ಕೊಪ್ಪಳ | ಮಾದಿಗ ಯುವತಿಯ ಕೊಲೆ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ದಲಿತ ಪರ ಸಂಘಟನೆ ಒತ್ತಾಯ

Date:

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದ ದಲಿತ ಯುವಕನ ಕೊಲೆ ಹಾಗೂ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದ ದಲಿತ ಯುವತಿಯ ದಾರುಣ ಹತ್ಯೆ ಮಾಡಲಾಗಿದೆ. ಈ ಎರಡೂ ಪ್ರಕರಣದ ಎಲ್ಲ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯಿಸಿ ದಲಿತ ಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಗಂಗಾವತಿ ನಗರದ ಅಂಬೇಡ್ಕರ್ ವೃತ್ತದಿಂದ ಬಾಬು ಜಗಜೀವನ್ ರಾವ್ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಸ್ವಾತಂತ್ರ ಬಂದು 75 ವರ್ಷ ಕಳೆದರೂ ಸಹ ಇಂದಿಗೂ ದಲಿತರ ಮೇಲೆ ಆಗುತ್ತಿರುವ ಜಾತಿ ನಿಂದನೆ, ಕಿರುಕುಳ, ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ದುರಂತ. ಇನ್ನೆಷ್ಟು ದಲಿತ ಸಮುದಾಯದ ಜನರು ಬಲಿಯಾಗಬೇಕು. ಇದಕ್ಕೆ ಕಡಿವಾಣ ಇಲ್ಲವೇ ಎಂದು ಪ್ರಶ್ನಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ಕಂಡು ಬಂದರೂ ಇದು ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಕಾಲ ಎಷ್ಟೇ ಬದಲಾದರೂ, ಆಡಳಿತಾರೂಢ ಸರ್ಕಾರಗಳು ಏನೇ ಕಾನೂನುಗಳು ತಂದರು, ಮರ್ಯಾದಾಗೇಡು ಹತ್ಯೆ ಎನ್ನುವಂತಹ ಇಂತಹ ಸಾವುಗಳಿಂದ ದೂರಾಗುವುದು ಯಾವಾಗ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ಸಮುದಾಯಕ್ಕೆ ಸೇರಿದಂತಹ ಹನುಮಯ್ಯ ಎಂಬ ಯುವಕ, ಮರಿಯಮ್ಮ ಎಂಬ ಪರಿಶಿಷ್ಟ ಜಾತಿ( ಮಾದಿಗ) ಸಮುದಾಯದ ಯುವತಿಯನ್ನು ಪ್ರೀತಿಸಿ, ಮದುವೆಯಾಗಿದ್ದ ಯುವಕ, ತನ್ನ ಪ್ರೀತಿಯನ್ನೇ ಮರೆತು ಜಾತಿ ಎಂಬ ಕಾರಣಕ್ಕೆ ಕೊಲೆಗೈದಿದ್ದಾನೆ. ಮದುವೆಯಾದ ಕೆಲ ದಿನಗಳಿಂದ ಮರಿಯಮ್ಮಳ ಗಂಡ ಹಾಗೂ ಅತ್ತೆ , ಮಾವ ಇತರರು ಸೇರಿ ಯುವತಿಗೆ ಮಾನಸಿಕ ಹಿಂಸೆ ನೀಡಿ, ಹೊಡೆದು ಬಡಿದು, ಜಾತಿನಿಂದನೆ ಮಾಡಿ ಕೊನೆಗೆ ಊಟದಲ್ಲಿ ವಿಷವುಣಿಸಿ ಹತ್ಯೆ ಮಾಡಿದ್ದಾರೆ ಎಂದು ದೂರಿದರು.

ಯುವಕನ ಕುಟುಂಬವು ಗ್ರಾಮದಲ್ಲಿ ತಳ ಸಮುದಾಯಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗುಂಡಾಗಿರಿಗಳಂತೆ ವರ್ತಿಸುವುದರಿಂದ ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಪ್ರಕರಣಗಳು ದಾಖಲಾಗಿರುತ್ತದೆ. ಕಾನೂನಿನ ಭಯವಿಲ್ಲದೆ ಅಮಾಯಕರನ್ನು ಭಯದಲ್ಲಿರುವಂತೆ ವಾತಾವರಣ ನಿರ್ಮಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಸಮಾಜದಲ್ಲಿ ಸುಧಾರಣೆ ತರಲಿಕ್ಕಾಗಿ ನೈತಿಕತೆಯ ಸ್ವಾತಂತ್ರ್ಯ ಅಭಿಯಾನ: ಅರ್ಷಿಯಾ ಬೇಗಂ

ಕೊಲೆಗೈದ 13 ಜನ ಆರೋಪಿಗಳ ಪೈಕಿಯಲ್ಲಿ ಕೇವಲ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆ ನೀಡಬೇಕೆಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹುಲಗೇಶ್ ದೇವರಮನಿ, ಮರಿಸ್ವಾಮಿ ಬರಗೂರು, ಐಹೊಳೆ ದೇವಣ್ಣ, ದುರ್ಗಪ್ಪ, ಅಂಬಣ್ಣ ವಟಪರ್ವಿ, ಕರಿಯಪ್ಪ ಗುಡಿಮನಿ, ದುರ್ಗಪ್ಪ, ಕನಕಗಿರಿ ಪಾಮಣ್ಣ ಅರಳಿಗನೂರ್, ಹುಸನಪ್ಪ ಹಂಚಿನಾಳ, ಅಜಯ್ ಹಾಗೂ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...