ಕೊಪ್ಪಳ | ಬಂಗಾರ ಕದ್ದು ಕಲ್ಲು ಕೊಟ್ಟು ಹೋದ ನಕಲಿ ಪೊಲೀಸ್; ಮಹಿಳೆ ಕಂಗಾಲು

Date:

ಪೊಲೀಸರ ಸೋಗಿನಲ್ಲಿ ಬಂದವರನ್ನು ವಂಚಕರೆಂದು ತಿಳಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ.

ʼಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆ’ ಎಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಮೋಸ ಮಾಡಲಾಗಿದೆ. ಮನೆಗೆ ತೆರಳಿ ನೋಡಿದ ಮಹಿಳೆ ಕಲ್ಲುಗಳನ್ನು ಕಂಡು ಆಘಾತಗೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಮಧ್ಯಾಹ್ನ ಸುಮಾ ಒಬ್ಬರೇ ಮನೆಯಿಂದ ಬ್ಯಾಂಕ್‌ಗೆ ಹೋಗುತ್ತಿದ್ದರು. ಆ ವೇಳೆ ಇಬ್ಬರು ಆಗಂತುಕರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ‘ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ’ ಎಂದು ಹೇಳಿದ್ದಾರೆ.

ಮಹಿಳೆ ಅನುಮಾನಗೊಂಡು, ʼನೀವು ಪೊಲೀಸ್‌ ಡ್ರಸ್ ಹಾಕಿಲ್ಲʼ ಎಂದಿದ್ದಾರೆ. ‘ಪೊಲೀಸ್‌ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗುವುದಿಲ್ಲ. ಅದಕ್ಕೆ ಆ ಡ್ರಸ್ ಹಾಕಿಲ್ಲ’ ಎಂದು ವಂಚಕರು ಮಹಿಳೆಗೆ ಸಮಜಾಯಿಷಿ ಹೇಳಿ ನಂಬಿಸಿದ್ದಾರೆ. ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ ಉಂಗುರವನ್ನು ಪೇಪರ್ ಹಾಳೆಯಲ್ಲಿ ಸುತ್ತಿ ಮರಳಿ ಕೊಟ್ಟಿದ್ದಾರೆ.

ಬಳಿಕ ಸುಮಾ ಅವರ ಕೊರಳಲ್ಲಿದ್ದ ಬಂಗಾರದ ಸರವನ್ನು ಅವರಿಂದ ಪಡೆದು, ಪೇಪರ್ ಹಾಳೆಯಲ್ಲಿ ಮಡಚಿಕೊಡುವುದಾಗಿ ನಂಬಿಸಿ ಕಲ್ಲು ಸುತ್ತಿದ ಹಾಳೆಯ ಕವರ್‌ ನೀಡಿ ಮನೆಯಲ್ಲಿ ಭದ್ರವಾಗಿ ಇರಿಸುವಂತೆ ಹೇಳಿ ಸರ ಕದ್ದು ಪರಾರಿಯಾಗಿದ್ದಾರೆ.

ಈ ಸುದ್ಧಿ ಓದಿದ್ದೀರಾ?: ಕೊಪ್ಪಳ | ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಒತ್ತಾಯ

ಮಹಿಳೆ ಮನೆಗೆ ಹೋಗಿ ಹಾಳೆ ಬಿಚ್ಚಿ ನೋಡಿದಾಗ ಅದರಲ್ಲಿ ಕಲ್ಲುಗಳು ಇರುವುದು ಕಂಡು ಕಂಗಾಲಾಗಿದ್ದಾರೆ. ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ನಡೆದ ವಿಷಯ ತಿಳಿಸಿದ್ದಾರೆ. ಪೊಲೀಸರ ಸೋಗಿನಲ್ಲಿ ಕಳ್ಳರು ತೋರಿದ ಚಳಕದಿಂದ ಸುಮಾ ಆತಂಕಗೊಂಡಿದ್ದಾರೆ. ಈ ಕುರಿತು ಪರಿಶೀಲನೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...