ಕೊಪ್ಪಳ | ಸರ್ಕಾರಿ ಶಾಲೆಗೆ ದಾನಿಗಳಿಂದ ಡಿಜಿಟಲ್‌ ಕೊಠಡಿ ನಿರ್ಮಾಣ

Date:

  • ದೇಣಿಗೆ ಸಂಗ್ರಹದಿಂದ ಸಿದ್ದವಾದ ಡಿಜಿಟಲ್‌ ಫಲಕ
  • ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ನೌಕರರ ನೆರವು

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಡಿಜಿಟಲ್‌ ಕೊಠಡಿ ನಿರ್ಮಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಡಿಜಿಟಲ್‌ ಕೊಠಡಿ ನಿರ್ಮಾಣಕ್ಕೆ ಶಿಕ್ಷಕರು, ಎಸ್.ಡಿ.ಎಮ್.ಸಿ.ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಸರ್ಕಾರಿ ನೌಕರರು, ಯುವಕರು, ಗ್ರಾಮಸ್ಥರು ಆರ್ಥಿಕ ನೆರವು ನೀಡಿ ವಿದ್ಯಾರ್ಥಿಗಳ ಆಧುನಿಕ ಶಿಕ್ಷಣಕ್ಕೆ ನೆರವಾಗಿದ್ದಾರೆ.

ಡಿಜಿಟಲ್ ಕೊಠಡಿ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಗ್ರಾಮದ ಸರ್ಕಾರಿ ನೌಕರ ರಮೇಶ ಬೂದಿಹಾಳ ಮಾತನಾಡಿ, “ಸರ್ಕಾರಿ ಶಾಲೆಯ ಮಕ್ಕಳು ಎಲ್ಲ ಸೌಕರ್ಯ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಬೇಕು ಎಂಬ ಹಂಬಲದಿಂದ ಸಮಾನ ಮನಸ್ಕರು ಈ ಕಾರ್ಯವನ್ನು ಮಾಡಿದ್ದೇವೆ” ಎಂದು ಹರ್ಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಲಯ ಪಾಲಕ ಶರಣಪ್ಪ ಚಕ್ರಗಟ್ಟಿ ಮಾತನಾಡಿ, “ನಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಹುತೇಕರು ರೈತಾಪಿ ಜನರ ಮಕ್ಕಳಾಗಿದ್ದು, ತಂತ್ರಜ್ಞಾನದ ಮಾಹಿತಿಯ ಬಗ್ಗೆ ಹೆಚ್ಚಿನ ಮಾಹಿತಿಯಿರುವುದಿಲ್ಲ. ಸರ್ಕಾರದ ಯಾವುದೇ ಅನುದಾನವಿಲ್ಲದೆ ದಾನಿಗಳ ಮೂಲಕ ಹಣ ಸಂಗ್ರಹಿಸಿ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಿ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡಲು ಮುಂದಾಗಿರುವುದು ಹೆಮ್ಮೆಯ ವಿಷಯ” ಎಂದು ಹೇಳಿದರು.

ಮುಖ್ಯ ಶಿಕ್ಷಕರಾದ ವೀರೇಶ ನಿಡಗುಂದಿ ಮಾತನಾಡಿ, “ದಾನಿಗಳು ಹಾಗೂ ಗ್ರಾಮಸ್ಥರ ಪ್ರೋತ್ಸಾಹದಿಂದ 2 ಲಕ್ಷ ವೆಚ್ಚದ ಶಾಲಾ ಕೊಠಡಿಯಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಲಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್‌ ಸ್ಮಾರ್ಟ್‌ ಕ್ಲಾಸ್‌ಗಳು ಮಕ್ಕಳ ಭವಿಷ್ಯಕ್ಕೆ ತುಂಬಾ ಸಹಕಾರಿಯಾಗಿವೆ. ಇದನ್ನು ಅರಿತು ವಿದ್ಯಾರ್ಥಿಗಳಿಗೆ ಡಿಜಿಟಲ್‌ ಸ್ಮಾರ್ಟ್‌ ಕ್ಲಾಸ್‌ ಒದಗಿಸಿರುವುದು ನಿಜಕ್ಕೂ ಶ್ಲಾಘನೀಯ” ಎಂದು ಹೇಳಿದರು.

ಶಾಲೆಯ ವಿದ್ಯಾರ್ಥಿಗಳು ಮಾತನಾಡಿ, “ಇಂಗ್ಲಿಷ್, ಕನ್ನಡ ವ್ಯಾಕರಣ, ರೈಮ್ಸ್, ಇಂಗ್ಲಿಷ್ – ಕನ್ನಡ ಪದ್ಯಗಳು, ಕವಿ – ಕಾವ್ಯ-ಪರಿಚಯ, ವಿಜ್ಞಾನ ಮತ್ತು ಗಣಿತ ಪ್ರಯೋಗಗಳ ಎಲ್ಲ ಪಾಠಗಳು ಉದಾಹರಣೆ ಸಮೇತ ಅತ್ಯುತ್ತಮ ಗುಣಮಟ್ಟದ ಧ್ವನಿ ಮತ್ತು ಚಿತ್ರಗಳ ಸಹಿತ ಪಾಠಗಳನ್ನು ಕಣ್ಣಿಗೆ ಕಟ್ಟುವಂತೆ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳ ಮುಂದೆ ಪ್ರತಿದಿನ ಪ್ರದರ್ಶಿಸಲಾಗುತ್ತದೆ ಈ ಮೂಲಕ ಫಲಕದ ಪಾಠಗಳಿಗಿಂತಲೂ ಈ ಸ್ಮಾರ್ಟ್ ಕ್ಲಾಸ್ ಪಾಠಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಸಾಧ್ಯವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಸವಗೌಡ ಬಯ್ಯಾಪೂರ, ದೋಟಿಹಾಳ, ಈರಣ್ಣ ಕರಡಕಲ್, ಮುಖ್ಯ ಶಿಕ್ಷಕ ಗುರಪ್ಪ ಕುರಿ, ಗ್ರಾಮ ಪಂಚಾಯತಿ ಸದಸ್ಯರು, ಎಸ್‌ಡಿಎಂಸಿ ಅದ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...