ಕೊಪ್ಪಳ | ಮೀಸಲಾತಿ ರದ್ದು ವಿರೋಧಿಸಿ ಬೀದಿಗಿಳಿದ ಮುಸ್ಲಿಂ ಮುಖಂಡರು

Date:

  • ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ
  • ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಮನವಿ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ ಮಾ.24 ರಂದು ನಡೆದ ಸಂಪುಟ ಸಭೆಯಲ್ಲಿ ಮುಸ್ಲಿಮ್ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ ಕೊಪ್ಪಳ ಜಿಲ್ಲೆಯ ಮುಸ್ಲಿಮ್‌ ಸಮುದಾಯದವರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಕೊಪ್ಪಳದ ಅಶೋಕ ವೃತ್ತದ ಬಳಿ ಆಗಮಿಸಿದ್ದ ನೂರಾರು ಮುಸ್ಲಿಮರು ಕೊಪ್ಪಳ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ“ಬಿಜೆಪಿ ಸರ್ಕಾರದ ತೀರ್ಮಾನವು ಅಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದದಲ್ಲಿ ಧರ್ಮಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು” ಎಂದು ವಿವರಿಸಿದ್ದಾರೆ.

“ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ಮತ್ತು ಮುಸ್ಲಿಮರು ಧಾರ್ಮಿಕ ಅಲ್ಪಸಂಖ್ಯಾತರು ಎಂಬುದು ಅವರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆಯಲು ಕಾರಣವಾಗುವುದಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಹಾಸನ | ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣಕ್ಕೆ ವಿರೋಧ; ಪ್ರತಿಭಟನೆಗೆ ಕರೆ

ಕರ್ನಾಟಕ ಹೈ ಕೋರ್ಟ್ (1979ರ ಏ.9 ರಂದು ಸೋಮಶೇಖರಪ್ಪ ಮತ್ತು ಇತರರು ಹಾಗೂ ಕರ್ನಾಟಕ ಸರ್ಕಾರ ಪ್ರಕರಣದಲ್ಲಿ) ಹೇಳಿರುವುದು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಿರುವುದು ದೃಢವಾಗುತ್ತದೆ” ಎಂದು ಆರೋಪಿಸಿದ್ದಾರೆ.

“ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗದಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತ ದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕೆಂದು ಗೌರವನ್ವಿತ ರಾಜ್ಯಪಾಲರಾದ ತಾವುಗಳು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿಕೊಂಡು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಪತ್ರ ರವಾನಿಸಿದರು.

ಪ್ರತಿಭಟನೆಯಲ್ಲಿ ಮಹಮದ್ ಸಲೀಂ ಮಂಡಲಗಿರಿ, ಅಮ್ಜಾದ್ ಪಾಷಾ, ಖದೀಫ್ ಬಾಸುರ್ ಸಾಬ್, ಕಾಟನ್ ಬಾಷಾ, ಜೆಡಿಎಸ್ ಮುಖಂಡ ವೀರೇಶ್ ಮಹಾಂತಯ್ಯ ಮಠ, ಯಮನೂರಪ್ಪ ನಾಯಕ್, ಮಲ್ಲು ಪೂಜಾರ್, ಮಾನ್ವಿ ಪಾಷಾ, ಹುಸೇನ್ ಪೀರ್ ಮುಜಾವರ್, ರಹಿಮ್ ಮಾಕಂದಾರ್, ಆರ್ ಎಂ ರಫಿ, ಆದಿಲ್ ಪಟೇಲ್, ಆಯುಬ್ ಅಡ್ಡೆ ವಾಲೆ, ಹಾಜಿ ಹುಸೇನ್, ಸಿರಾಜ್ ಕೋತ್ಕಾರ್, ಸಲೀಂ ಗೊಂಡಬಾಳ, ನಿಜಮ ಮಾಳೆ ಕೊಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...