ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಗನಹಾಲ ಚಲೋ’ ಕಾಲ್ನಡಿಗೆ ಜಾಥಾ

Date:

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಹಾಗೂ ಅಂತರ್ಜಾತಿ ಯುವತಿಯ ವಿಷವುಣಿಸಿ ಹತ್ಯೆ ಮತ್ತು ಇತ್ತೀಚಿಗೆ ಕೊಪ್ಪಳದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ‘ಸಂಗನಹಾಲ ಚಲೋ’ ಮೊದಲನೆ ದಿನದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಕೊಪ್ಪಳ ಜಿಲ್ಲಾಡಳಿತ ಭವನದಿಂದ ಸಮಾನ ಬದುಕಿನತ್ತ ಅರಿವಿನ ಜಾಥಾ ಪ್ರಾರಂಭಗೊಂಡು ಅಶೋಕ ಸರ್ಕಲ್ , ಬಸ್ ಸ್ಟ್ಯಾಂಡ್ , ದದಗಲ್ ಮೂಲಕ ಮೆರವಣಿಗೆ ಬಾಣಾವರ ಗ್ರಾಮದಲ್ಲಿ ಮೊದಲನೇ ದಿನ ಅಂತಿಮಗೊಂಡಿತು.

ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಮಾತನಾಡಿದ ಹೋರಾಟಗಾರ ಅಂಬಣ್ಣ ಅರೋಲಿಕರ್, “ಈ ಹಿಂದೆ ಸಹ ಇಡೀ ರಾಜ್ಯಾದ್ಯಂತ ವಿವಿಧ ಕಡೆ ದಲಿತರ ಮೇಲೆ ದೌರ್ಜನಗಳು ನಡೆಯುತ್ತಿದ್ದವು. ಆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಆಯಾ ಗ್ರಾಮಕ್ಕೆ ಭೇಟಿ ನೀಡಿ, ಇದರ ವಿರುದ್ಧ ಕಟ್ಟುನಿಟ್ಟಾದ ಕ್ರಮವನ್ನು ಕೈಗೊಳ್ಳುತ್ತಿದ್ದರು. ಘಟನೆಗಳಿಗೆ ಕಾರಣಕರ್ತರಾದವರ ವಿರುದ್ಧ ಸಾಕಷ್ಟು ಕಾನೂನು ಕ್ರಮ ಜರುಗಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ರೀತಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರಣಕ್ಕಾಗಿಯೇ ಈಗಲೂ ಸಹ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದಲಿತರ ಮೇಲೆ ದೌರ್ಜನ್ಯಗಳು ಈ ಹಿಂದಿಗಿಂತ ಈ ಕಾಲದಲ್ಲಿ ಹೆಚ್ಚಾಗಿವೆ. ಇದನ್ನು ಕಾನೂನಿನ ಮೂಲಕವೇ ಕಟ್ಟುನಿಟ್ಟಾಗಿ ತಡೆಗಟ್ಟಬೇಕಿದೆ. ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸುವ ಕಟ್ಟುನಿಟ್ಟಾದ ಅಧಿಕಾರಿಗಳ ಅವಶ್ಯಕತೆ ಇದೆ. ಯಾವುದೇ ರೀತಿಯ ಒತ್ತಡಗಳಿಗೆ ಮಣಿಯದೆ, ಕಾನೂನು ಕ್ರಮ ಕೈಗೊಂಡರೆ ಖಂಡಿತವಾಗಿಯೂ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಸಂಗನಹಾಲ ಚಲೋ

ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಮಾತನಾಡಿ, “ಈ ರೀತಿಯ ಘಟನೆಗಳು ಸಂಭವಿಸಿದಾಗ ಜಿಲ್ಲಾಮಟ್ಟದ ಅಧಿಕಾರಿಗಳು ಆ ಗ್ರಾಮಕ್ಕೆ ತೆರಳಿ ಕೂಲಂಕುಷವಾಗಿ ಪರಿಶೀಲನೆ ನಡೆಸಬೇಕು ಹಾಗೂ ಅದಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಾದ ಕ್ರಮವನ್ನು ಜರುಗಿಸಬೇಕು. ಮತ್ತೊಮ್ಮೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಹೀಗಾದಲ್ಲಿ ಮಾತ್ರ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತವೆ. ಇಲ್ಲವಾದಲ್ಲಿ ಇದು ನಿರಂತರವಾಗಿ ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.

ಮೊದಲ ದಿನದ ಕಾಲ್ನಡಿಗೆ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ತೆರಳಿ ಭಾನಾಪುರವನ್ನು ತಲುಪಿತು. ಬುಧವಾರ ಬೆಳಗ್ಗೆಯಿಂದ ಸಂಗನಹಾಲ ಗ್ರಾಮದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ.

ಇದನ್ನು ಓದಿದ್ದೀರಾ? ಅನುಮತಿ ಇಲ್ಲದೆ ಬುಲ್ದೋಝರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಜಾಥಾದಲ್ಲಿ ಸಂಗನಹಾಲ ಚಲೋ ಸಂಚಾಲಕ ಬಸವರಾಜ್ ಸೂಳಿಬಾವಿ, ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು, ಶ್ರೀಪಾದ ಭಟ್, ಶುಕ್ರರಾಜ್, ಟಿ ರತ್ನಾಕರ, ಧರ್ಮರಾಜ ಗೋನಾಳ, ಕರಿಯಪ್ಪ ಗುಡಿಮನಿ, ಕೆವಿಎಸ್ ದುರುಗೇಶ್, ಮುತ್ತು ಬಿಳಿಯಲಿ, ಶಶಿಕಲಾ ಮಠ, ಸಲೀಮಾ ಜಾನ, ಜನಾರ್ದನ, ಗೌರಿ ಗೋನಾಳ, ಮರಿಯಮ್ಮ, ಆನಂದ ಶಿಂಗಾಡಿ, ಖಾಸೀಮ್ ಸರ್ದಾರ, ನಿಂಗೂ ಬೇನೇಕಲ್, ಇಮಾಮ ಸಾಬ್, ನಜೀರ್ ಸಾಬ್ ಮೂಲಿಮನಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...