ಕೊಪ್ಫಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ವಿರೋಧ; ಕೋರ್ಟ್ ಮೊರೆ ಹೋಗುವ ಎಚ್ಚರಿಕೆ

Date:

ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯುಕೆಇಎಂ ಲಿ. ಕಂಪನಿಯು ಗೊಂಡಬಾಳ ಗ್ರಾಮ ಪಂಚಾಯತಿಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ಗ್ರಾಮ ಪಂಚಾಯತಿ ತಕರಾರು ಅರ್ಜಿ ಸಲ್ಲಿಸಲು ಬಹಿರಂಗ ಸೂಚನೆ ಹೊರಡಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ ಹಾಗೂ ಸುತ್ತಲಿನ ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿ, ತಕರಾರು ಅರ್ಜಿ ಸಲ್ಲಿಸಿದ್ದಾರೆ. ಕಾರ್ಖಾನೆ ಸ್ಥಾಪಿಸಲು ಮುಂದಾದರೆ ಕೋರ್ಟ್‌ ಮೊರೆ ಹೋಗುವುದಾಗಿ ಹಾಗೂ ಬೃಹತ್‌ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಈಗಾಗಲೇ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆ ಹಾಗೂ ವಿಸ್ತರಣೆಯನ್ನು ವಿರೋಧಿಸಿ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕೆಲವು ತಿಂಗಳ ಹಿಂದೆ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ಸಾವಿರಾರು ಜನ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಮತ್ತೆ ಮುದ್ದಾಬಳ್ಳಿ ಗ್ರಾಮದಲ್ಲಿ ಕಾರ್ಖಾನೆಯ ವಿರುದ್ಧ ಕೂಗು ಕೇಳಿ ಬರುತ್ತಿದೆ.

ಈಗಾಗಲೇ ಕಾರ್ಖಾನೆಯ ಧೂಳು, ಹೊಗೆ ತಾಲೂಕಿನ ಸುಮಾರು 30 ಹಳ್ಳಿಯ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ಕೊಪ್ಪಳ ಪರಿಸರ ಪ್ರೇಮಿಗಳು ಹಾಗೂ ಜಿಲ್ಲಾ ಬಚಾವೋ ಆಂದೋಲನ ಹೋರಾಟಗಾರರು ಕೊಪ್ಪಳದ ಸುತ್ತಮುತ್ತಲೂ ಯಾವುದೇ ಹೊಸ ಕಾರ್ಖಾನೆಗಳು ಸ್ಥಾಪನೆಯಾಗುವುದು ಬೇಡ ಎಂದು ಬೃಹತ್ ಮಟ್ಟದ ಹೊರಾಟ ಮಾಡಿ ಸರಕಾರವನ್ನು ಎಚ್ಚರಿಸಿದ್ದೂ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಮುದ್ದಾಬಳ್ಳಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದು, ಈಗಾಗಲೇ ಕಂಪನಿ ಕಾರ್ಖಾನೆ ಸ್ಥಾಪನೆಗೆ ಸರಕಾರದ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು; ಕೊನೆಯದಾಗಿ ಗೊಂಡಬಾಳ ಪಂಚಾಯತಿಯಿಂದ ನಿರಪೇಕ್ಷಣ ಪಡೆಯಲು ಅರ್ಜಿ ಸಲ್ಲಿಸಿದೆ.

ಈ ಕುರಿತು ಗೊಂಡಬಾಳ ಗ್ರಾಮ ಪಂಚಾಯತಿಯು ಬಹಿರಂಗ ನೋಟಿಸ್ ಹೊರಡಿಸಿದ್ದು, ಸಾರ್ವಜನಿಕರು ಗ್ರಾಮಸ್ಥರು ತಕರಾರು ಅರ್ಜಿಗಳಿದ್ದಲ್ಲಿ ಕಾಲಮಿತಿಯಲ್ಲಿ ಗ್ರಾಮ ಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಗಳ ಜನರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ: ಕೊಪ್ಪಳ | ವಿಶ್ವಕ್ಕೆ ಭಾರತ ಕೊಟ್ಟ ಅಮೂಲ್ಯ ಸಂಪತ್ತು ʼಯೋಗʼ: ಕುಲಕರ್ಣಿ

ಯಾವುದೇ ಕಾರಣಕ್ಕೂ ಮುದ್ದಾಬಳ್ಳಿ ಗೊಂಡಬಾಳ ಸೀಮಾ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವುದು ಬೇಡ
ಎನ್ನುವ ಕೂಗು ಈ ಹಿಂದೆಯೂ ಪ್ರಬಲವಾಗಿ ವ್ಯಕ್ತವಾಗಿತ್ತು. ಈ ಹಿಂದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಅಹವಾಲು ಸಭೆಯಲ್ಲೂ ಸಹಿತ ನೂರಾರು ರೈತರು ನಮಗೆ ಸಕ್ಕರೆ ಕಾರ್ಖಾನೆ ಬೇಡ ಎನ್ನುವಂತ ತಕರಾರು ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು.

ಇವೆಲ್ಲ ಬೆಳವಣಿಗೆಗಳ ಮಧ್ಯೆಯು ಕಾಣದ ರಾಜಕೀಯ ಆಟದಿಂದ ಮುದ್ದಾಬಳ್ಳಿ ಯುಕೆಇಎಂ ಕಂಪನಿಯು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಹವಣಿಸುತ್ತಿದೆ. ಕಾರ್ಖಾನೆಯ ಸ್ಥಾಪನೆಗೆ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ. ಆದರೆ ಜನರು ಇದಕ್ಕೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತರು ದಿಢೀರ್ ಪ್ರತಿಭಟನೆ ನಡೆಸಿ ಗ್ರಾಪಂಗೆ ತಕರಾರು ಅರ್ಜಿ ಸಲ್ಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೋರ್ಟ್ ಮೋರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...