ಕೊಪ್ಪಳ | ವೈರಲ್ ಫೀವರ್: ಆಸ್ಪತ್ರೆಯಾಗಿ ಮಾರ್ಪಟ್ಟ ದೇವಾಲಯ

Date:

ಕೊಪ್ಪಳ ಜಿಲ್ಲೆಯ ಗ್ರಾಮವೊಂದರಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಹಲವಾರು ಜನರು ಜ್ವರಕ್ಕೆ ತುತ್ತಾಗಿದ್ದಾರೆ. ಗ್ರಾಮದ ದೇವಸ್ಥಾನವನ್ನು ಆಸ್ಪತ್ರೆಯ ವಾರ್ಡ್‌ಆಗಿ ಮಾರ್ಪಡಿಸಲಾಗಿದೆ. ಜ್ವರಕ್ಕೆ ತುತ್ತಾದ ಗ್ರಾಮಸ್ಥರಿಗೆ ದಾವಸ್ಥಾನದ ಆವರಣದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರೆಬೆಂಕಿ ಗ್ರಾಮದಲ್ಲಿ ಒಂದು ತಿಂಗಳ ಹಿಂದೆಯೇ ಜ್ವರ ಪ್ರಕರಣಗಳು ವರದಿಯಾಗಲು ಆರಂಭಿಸಿದ್ದವು. ಆದರೆ, ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲಿಲ್ಲ ವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಈಗ, ಅಧಿಕಾರಿಗಳು ಗ್ರಾಮದ ಭೀಮಾಂಬಿಕಾ ದೇವಸ್ಥಾನದಲ್ಲಿಯೇ ತಾತ್ಕಾಲಿಕ ಆರೋಗ್ಯ ಶಿಬಿರ ತೆರೆದು ಚಿಕಿತ್ಸೆ ನೀಡುತ್ತಿದ್ದಾರೆ.

ದೇವಾಲಯವು ಈಗ ರೋಗಿಗಳು ಸತತವಾಗಿ ಮಲಗಿರುವ ವಾರ್ಡ್‌ ರೀತಿ ಕಾಣಿಸುತ್ತಿದೆ. ರೋಗಿಗಳಿಗೆ ಐವಿ ದ್ರವ ನೀಡಲಾಗುತ್ತಿದೆ. ಇದು ವೈರಲ್ ಜ್ವರದ ವಿರುದ್ಧ ಹೋರಾಡುತ್ತದೆ. ರೋಗಿಗಳ ಕುಟುಂಬಗಳು ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಿಬ್ಬಂದಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆರೆಬೆಂಚಿ ಗ್ರಾಮದಲ್ಲಿ ಒಟ್ಟು 1,200 ಜನಸಂಖ್ಯೆ ಇದ್ದು, ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ. ಸ್ವಚ್ಚತೆಯೂ ಸರಿಯಾಗಿಲ್ಲ. ಸುತ್ತಮುತ್ತಲಿನ ನೀರು ನಿಂತಲ್ಲೇ ನಿಲ್ಲುವುದರಿಂದ ಸೊಳ್ಳೆಗಳ ಕಾಟ ಹೆಚ್ಚಿದೆ ಎಂದು ಗ್ರಾಮಸ್ಥರು ದೂರುತ್ತಾರೆ.

ಆರೋಗ್ಯ ಅಧಿಕಾರಿಗಳು ಕೊಪ್ಪಳಕ್ಕೆ ಕೆಲವು ರಕ್ತದ ಮಾದರಿಗಳನ್ನು ಕಳುಹಿಸಿದ್ದಾರೆ. ಗುರುವಾರ ಒಂದು ಚಿಕೂನ್‌ಗುನ್ಯಾ ಪ್ರಕರಣ ವರದಿಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆರೋಗ್ಯಾಧಿಕಾರಿಗಳು ಗ್ರಾಮಸ್ಥರಿಗೆ ಆತ್ಮವಿಶ್ವಾಸ ತುಂಬುತ್ತಿದ್ದರೂ, ಯೋಗದಿಂದ ಜೀವ ಕಳೆದುಕೊಳ್ಳಬಹುದೆಂಬ ಆತಂಕ ಗ್ರಾಮಸ್ಥರಲ್ಲಿ ಹೆಚ್ಚಾಗಿದೆ. ಇಡೀ ಗ್ರಾಮವೇ ಕ್ವಾರಂಟೈನ್‌ನಲ್ಲಿದ್ದು, ಗ್ರಾಮಸ್ಥರು ಪರಸ್ಪರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

ಗುರುವಾರ ಕುಷ್ಟಗಿ ತಹಶೀಲ್ದಾರ್ ರವಿ ಅಂಗಡಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದ್ದಾರೆ. ರೋಗಿಗಳನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆರೋಗ್ಯ ಸಿಬ್ಬಂದಿಗೆ ತಿಳಿಸಿದ್ದಾರೆ.

ಕೊಪ್ಪಳ ಡಿಎಚ್‌ಒ ಲಿಂಗರಾಜ್ ಟಿ ಮಾತನಾಡಿ, “ನಾವು ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದೇವೆ. ತಾಲೂಕು ಆರೋಗ್ಯ ಅಧಿಕಾರಿಗಳು ಗ್ರಾಮದಲ್ಲಿದ್ದಾರೆ. ಶೀಘ್ರದಲ್ಲೇ ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...