ಕೊಪ್ಪಳ | ಬೆಳೆವಿಮೆಗೆ ಕನ್ನ ಹಾಕಿದ ಪಿಡಿಒ; ರೈತರ ಆಕ್ರೋಶ

Date:

  • ಶಿರೂರು ಪಂಚಾಯತಿಯಲ್ಲಿ ಬೆಳೆವಿಮೆಗೆ ಕನ್ನ
  • ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ರೈತರು

‘ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿ’ಯಲ್ಲಿ ರೈತರಿಗೆ ಬಿಡುಗಡೆಯಾಗಿದ್ದ ಹಣವನ್ನು ಶಿರೂರು ಪಂಚಾಯತಿ ಪಿಡಿಒ ಮತ್ತು ವಿಮಾ ಕಂಪನಿ ಸೇರಿ ಲಪಟಾಯಿಸಿದ್ದಾರೆ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ರೈತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಶಿರೂರು ಪಂಚಾಯತಿಯ ಪಿಡಿಓ ಶರಣಪ್ಪ ವಿರುದ್ಧ ಆರೋಪ ಕೇಳಿಬಂದಿದ್ದು, “ಶರಣಪ್ಪ ಅವರು ಬೆಳೆ ವಿಮಾ ಕಂಪನಿಯವರಿಗೆ ಕೋಟ್ಯಂತರ ರೂಪಾಯಿ ಲಾಭ ಮಾಡಿಕೊಡಲು ರೈತರು ಬೆಳೆದ ಬೆಳೆಯಲ್ಲಿ 80% ಇಳುವರಿ ಬಂದಿದೆ ಎಂದು ವಿಮಾ ಕಂಪನಿಯವರಿಗೆ ಬರೆದುಕೊಟ್ಟು ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಪಿಡಿಒ ನಿರ್ಧಾರ ಖಂಡಿಸಿ ರೈತರ ಹಕ್ಕು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಅಂದಪ್ಪ ಕೋಳೂರ ಹಾಗೂ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಹೂಗಾರ ನೇತೃತ್ವದಲ್ಲಿ ಖಂಡಿಸಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಶಪ್ಪ ಹಡಪದ ಮಾತನಾಡಿ, “ಕುಕನೂರು ತಾಲೂಕಿನ ಯರೇಹಂಚಿನಾಳ, ಬಿನ್ನಾಳ, ಸಿದ್ನಕೊಪ್ಪ, ಸೋಂಪೂರ, ಮಂಡಲಗೇರಿ, ರಾಜೂರು ಪಂಚಾಯಿತಿ ಸೇರಿದಂತೆ ಶೀರೂರ ಗ್ರಾಮ ಪಂಚಯತಿ ವ್ಯಾಪ್ತಿಗೆ ಬರುವ ಅನೇಕ ಗ್ರಾಮದ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಖಾಸಗಿ ಕಂಪನಿಯವರು ರೈತರಿಗೆ ಮೊಸ ಮಾಡುತ್ತಾ ಬಂದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಯಶವಂತಪುರ ಕ್ಷೇತ್ರ | ತೆನೆ ಪಕ್ಷದ ಅನುಕಂಪದ ಅಲೆಯಲ್ಲಿ ಕೊಚ್ಚಿ ಹೋಗುವುದೇ ಕಮಲ!

“ಶಿರೂರು ಪಂಚಾಯತಿ ವ್ಯಾಪ್ತಿಗೆ ಬರುವ ರೈತರಿಗೆ 2023ನೇ ಸಾಲಿನ ಬೆಳೆವಿಮೆ ಬರದಿದ್ದರೆ, ಪ್ರಸ್ತುತ ನಡೆಯುತ್ತಿರುವ ಚುನಾವಣೆಯಲ್ಲಿ ಮತ ಬಹಿಷ್ಕಾರ ಮಾಡುವದಾಗಿ ಹಾಗೂ ಹೊಸ ಸರ್ಕಾರ ರಚನೆ ಆದ ನಂತರ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂದೆ ಉಗ್ರ ಹೋರಾಟವನ್ನು ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಮುಖಂಡ ನೀಲಪ್ಪ ಬೆದವಟ್ಟಿ, ಮಲ್ಲಿಕಾರ್ಜುನಯ್ಯ ಗುತ್ತುರ, ಶರಣಬಸಪ್ಪ ಚಪ್ಪರದ, ಶಿದ್ದಪ್ಪ ಪೊಲೀಸ್ ಪಾಟೀಲ್, ಹನುಮಪ್ಪ ಗುರಿಕಾರ, ಪರಸಪ್ಪ ಸಂಗನಾಳ, ಶೇಕಣ್ಣ ಮಾದಿನೂರ, ಮಾರುತಿ ಕಲಬುರ್ಗಿ, ಅಶೋಕ ಕಲಬುರ್ಗಿ, ಪರಶುರಾಮ್, ದೇವಪ್ಪ, ಸಿದ್ದಲಿಂಗಪ್ಪ, ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...