ಕೊಪ್ಪಳ | ಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಿ ಸಮೃದ್ಧ ಸಮಾಜ ಕಟ್ಟಬೇಕು: ರಂಗ ಶಿಕ್ಷಕ ಗುರುರಾಜ್

Date:

  • ಸರ್ಕಾರಿ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನದ ಆಚರಣೆ
  • ಸಂತಸ ಮತ್ತು ಸಡಗರದಿಂದ ಪಾಲ್ಗೊಂಡ ಶಾಲಾ ವಿದ್ಯಾರ್ಥಿಗಳು

ಯುವ ಪೀಳಿಗೆಯು ರಂಗಭೂಮಿ ಪ್ರವೇಶಿಸಬೇಕು. ಆ ಮೂಲಕ ಸಮೃದ್ಧ ಸಮಾಜ ಕಟ್ಟುವಂತಾಗಬೇಕು. ಯುವ ಸಮುದಾಯದ ಮುಂದಾಳತ್ವದಲ್ಲಿ ಈ ನಾಡನ್ನ ಕಟ್ಟಬೇಕಾದ ಅವಶ್ಯಕತೆ ಇದೆ” ಎಂದು ರಂಗ ಶಿಕ್ಷಕ ಗುರುರಾಜ್ ಸಲಹೆ ನೀಡಿದರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಹಗೀರ ಗುಡದೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಪದ್ಯ ರಂಗ ಪ್ರಸ್ತುತಿ’ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಂಗ ಶಿಕ್ಷಕ ಗುರುರಾಜ್ ಮಾತನಾಡಿದರು.

“ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ರಂಗಭೂಮಿಯ ಒಡನಾಟದಿಂದ ಜಗತ್ತಿಗೆ ಹೊಸ ಅರ್ಥ ನೀಡಬೇಕು. ವಿದ್ಯಾರ್ಥಿಗಳು ರಂಗ ಪ್ರವೇಶಿಕೆ ಮಾಡುವುದರಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಶೈಕ್ಷಣಿಕವಾಗಿ ತಮ್ಮನ್ನು ತಾವು ಕಟ್ಟಿಕೊಳ್ಳುವ ಹೊಸ ಭರವಸೆಗೆ ಸಿದ್ದರಾಗುವಂತಾಗುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯ ವಿದ್ಯಾರ್ಥಿಗಳು ಸಂಭ್ರಮ ಮತ್ತು ಸಡಗರದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪದ್ಯಗಳ ವಾಚನ ಹಾಗೂ ಗಾಯನ ಮಾಡಿದರು. ಕಾರ್ಯಕ್ರಮದಲ್ಲಿ ‘ಈಜಿಪ್ಟ್ ರಂಗಕರ್ಮಿ ಸಮಿಹಾ ಆಯೌಬ್’ ನೀಡಿದ ರಂಗ ಸಂದೇಶವನ್ನು ಕನ್ನಡದಲ್ಲಿ ಶಿಕ್ಷಕಿ ಶ್ರೀಮತಿ ತನುಜಾ ಪೊಲೀಸ್ ವಾಚನ ಮಾಡಿದರು.

10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಪದ್ಯ ರಂಗ ಪ್ರಸ್ತುತಿ ಕಾರ್ಯಕ್ರಮದಲ್ಲಿ ಕೌರವೇಂದ್ರನ ಕೊಂದೆ ನೀನು, ಹಲಗಲಿ ಬೇಡರು, ಹಸುರು, ಹಕ್ಕಿಹಾರುತಿದೆ ನೋಡಿದಿರಾ, ಸಂಕಲ್ಪ ಗೀತೆ ಹಾಗೂ ವೀರಲವ ಪದ್ಯಗಳನ್ನು ಪ್ರಸ್ತುತಿ ಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾ ಸತ್ಯಪ್ಪ ಯಲಬುರ್ಗಿ ಮಾತನಾಡಿ, “ನಮ್ಮ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದೇವೆ. ರಂಗ ಶಿಕ್ಷಕರ ಇರುವಿಕೆಯಿಂದ ಮಕ್ಕಳಲ್ಲಿ ರಂಗ ಭಯ ದೂರಾಗಿದೆ” ಎಂದು ಅಭಿಪ್ರಾಯ ಪಟ್ಟರು.

“ಬಹುತೇಕ ವಿದ್ಯಾರ್ಥಿಗಳು ಆಸಕ್ತಿ, ಕೌಶಲ್ಯದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನೇಕ ಪ್ರಯೋಗಗಳನ್ನು ಮಾಡಿದ್ದಾರೆ. ರಂಗಭೂಮಿಯ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಮಕ್ಕಳು ನಿರಂತರವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ತಮ್ಮ ಕಲೆ ಪ್ರದರ್ಶಿಸಿದ ಎಲ್ಲ ಮಕ್ಕಳಿಗೂ ಬಹುಮಾನ ವಿತರಿಸಿ, ಸ್ಥಳೀಯ ಅತಿಥಿ ಶಿಕ್ಷಕರಿಗೆ ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭೀಮರಾವ್ ಸಾಳಂಕಿ, ಶಿವಪ್ಪ ಇಲಾಳ, ಬಸಪ್ಪ ಹಿರೇಮನಿ, ಶರಣಪ್ಪ ರಾಂಪುರ್, ಸುಮಿತ್ರ ಭಂಡಾರಿ, ರಮೇಶ್ ಚವಾನ್, ಜಗದೀಶ್ ಬಾಸಿಂಗದ, ಅತಿಥಿ ಶಿಕ್ಷಕ ಶರಣಪ್ಪ ಗೋಡೆಕರ್, ಮಹಬೂಬ್ ಸಾಬ್ ಘೋರಿ, ರವಿಕುಮಾರ ರಾಜೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...