ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

Date:

  • ಕ್ರೈಸ್ತ ಕಿಂಗ್ ಶಾಲೆಯ ಆವರಣದಲ್ಲಿದ್ದ ಮರದಲ್ಲಿ ಗೂಡು ಕಟ್ಟಿದ್ದ ಜೇನು
  • ಜೇನು ದಾಳಿಗೆ ಒಳಗಾದ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

ಜೇನುನೊಣಗಳ ದಾಳಿಗೆ ಒಳಗಾಗಿದ್ದರೂ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ನಡೆದಿದೆ.

ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಆದರ್ಶ ವಿದ್ಯಾಲಯದ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಭಾನುವಾರ(26) ನಿಗದಿಯಾಗಿದ್ದ ಪ್ರವೇಶ ಪರೀಕ್ಷೆಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ದಾಳಿಗೆ ಒಳಗಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿಯೇ ಪರೀಕ್ಷೆ ಬರೆದಿದ್ದಾರೆ. 

ಜಿಲ್ಲೆಯ ಕುಷ್ಟಗಿ ತಾಲೂಕಿನ ಬುತ್ತಿಬಸವೇಶ್ವರ ಪ್ರೌಢಶಾಲೆ ಹಾಗೂ ಜೂನಿಯರ್‌ ಕಾಲೇಜು, ಗುರುಚನ್ನಬಸವೇಶ್ವರ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಜೂನಿಯರ್‌ ಕಾಲೇಜು (ಪ್ರೌಢಶಾಲೆ ವಿಭಾಗ), ಬಾಲಕರ ಜೂನಿಯರ್‌ ವಿಭಾಗ (ಪ್ರೌಢಶಾಲೆ ವಿಭಾಗ), ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆ, ಕ್ರೈಸ್ತ ಕಿಂಗ್‌ ಶಾಲೆಗಳು ಪ್ರವೇಶ ಪರೀಕ್ಷಾ ಕೇಂದ್ರಗಳಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ, ತಳುವಗೇರಾ, ನಿಡಶೇಷಿ ಸೇರಿದಂತೆ ಹಲವು ಗ್ರಾಮಗಳಿಂದ ವಿದ್ಯಾರ್ಥಿಗಳು ಕ್ರೈಸ್ತ ಕಿಂಗ್‌ ಶಾಲೆಯಲ್ಲಿ ಪರೀಕ್ಷೆ ಬರೆಯಲು ಬಂದಾಗ ಈ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಬೆಳೆದ ಮರದಲ್ಲಿ ಜೇನುಗೂಡು ಕಟ್ಟಿದ್ದು, ಏಕಾಏಕಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಜೇನುನೊಣಗಳು ದಾಳಿ ಮಾಡಿವೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

“ಜೇನುನೊಣ ದಾಳಿಗೆ ಒಳಗಾದ ಹಲವು ವಿದ್ಯಾರ್ಥಿಗಳ ಪೈಕಿ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಒಂದು ಕೈಗೆ ಗ್ಲೂಕೋಸ್‌ ಹಾಕಿಸಿಕೊಂಡೇ ಪರೀಕ್ಷೆ ಬರೆದಿದ್ದಾರೆ. ಜೇನುನೊಣ ದಾಳಿಗೆ ಒಳಗಾದ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ಹೊರಗುಳಿದಿಲ್ಲ. ಆಸ್ಪತ್ರೆಯಲ್ಲಿ ನಮ್ಮ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿ ಮೂವರು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಿಂದಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ ಎ ರೆಡ್ಡೇರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...