ಕೊಪ್ಪಳ | ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಿ; ಸಚಿವ ಜಮೀರ್ ಅಹ್ಮದ್‌ಗೆ ಮನವಿ

Date:

ಕೊಪ್ಪಳ ನಗರದ ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್ ಎ ಗಫಾರ್, ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ ಮುಂತಾದವರು ಮನವಿ ಸಲ್ಲಿಸಿದರು.

“ನಗರಸಭೆ ಎದುರಿನ ಶಾದಿ ಮಹಲ್‌ ಬಾಡಿಗೆ ಪ್ರಸ್ತುತ ₹12,000 ಗಳು ಇದೆ. ಬಡ ಜನರು ಕೈಲಾದಷ್ಟು ದೇಣಿಗೆ ನೀಡಿದ ಹಣದಲ್ಲಿ ಜಾಗ ಖರೀದಿಸಿದ್ದು, ನಂತರ ಸರ್ಕಾರದಿಂದ ಬಂದ ವಿವಿಧ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗಿದೆ. ಆದರೆ ಆಗ ಚಂದ ನೀಡಿದ ಬಡವರಿಗೆ ಈಗ ಶಾದಿ ಮಹಲ್‌ನಲ್ಲಿ ಮದುವೆಗೆ ಪಡೆಯಲು ಸಾಧ್ಯವಾಗದಷ್ಟು ಬಾಡಿಗೆ ಏರಿಸುವುದರಿಂದ ಸಮಸ್ಯೆ ಅನುಭವಿಸಬೇಕಾಗಿದೆ. ಉಳ್ಳವರಿಗೆ ಶಾದಿ ಮಹಲ್ ಎಂಬಂತಾಗಿದೆ. ಈ ಹಿಂದೆ ಘೋಷಿಸಿದಂತೆ ಶಾದಿ ಮಹಲ್ ಬಾಡಿಗೆಯನ್ನು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ₹3000 ಗಳಿಗೆ ನಿಗದಿಪಡಿಸಬೇಕು. ಶಾದಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ದೇವಸ್ಥಾನದ ದೇಣಿಗೆ ಹಣ ಶಾಲೆಯ ಕೊಠಡಿ ನಿರ್ಮಾಣಕ್ಕೆ ಬಳಕೆ; ಉದಾರತೆ ಮೆರೆದ ಗ್ರಾಮಸ್ಥರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೆಚ್ಚಿಸಲು ಕ್ರಮವಹಿಸಬೇಕು. ರಾಜ್ಯದಾದ್ಯಂತ ವಕ್ಫ್ ಕ್ಯಾಂಟೀನ್‌ಗಳನ್ನು ಆರಂಭಿಸಬೇಕು. ವಿವಿಧ ತಾಂತ್ರಿಕ ಶಿಕ್ಷಣ ಬೋಧನಾ ತರಬೇತಿ ಕಾಲೇಜುಗಳು ಸರ್ಕಾರದಿಂದ ಮಂಜೂರಾಗಬೇಕು. ಶೂನ್ಯದಿಂದ ಪದವಿವರೆಗೆ ಧಾರ್ಮಿಕ ಹಾಗೂ ಲೌಕಿಕ ಶೈಕ್ಷಣಿಕ ಶಾಲಾ ಕಾಲೇಜುಗಳು ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...