ಕೊಪ್ಪಳ | ಮಧ್ಯಮ ವರ್ಗದ ಮೂಗಿಗೆ ತುಪ್ಪ ಸವರಿದ ಕೇಂದ್ರ ಬಜೆಟ್: ಎಸ್‌ಡಿ‌ಪಿ‌ಐ

Date:

ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. ಮಧ್ಯಮ ವರ್ಗದ ಮೂಗಿಗೆ ತುಪ್ಪ ಸವರಿಕೆ ಕೆಲಸ ಮಾಡಲಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತೀವ್ರ ಅಸಮಾಧಾನ ಹೊರಹಾಕಿದೆ.

2025-26ನೇ ಸಾಲಿನ ಬಜೆಟ್, ಮೋದಿ ಸರ್ಕಾರ ಕಳೆದ 10ವರ್ಷಗಳಿಂದ ಮಾಡಿಕೊಂಡು ಬರುತ್ತಿರುವಂತೆ ಜನ ದ್ರೋಹಿ ಬಜೆಟ್ ಆಗಿದೆ. ಬಜೆಟ್‌ನಲ್ಲಿ ಎಂದಿನಂತೆ ರಾಜ್ಯಕ್ಕೆ ದ್ರೋಹ ಬಗೆದಿದೆ. ಮಧ್ಯಮ ವರ್ಗಕ್ಕೆ ಆದಾಯ ತೆರಿಗೆಯಲ್ಲಿ ಒಂದಷ್ಟು ರಿಯಾಯಿತಿ ನೀಡುವ ಮೂಲಕ ಅವರ ಮೂಗಿಗೆ ತುಪ್ಪ ಸವರಲಾಗಿದೆ. ರೈತರು, ಕೃಷಿ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶಗಳ ಜನರಿಗೆ ಬರೆ ಎಳೆಯಲಾಗಿದೆ. ದಲಿತ, ಅಲ್ಪಸಂಖ್ಯಾತ ಸಮುದಾಯಗಳಿಗೆ ಬಹಿರಂಗವಾಗಿ ದ್ರೋಹ ಬಗೆದಿದ್ದಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕದ ಯಾವುದೇ ನೀರಾವರಿ, ರೈಲ್ವೆ, ಕೈಗಾರಿಕೆಗಳಿಗೆ ವಿಶೇಷ ಅನುದಾನ ಒದಗಿಸಲಾಗಿಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಕುಮಾರಸ್ವಾಮಿಯವರು ಪ್ರತಿನಿಧಿಸುವ ಮಂಡ್ಯ ಕ್ಷೇತ್ರಕ್ಕೆ ಒಂದಷ್ಟು ಹಣ ನೀಡಿರುವುದು ಬಿಟ್ಟರೆ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಹೊಸ ಯೋಜನೆ, ಹಣ ದೊರಕಿಲ್ಲ. ಅರ್ಥಾತ್ ರಾಜ್ಯಕ್ಕೆ ಎಂದಿನಂತೆ ಮೋದಿ ಸರ್ಕಾರ ಅನ್ಯಾಯವೆಸಗಿದೆ. ಆದರೆ ಇದರ ವಿರುದ್ಧ ಕರ್ನಾಟಕದ ಯಾವುದೇ ಸಂಸದರು ತುಟಿ ಬಿಚ್ಚುತ್ತಿಲ್ಲ. ಬಿಜೆಪಿ ಸಂಸದರು ಮೋದಿ, ಶಾ ಕೇಳಿದರೆ ಕರ್ನಾಟಕವನ್ನು ದಾನವಾಗಿ ನೀಡಲೂ ಸಿದ್ದವಾಗುತ್ತಾರೆ. ಅವರಿಗೆ ಮೋದಿ, ಶಾ ಎದುರು ನಿಂತುಕೊಳ್ಳುವ ಧೈರ್ಯವೂ ಇಲ್ಲ. ಅಡ್ಡಬಿದ್ದು ಬರುವುದೊಂದೇ ಗೊತ್ತು. ಕಾಂಗ್ರೆಸ್ ಸಂಸದರೂ ಹೆಚ್ಚೇನೂ ಪ್ರತಿರೋಧ ಒಡ್ಡದಿರುವುದು ದುರಂತ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಬೆನ್ನೆಲುಬಾದ ರೈತರು, ಕೃಷಿ ಕ್ಷೇತ್ರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಈ ಬಜೆಟ್ ನಲ್ಲಿ ಬರೆ ಎಳೆಯಲಾಗಿದೆ. ಅವರ ಪ್ರತಿಭಟನೆಗಳಿಗೆ ಪ್ರತಿಯಾಗಿ ಅವರ ಮೇಲೆ ಸೇಡು ತೀರಿಸಿಕೊಳ್ಳುವ ಕಾರ್ಯವನ್ನು ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಒದಗಿಸುವ, ಆ ಮೂಲಕ ಒಂದಷ್ಟು ಆದಾಯ ತಂದುಕೊಡುವ ನರೇಗಾ ಯೋಜನೆಗೆ ಕಳೆದ ಬಜೆಟ್ ಗಿಂತ 3,154 ಕೋಟಿ ರೂಪಾಯಿ ಕಡಿಮೆ ಹಣ ನೀಡಲಾಗಿದೆ. ಕಳೆದ ಬಾರಿ 89,154 ಕೋಟಿ ಪಡೆದಿದ್ದ ಈ ಯೋಜನೆ, ಈ ಬಾರಿ ಕೇವಲ 8,600 ಕೋಟಿ ರೂಪಾಯಿ ಮಾತ್ರ ಪಡೆದಿದೆ. ಇನ್ನು ಅತಿಹೆಚ್ಚು ಅನುದಾನ ಪಡೆಯಬೇಕಿದ್ದ ನೀರಾವರಿ ಕ್ಷೇತ್ರಕ್ಕೆ ಕೇವಲ 8260 ಕೋಟಿ ರೂಪಾಯಿ, ಅಂದರೆ ಕಳೆದ ಬಾರಿಗಿಂದ ಕೇವಲ 10 ಕೋಟಿ ರೂಪಾಯಿ ಮಾತ್ರ ಹೆಚ್ಚಿಗೆ ನೀಡಲಾಗಿದೆ. ಇನ್ನು ರೈತರನ್ನು ಆತ್ಮಹತ್ಯೆಯಿಂದ ಕಾಪಾಡಬಹುದಾದ ಬೆಳೆ ವಿಮೆ ಕ್ಷೇತ್ರಕ್ಕೆ ಕೇವಲ 12,242 ಕೋಟಿ ಮಾತ್ರ ಮೀಸಲಿಡಲಾಗಿದೆ. ಇದು ಕಳೆದ ಬಾರಿಗಿಂತ ಸುಮಾರು 3,600 ಕೋಟಿ ಕಡಿಮೆಯಾಗಿದೆ. ಇದು ಕೃಷಿ ಕ್ಷೇತ್ರದ ವಿರುದ್ಧ ಮೋದಿ ಸರ್ಕಾರಕ್ಕೆ ಇರುವ ಅಸಹನೆಯನ್ನು ತೋರಿಸುತ್ತದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಜ್ಯೋತಿಬಾ ಫುಲೆ ಅರಿವು ಬಿತ್ತಲು ಸತ್ಯಶೋಧಕ ಸಮಾಜ ಕಟ್ಟಿದರು: ರಮೇಶ್ ಗಬ್ಬೂರ

