ಕೊಪ್ಪಳ | ಅಂತರ್ಜಾತಿ ವಿವಾಹವಾಗಿ ಕೊಲೆಗೀಡಾಗಿದ್ದ ಯುವತಿಯ ಮನೆಗೆ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭೇಟಿ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿ, ಮೃತ ಯುವತಿಯ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ ರಾಜಶೇಖರ ಹಿಟ್ನಾಳ್ ಭೇಟಿ ನೀಡಿ, ಸಾಂತ್ವನ ಹೇಳಿದರು.

ಮರಿಯಮ್ಮ ಮಾದಿಗ ಸಮುದಾಯ ಯುವತಿಯನ್ನು ನಾಯಕ ಸಮುದಾಯದ ಯುವಕ ವಿವಾಹವಾಗಿ ಜಾತಿ ಎಂಬ ಕಾರಣಕ್ಕೆ ಕುಟುಂಬಸ್ಥರು ಚಿತ್ರಹಿಂಸೆ ನೀಡಿ ವಿಷವುಣಿಸಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಈಗಾಗಲೇ ಯುವಕನ ಕುಟುಂಬದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿದ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಪಾಲಕರು-ಸಾರ್ವಜನಿಕರು ಯಾವುದೇ ಕಾರಣಕ್ಕೂ ಭಯಪಡಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಲಾಗುವುದು. ಇಂತಹ ಘಟನೆಗಳು ಆಗಲಾರದಂತೆ ಬಿಗಿ ಭದ್ರತೆ ವಹಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಿಯಮ್ಮ ಮನೆಯ ಕುಟುಂಬಕ್ಕೆ ವಿಶೇಷ ಅನುದಾನದಲ್ಲಿ ಪರಿಹಾರ ಒದಗಿಸಲಾಗುವುದು. ಕೊಪ್ಪಳ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಪರಿಶಿಷ್ಟರ ಮೇಲೆ ದಬ್ಬಾಳಿಕೆ ,ದೌರ್ಜನ್ಯ ನಿರಂತರ ನಡೆಯುತ್ತಿದೆ.ಪ್ರಕರಣಗಳ ಮೇಲೆ ಕಠಿಣ ನಿಗಾ ವಹಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದ ಅವರು, ಜಿಲ್ಲೆಯಲ್ಲಿ ಜಾತಿ ಅಸ್ಪಶ್ಯತೆ ಆಚರಣೆಗಳ ಮೇಲೆ ನಿಗಾ ವಹಿಸಿ, ಕಡಿವಾಣ ಹಾಕಬೇಕು ಎಂದು ಪೋಲಿಸರಿಗೆ ನಿರ್ದೇಶನ ನೀಡಿದರು.

WhatsApp Image 2024 09 15 at 22.58.08

ಈ ವೇಳೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ, ಜಿಲ್ಲಾಧಿಕಾರಿ ನಲೀನ ಅತುಲ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ರೆಡ್ಡಿ ಹೊಸಮನಿ, ದಲಿತ ಮುಖಂಡ ಪಾಮಣ್ಣ ಅರಳಿಗನೂರು ಇನ್ನಿತರರು ಹಾಜರಿದ್ದರು.

ಇದನ್ನು ಓದಿದ್ದೀರಾ? ಚಿಂತಾಮಣಿ | ವರದಕ್ಷಿಣೆ ಕಿರುಕುಳ: ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿಯಾಗಿದ್ದಾಳೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...