ಕೊಪ್ಪಳ | ಸರ್ಕಾರಿ ವಸತಿ ಶಾಲೆಯಲ್ಲಿ ರ್‍ಯಾಗಿಂಗ್; ವಿದ್ಯಾರ್ಥಿಗಳ ಮರ್ಮಾಂಗಕ್ಕೆ ಗಾಯ

Date:

ಶಾಲೆಯಲ್ಲಿಯೇ ಹಿರಿಯ ವಿದ್ಯಾರ್ಥಿಗಳು ಕಿರಯರ ಮೇಲೆ ರ್‍ಯಾಗಿಂಗ್ ಮಾಡಿದ್ದು, ಸುಮಾರು 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದ ಮೊರಾರ್ಜಿ ದೇಸಾತಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಡೆದಿದೆ.

ಸೋಮವಾರ ಕೆಲವು ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ ಬಳಿಕ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಮೂವರು ವಿದ್ಯಾರ್ಥಿಳಿಗೆ ಖಾಸಗಿ ಭಾಗಗಳಲ್ಲಿ ಗಾಯಗಳಾಗಿವೆ. ಅವರು ಆಘಾತಗೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ವಸತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುವ ಎಂಟು ಮಂದಿ ವಿದ್ಯಾರ್ಥಿಗಳು 8 ಮತ್ತು 9ನೇ ತರಗತಿ ವಿದ್ಯಾಥಿಗಳ ಮೇಲೆ 20 ದಿನಗಳಿಂದ ರ್‍ಯಾಗಿಂಗ್ ಮಾಡಿದ್ದಾರೆ. ಈ ವೇಳೆ, ಹಿಂಸಿ, ಥಳಿಸಿದ್ದಾರೆ. ತಮ್ಮ ಹೋಮ್‌ವರ್ಕ್‌, ಪ್ರಾಜೆಕ್ಟ್‌ಗಳನ್ನು ಮಾಡಿಕೊಂಡಿದ್ದಾರೆ. ನೆಲ ಸಾರಿಸುವಂತೆ ಒತ್ತಾಯಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳ ಕಿರುಕುಳ, ದೌರ್ಜನ್ಯದಿಂದ ಕಿರಿಯ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಸ್ಟೆಲ್‌ಗೆ ಧಾವಿಸಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ. ಕೆಲವು ಕಿರಿಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ದೌರ್ಜನ್ಯದ ಬಗ್ಗೆ ಹಾಸ್ಟೆಲ್ ವಾರ್ಡನ್‌ಗೆ ತಿಳಿಸಿದ್ದರೂ, ಅವರು ನಿರ್ಲಕ್ಷ್ಯಸಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಘಟನೆ ಬಗ್ಗೆ ವರದಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿಲ್ಲಾಡಳಿತ ಸೂಚಿಸಿದೆ. ಇದುವರೆಗೆ ಯಾವುದೇ ಪೋಷಕರಿಂದ ದೂರು ದಾಖಲಾಗಿಲ್ಲ ಎಂದು ಕೊಪ್ಪಳ ಪೊಲೀಸರು ತಿಳಿಸಿದ್ದಾರೆ.

“ನಾವು ಸಂತ್ರಸ್ತ ಮಕ್ಕಳೊಂದಿಗೆ ಮಾತನಾಡಿದ್ದೇವೆ. ರ್‍ಯಾಗಿಂಗ್ ಮಾಡಿದ್ದಾರೆಂದು ಆರೋಪ ಹೊತ್ತಿರುವ ವಿದ್ಯಾರ್ಥಿಗಳ ಬಗ್ಗೆಯೂ ವಿಚಾರಿಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ಕೆಲವು ಪೋಷಕರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಬಯಸಿದ್ದರು. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ವರದಿ ಕೇಳಿದ್ದು, ಶೀಘ್ರದಲ್ಲೇ ಸಲ್ಲಿಸಲಾಗುವುದು” ಎಂದು ಗಂಗಾವತಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತರ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ ಕೆಲವು ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದಿದ್ದಾರೆ.

“ಸಂತ್ರಸ್ತರು ತಮ್ಮ ಮೇಲೆ ರ್‍ಯಾಗಿಂಗ್ ಮಾಡಿದ ಎಲ್ಲ ಎಂಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹೆಸರಿಸಿದ್ದಾರೆ. ರ್‍ಯಾಗಿಂಗ್ ಮಾಡುವುದು ಅಪರಾಧವೆಂದು ಗೊತ್ತಿದ್ದರೂ ವಿದ್ಯಾರ್ಥಿಗಳು ಮಾಡಿದ್ದಾರೆ. ಯಾವುದೇ ದೂರು ದಾಖಲಿಸಬೇಡಿ ಎಂದು ಆರೋಪಿ ವಿದ್ಯಾರ್ಥಿಗಳ ಪೋಷಕರು ಮನವಿ ಮಾಡಿದ್ದಾರೆ. ಆದರೆ ನಮ್ಮ ಮಕ್ಕಳು ನರಳುತ್ತಿರುವುದನ್ನು ನೋಡಿ ನಾವು ಸುಮ್ಮನಿರುವುದು ಹೇಗೆ?” ಎಂದು ಪೋಷಕರು ಹೇಳಿದ್ದಾರೆ.

“ಲೋಪ ಎಸಗಿರುವ ಹಾಸ್ಟೆಲ್ ಆಡಳಿತದ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದೇವೆ. ಕಿರಿಯ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಕೊಡುವುದಿಲ್ಲ. ಮುಂದೆ, ರ್‍ಯಾಗಿಂಗ್ ಮಾಡುವುದಿಲ್ಲವೆಂದು ಆರೋಪಿ ವಿದ್ಯಾರ್ಥಿಗಳು ಲಿಖಿತವಾಗಿ ಹೇಳಿಕೆ ನೀಡಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 246 ವಿದ್ಯಾರ್ಥಿಗಳು ಈ ವಸತಿ ಶಾಲೆಯಲ್ಲಿ ಓದುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...