ಕೊಪ್ಪಳ | ಫೆ.22ರಂದು ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ವಿಚಾರ ಸಂಕೀರ್ಣ

Date:

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ನಾಳೆ (ಫೆ.22) ನಗರದ ಸಾಹಿತ್ಯ ಭವನದಲ್ಲಿ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟದೂರ ಹೇಳಿದರು.

“ಕಾರ್ಯಕ್ರಮಕ್ಕೆ ಪರಿಸರವಾದಿ, ವಿಜ್ಞಾನಿ ನಾಗೇಶ್ ಹೆಗಡೆ, ಪರಿಸರ ತಜ್ಞ ಹೇಮಂತ್ ರಾಮಡಗಿ, ಕೈಗಾರಿಕೆಗಳಿಂದ ತೊಂದರೆ ಅನುಭವಿಸುತ್ತಿರುವ ಸಾಮಾನ್ಯ ಜನಗಳು ಹಾಗೂ ಪರಿಸರ ಪ್ರೇಮಿಗಳು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಗಿಣಿಗೇರಿ ಸುತ್ತಮುತ್ತಲಿನ ಬೃಹತ್ ಕೈಗಾರಿಕೆಗಳಿಂದ ಈಗಾಗಲೇ ಪರಿಸರ ನಾಶ, ರೈತರ ಜಮೀನು ಒತ್ತುವರಿ, ಜನಗಳ ಆರೋಗ್ಯ, ಕೃಷಿ ಬೆಳೆ ಸರ್ವನಾಶವಾಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಮತ್ತೊಂದು ಬೃಹತ್ ಕೈಗಾರಿಕೆ ಮಾಡುವುದರಿಂದ ಇರುವ ಅಲ್ಪಸ್ವಲ್ಪ ಭೂಮಿ ಕಳೆದುಕೊಳ್ಳುವುದರ ಜೊತೆಗೆ ಪರಿಸರ ನಾಶಕ್ಕೆ ನಾಂದಿ ಹಾಡಿದಂತಾಗುತ್ತದೆ. ಇದನ್ನು ಸಮಿತಿಯು ಉಗ್ರವಾಗಿ ಖಂಡಿಸುತ್ತದೆ. ಜನ ವಸತಿ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಬಾರದು. ಅಣು ವಿದ್ಯುತ್ ಸ್ಥಾವರ ಕೂಡ ಜನವಸತಿ ಪ್ರದೇಶಗಳಲ್ಲಿ ನಿರ್ಮಿಸಬಾರದು. ಈ ಎಲ್ಲ ವಿಷಯಗಳ ಕುರಿತು ಜನಗಳಿಗೆ ತಜ್ಞರಿಂದ, ಪರಿಸರವಾದಿಗಳಿಂದ, ಹೋರಾಟಗಾರರಿಂದ ಅರಿವು ಮೂಡಿಸಲು ಮತ್ತು ಬಾಧಿತ ಜನಗಳ ಅಳಲು ತೋಡಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಈ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೊಪ್ಪಳದ ಪರಿಸರ ಪ್ರೇಮಿಗಳು ಹಾಗೂ ಪ್ರಜ್ಞಾವಂತ ನಾಗರಿಕರು ಭಾಗವಹಿಸಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಡಾಯಿ ಪ್ರಕಾಶಕ ಮತ್ತು ಸಾಮಾಜಿಕ ಹೋರಾಟಗಾರ ಬಸವರಾಜ್ ಸೂಳಿಬಾವಿ ಮಾತನಾಡಿ, “ನಾವು ಕೈಗಾರಿಕಾ ವಿರೋಧಿಗಳಲ್ಲ. ಆದರೆ ಒಂದೇ ಪ್ರದೇಶದಲ್ಲಿ ಬೃಹತ್ ಕೈಗಾರಿಕೆಗಳನ್ನು ನಿರ್ಮಿಸಿ ಜನರಿಗೆ ಮಾರಕವಾಗಿರುವ ವಿಷ ಅನಿಲ ಮತ್ತು ಧೂಳು ಇನ್ನಿತರ ಹಾನಿಕಾರಕ ತೊಂದರೆ ಉಂಟು ಮಾಡುತ್ತಿರುವ ಕಾರ್ಖಾನೆಗಳ ಮತ್ತು ಅಧಿಕಾರಿಗಳ ವಿರುದ್ಧ ನಮ್ಮ ಹೋರಾಟ. ಕೂಡಲೇ ೀ ಕುರಿತು ಕ್ರಮ ಕೈಗೊಳ್ಳಬೇಕೆಂದು” ಹೇಳಿದರು.

ಡಿ.ಎಚ್ ಪೂಜಾರ್ ಅವರು ಮಾತನಾಡಿ, “ಕೈಗಾರಿಕಾ ಕಾನೂನು ಉಲ್ಲಂಘನೆ ಮಾಡಿ ರೈತರ ಮತ್ತು ಕಾರ್ಮಿಕರ ಎಲ್ಲಾ ಹಕ್ಕುಗಳನ್ನು ದಮನ ಮಾಡಿ ಕಾರ್ಖಾನೆಯ ಮಾಲಿಕರು ಮೆರೆಯುತ್ತಿದ್ದಾರೆ. ರೈತರ ಜಮೀನು ಮತ್ತು ಸಾರ್ವಜನಿಕ ಕೆರೆಗಳನ್ನು ನುಂಗಿ ಕಾನೂನು ವಿರೋಧಿ ನಡೆಯನ್ನು ಬಿಎಸ್‌ಪಿಎಲ್ ಕಂಪನಿ ಮಾಡುತ್ತಿದೆ. ಈ ಕಂಪನಿಯ ನಡೆಯ ವಿರುದ್ಧ ಹಲವಾರು ವರ್ಷಗಳಿಂದ ನಾವು ಹೋರಾಟವನ್ನು ಸಂಘಟಿಸಿದ್ದೇವೆ ಮತ್ತು ಕೋರ್ಟ್ ಮೆಟ್ಟಿಲು ಏರಿದ್ದೇವೆ. ನ್ಯಾಯಕ್ಕಾಗಿ ಮುಂದೆಯೂ ಹೋರಾಡುತ್ತೇವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಫೆ.23 ರಂದು ʼನಿಮ್ಮೊಂದಿಗೆ ನಾವುʼ ಕಲಾವಿದರ ನಡೆ-ಜನಸಾಮನ್ಯರ ಕಡೆ ಕಾರ್ಯಕ್ರಮ

ಈ ವೇಳೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮುಖಂಡ ಕಾಶಪ್ಪ ಚಲವಾದಿ, ಎಸ್ಎ ಗಫರ್, ಜ್ಯೋತಿ ಗೊಂಡಬಾಳ, ಬಸವರಾಜ್ ಶೀಲವಂತರ್, ಶರಣು ಗಡ್ಡಿ, ಮಹಾಂತೇಶ್ ಕೊತ್ತುಬಾಳ, ಶಿವಪ್ಪ ಹಡಪದ್, ಶರಣು ಶೆಟ್ಟರ್, ಈರಣ್ಣ ತಾಳ ಕನಕಪುರ, ಮಾರುತಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...