ಕೊಪ್ಪಳ | ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿಹೋದ ನರೇಗಾ ಕಾರ್ಮಿಕ

Date:

ನರೇಗಾ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್‌ನಲ್ಲಿ ನಿನ್ನೆ ನಡೆದಿದೆ.

ಬಸವೇಶ್ವರ ಕ್ಯಾಂಪ್‌ ನಿವಾಸಿ ಹನುಮಂತಪ್ಪ ಆದಾಪುರ ಕೊಚ್ಚಿಹೋದ ಕಾರ್ಮಿಕನೆಂದು ಗುರುತಿಸಲಾಗಿದೆ.

ಕ್ಯಾಂಪ್‌ನಲ್ಲಿರುವ ನಾಲಾದಲ್ಲಿ ಕಳೆದ 7 ದಿನಗಳಿಂದ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಹನುಮಂತಪ್ಪ ಆದಾಪುರ ಪಕ್ಕದಲ್ಲಿಯೇ ಇರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಹೋಗುವಾಗ ಜಾರಿ ನೀರಿಗೆ ಬಿದ್ದಿದ್ದಾನೆ. ಗಮನಿಸಿದ ಯುವಕರು ಹನುಮಂತಪ್ಪನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ನೀರಿನ ರಭಸಕ್ಕೆ ಹನುಮಂತಪ್ಪ ಕೊಚ್ಚಿ ಹೋಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 17 at 4.36.03 PM 1

ಮಾಹಿತಿ ತಿಳಿದ ಕೂಡಲೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಖಚಿತಪಡಿಸಿಕೊಂಡಿದ್ದಾರೆ. ತೆಪ್ಪದ ಮೂಲಕ ಕೊಚ್ಚಿ ಹೋದ ಹನುಮಂತಪ್ಪನನ್ನು ಹುಡುಕಲಾಗುತ್ತಿದೆ ಎಂದು ಪಿಡಿಒ ಲಕ್ಷ್ಮಣ ತಿಳಿಸಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರಿಗೆ ತಾಪಂ ಇಒ ಕೆ. ರಾಜಶೇಖ‌ರ್ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ.

ಕಾಲುವೆಯಲ್ಲಿ ಜಾರಿ ಬಿದ್ದು ನೀರು ಪಾಲಾದ ವ್ಯಕ್ತಿಯ ಮೃತದೇಹವೇ ಸಿಕ್ಕಿಲ್ಲ. ತೆಪ್ಪದ ಮೂಲಕ ಪತ್ತೆಗೆ ಗ್ರಾಪಂ ಆಡಳಿತ ಮಂಡಳಿ ಮುಂದಾಗಿದೆ. ಈ ನಡುವೆ ನರೇಗಾ ಕಾರ್ಮಿಕರು ತಾಪಂ ಇಒ ರಾಜಶೇಖರಗೆ ಪರಿಹಾರ ಧನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

WhatsApp Image 2025 03 17 at 4.36.03 PM

ಇದನ್ನೂ ಓದಿ: ಕೊಪ್ಪಳ | ಪ್ರವಾಸಿಗರಿಗೆ ರಕ್ಷಣೆ ಇಲ್ಲ; ಎಲ್ಲಾ ಸಮಸ್ಯೆಗೂ ಹೆಣ್ಣನ್ನು ದೂಷಿಸುವುದು ಸರಿಯೇ?

ಈ ವೇಳೆ ಗಂಗಾವತಿ ಗ್ರಾಮೀಣ ಠಾಣೆ ಪಿಎಸ್‌ಐ ವೆಂಕಟೇಶ ಚವ್ಹಾಣ, ತಾಪಂ ಸಹಾಯಕ ನಿರ್ದೇಶಕಿ ಶೆರಪೊನ್ನಿಸಾ ಬೇಗಂ, ಜೆಇ ಕೊಟ್ರೇಶ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...