ಕೊಪ್ಪಳ | ಏಕಾಏಕಿ ಪ್ರವೇಶಾತಿ ಶುಲ್ಕ ಹೆಚ್ಚಳ : ಕಾನೂನು ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಕೊಪ್ಪಳದ ಅಟಲ್ ಬಿಹಾರಿ ವಾಜಪೇಯಿ ಮಹಾವಿದ್ಯಾಲಯ ಕಾಲೇಜಿನ ಪ್ರವೇಶಾತಿ ಶುಲ್ಕವು ಏಕಾಏಕಿ ಹೆಚ್ಚಿಸಿರುವುದರಿಂದ ಆಕ್ರೋಶಗೊಂಡ ಕಾನೂನು ಪದವಿ ವಿದ್ಯಾರ್ಥಿಗಳು, ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕಾಲೇಜು ಮುಂಭಾಗ ಪ್ರತಿಭಟಿಸಿದರು.

2023-24ನೇ ಸಾಲಿನಲ್ಲಿದ್ದ ₹22450 ಶುಲ್ಕವನ್ನು, ₹30,000ಕ್ಕೆ ಹೆಚ್ಚಿಸಲಾಗಿದೆ. ಇದು ಖಂಡನೀಯ. ಇದು ಎಲ್ಲ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಹೊರೆಯಾಗಿ ಪರಿಣಮಿಸುತ್ತಿದೆ. ತಕ್ಷಣ ಕಾಲೇಜಿನ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶುಲ್ಕ ಕಡಿತಗೊಳಿಸಿ, ವಿದ್ಯಾರ್ಥಿಗಳ ಕಲಿಕೆ ಸುಗಮ ಮಾಡಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಹಿಂದುಳಿದ ಭಾಗ. ಇಲ್ಲಿ ಬರುವ ವಿದ್ಯಾರ್ಥಿಗಳಲ್ಲಿ ಹಲವಾರು ಬಡತನದ ವರ್ಗದವರು. ಅದರಲ್ಲೂ ಹೆಚ್ಚಿನವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಏಕಾಏಕಿ ಶುಲ್ಕ ಹೆಚ್ಚಿಸಿದರೆ ಮಕ್ಕಳ ಜೀವನ ಕತ್ತಲೆಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಸರು ಹೇಳಲು ಇಚ್ಛಿಸದ ಕಾಲೇಜು ವಿದ್ಯಾರ್ಥಿಯೋರ್ವ ಮಾತನಾಡಿ, ಹಿಂದೆ ಕಾಲೇಜು ಪ್ರವೇಶಾತಿಗೆ ಹಾಜರಿಪಡಿಸಿದಾಗ ಮುಂದಿನ ಎರಡು ವರ್ಷ ಶುಲ್ಕ ಕಡಿಮೆಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಏಕಾಏಕಿ ದಿಢೀರನೆ ಶುಲ್ಕ ಹೆಚ್ಚಿಸಿರುವುದು ಇದು ಯಾವ ನ್ಯಾಯ? ಹಿಂದಿನ ವರ್ಷ ಕಾಲೇಜು ಸೇರಲು ಬಂದಾಗ ಪ್ರವೇಶಾತಿ ಶುಲ್ಕವನ್ನು ಪಾವತಿಸಲಾಗದೆ ಹಲವಾರು ಸಹೋದರ ಸಹೋದರಿಯರು ಕಾನೂನು ಪದವಿ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಪದವಿ ಪಡೆಯುವುದರಿಂದ ವಂಚಿತರಾದ ಇತರೆ ವಿದ್ಯಾರ್ಥಿಗಳ ಸಾಲಿಗೆ ನಮ್ಮನ್ನು ಸೇರಲು ಅವಕಾಶ ಮಾಡಿಕೊಡಬೇಡಿ. ಏಕಾಏಕಿ ಹೆಚ್ಚಿಸಿರುವುದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಕಲ್ಲು ಹಾಕಬೇಡಿ ಎಂದು ಕಾನೂನು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮೈಸೂರು | ದಸರಾಕ್ಕೆ ಬಂದಿದ್ದ ಆನೆಗಳ ನಡುವೆ ಗುದ್ದಾಟ: ದಿಕ್ಕಾಪಾಲಾಗಿ ಓಡಿದ ಜನ!

ಕಾಲೇಜು ಮಂಡಳಿ ದ್ವಿತೀಯ ಮತ್ತು ತೃತೀಯ ವರ್ಷದಲ್ಲಿ ಕಡಿಮೆಗೊಳಿಸಲಾಗುವುದು ಎಂದು ಹೇಳಿದ್ದರು. ಆದರೆ, 2023-24 ನೇ ಸಾಲಿನಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ₹22450ರ ಜೊತೆಗೆ ಅಭಿವೃದ್ಧಿ ಶುಲ್ಕವಾಗಿ ₹1000ಗಳನ್ನು ಹೆಚ್ಚುವರಿಯಾಗಿ ಪಾವತಿಸಿಕೊಂಡಿದ್ದಾರೆ. ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ₹22450 ರ ಜೊತೆಗೆ ಅಭಿವೃದ್ಧಿ ಶುಲ್ಕವಾಗಿ ₹3000ಗಳನ್ನು ಹೆಚ್ಚುವರಿಯಾಗಿ ಪಾವತಿಸಿಕೊಂಡಿದ್ದಾರೆ. ಆದರೆ, ನೀಡಿದ ಭರವಸೆಯ ವಿರುದ್ಧವಾಗಿ ಪ್ರಸ್ತುತ 2024-25ನೇ ಸಾಲಿನಲ್ಲಿ ಏಕಾಏಕಿ ₹7550 ಅನ್ನು ಹೆಚ್ಚಿಸಿರುವುದು ಖಂಡನೀಯ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...