಸೇವೆಗೈಯ್ಯುತ್ತ ಬಂದಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗಬ್ಬು ನಾರುತ್ತಿದೆ ಕೆಂಪಕೆರೆ ಉದ್ಯಾನವನ; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

“ಕೊಪ್ಪಳ ಜಿಲ್ಲೆಗೆ ಕಳೆದ ಬಾರಿ ಇಬ್ಬರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಬಾರಿ‌ 3 ಜನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದ್ದು ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ” ಎಂದು 2024ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...