ಕೊಪ್ಪಳ | ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ ಶಾಲಾ ಮಕ್ಕಳು ಗುಣಮುಖ

Date:

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 100ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ವಾಪಸಾಗಿದ್ದಾರೆ.

ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಚೇತರಿಕೆಗೊಂಡಿರುವುದರಿಂದ ಪೋಷಕರಲ್ಲಿ ಮನೆ ಮಾಡಿದ್ದ ಆತಂಕ ದೂರವಾಗಿದೆ. ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಕುಷ್ಟಗಿ ತಾಲೂಕು ಆಡಳಿತ ಮಾಹಿತಿ ನೀಡಿದೆ.

ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ 100ಕ್ಕಿಂತಲೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ದೋಟಿಹಾಳ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಬಿಜಕಲ್ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ, ಚಿಕಿತ್ಸೆ ನೀಡಲಾಗಿತ್ತು. ಸಣ್ಣಪುಟ್ಟ ಸಮಸ್ಯೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಶುಕ್ರವಾರ ತಡರಾತ್ರಿಯೇ ಸೂಕ್ತ ಚಿಕಿತ್ಸೆ ನೀಡಿದ ಬಳಿಕ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಬೆಳಗ್ಗೆ ಮನೆಗೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಪ್ಪಳ 11

ಈ ಸಂಬಂಧ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಕುಷ್ಟಗಿ ತಾಲೂಕು ವೈದ್ಯಾಧಿಕಾರಿ ಆನಂದ ಗೋಠುರ, “ಅಸ್ವಸ್ಥರಾದ ಶಾಲಾ ಮಕ್ಕಳು ಗುಣಮುಖರಾಗಿ ಪಾಲಕರ ಮುಖಾಂತರ ಮನೆಗೆ ಕಳುಹಿಸಲಾಗಿದೆ. ಮಧ್ಯಾಹ್ನ ಬಿಸಿಯೂಟವನ್ನು 356 ಮಕ್ಕಳು ಸೇವಿಸಿರುವುದು ಗೊತ್ತಾಗಿದೆ. ಈ ಪೈಕಿ ಸುಮಾರು ಏಳೆಂಟು ಮಕ್ಕಳಿಗೆ ವಾಂತಿ ಕಾಣಿಸಿಕೊಂಡಿತ್ತು. ಆ ಬಳಿಕ ಪೋಷಕರಲ್ಲಿ ಭಯ, ಭೀತಿ, ಗೊಂದಲ ಉಂಟಾಗಿದ್ದರಿಂದ ಎಲ್ಲ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ” ಎಂದು ಹೇಳಿದರು.

“ಬಿಸಿಯೂಟ ಸೇವಿಸಿದ್ದ ಏಳೆಂಟು ಮಕ್ಕಳಿಗೆ ವಾಂತಿ ಕಾಣಿಸಿತ್ತು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ನಂತರ ಎಲ್ಲ ಮಕ್ಕಳು, ನಾವು ಕೂಡ ಊಟ ಮಾಡಿದ್ದೇವೆ. ಏನಾದರೂ ಘಟನೆ ಸಂಭವಿಸಬಹುದು ಎಂಬ ಕಾರಣಕ್ಕೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆ ಬಳಿಕ ಮಕ್ಕಳನ್ನು ಪರೀಕ್ಷೆ ನಡೆಸಿದಾಗ ಯಾವುದೇ ಸಮಸ್ಯೆ ಆಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪೋಷಕರು ಗಾಬರಿಯಾದ ಕಾರಣಕ್ಕೆ ಎಲ್ಲ ಮಕ್ಕಳನ್ನು ತಪಾಸಣೆ ನಡೆಸಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಹಾಸನ | ಕೋಟಿ ವಿಮೆಗಾಗಿ ಸತ್ತಂತೆ ನಟನೆ; ನಾಪತ್ತೆಯಾಗಿದ್ದವ ಪೊಲೀಸರಿಗೆ ಸಿಕ್ಕಿದ್ದು ಹೇಗೆ?

“ಈ ಘಟನೆಗೆ ಬಿಸಿಯೂಟದ ಸಾಂಬಾರ್‌ನಲ್ಲಿ ಹಾಕಿದ ಖಾರದ ಪುಡಿ ಎಂದು ತಿಳಿದುಬಂದಿದೆ. ಸಾಂಬಾರಿಗೆ ಬಳಸಿದ್ದ ಕಾರಣ ಸಾಂಬಾರ್ ಕೂಡ ಕೆಂಪಾಗಿತ್ತು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈ ಖಾರದ ಪುಡಿಯಿಂದಾಗಿ ಕೆಲವು ಮಕ್ಕಳಿಗೆ ಹೊಟ್ಟೆಯಲ್ಲಿ ಉರಿ ಉಂಟಾಗಿ ವಾಂತಿ ಕಾಣಿಸಿದೆ” ಎಂದು ತಿಳಿಸಿದರು.

ಈ ಘಟನೆಯ ಬಗ್ಗೆ ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಸಂಪರ್ಕಿಸಲಾಯಿತಾದರೂ, ಕರೆಯನ್ನು ಸ್ವೀಕರಿಸಲಿಲ್ಲ. ಈ ನಡುವೆ ಶಾಲೆಯ ಅಡುಗೆ ಸಿಬ್ಬಂದಿ, ಮುಖ್ಯ ಶಿಕ್ಷಕಿಯನ್ನೇ ಗದರಿಸುವಷ್ಟು ಬೆಳೆದಿದ್ದಾರೆ. ಅವರ ನಿರ್ಲಕ್ಷ್ಯವೇ ಕಾರಣ. ಅವರನ್ನು ಕೂಡಲೇ ಬದಲಾಯಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.

ಕೊಪ್ಪಳ
WhatsApp Image 2024 08 23 at 08.34.51
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...