“ಇನ್ನು ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಬಹಿರಂಗವಾಗಿಯೇ ದ್ರೋಹ ಬಗೆಯಲಾಗಿದೆ. ಎಸ್‌ಟಿ ಸಮುದಾಯಕ್ಕೆ ನೀಡುವ ನ್ಯಾಷನಲ್ ಫೆಲೋಷಿಪ್‌ನ್ನು 165 ಕೋಟಿಯಿಂದ ಕೇವಲ ಎರಡು ಲಕ್ಷಕ್ಕೆ ಇಳಿಸಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿವೇತನವನ್ನು ಸುಮಾರು 1000 ಕೋಟಿ ಇಂದ ಕೇವಲ 197.50 ಕೋಟಿ ರೂಪಾಯಿಗಳಿಗೆ ಇಳಿಸಲಾಗಿದೆ ಇದು ದೊಡ್ಡ ದ್ರೋಹ. ಆದಾಯ ತೆರಿಗೆ ಮಿತಿ ಏರಿಕೆ ಒಂದನ್ನು ಬಿಟ್ಟು, ಸಾಮಾನ್ಯ ಜನರಿಗೆ ಅನುಕೂಲವಾಗುವ ಯಾವ ಅಂಶವೂ ಈ ಬಜೆಟ್‌ನಲ್ಲಿ ಇಲ್ಲ. ಇನ್ನು ಆದಾಯ ತೆರಿಗೆ ವಿಚಾರಕ್ಕೆ ಬರುವುದಾದರೆ, ಜನರ ಆದಾಯವೇ ಮಾಯವಾಗಿರುವಾಗ ತೆರಿಗೆ ಮಿತಿ ಏರಿಕೆ ಯಾವ ಪುರುಷಾರ್ಥಕ್ಕೆ ಎಂದು ಕೇಳಬೇಕಾಗುತ್ತದೆ” ಎಂದು ಮಜೀದ್ ತಮ್ಮ ಪ್ರಕಟಣೆಯಲ್ಲಿ ವ್ಯಂಗ್ಯವಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...