ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

Date:

ವರ್ಷ ಪೂರ್ತಿ ಕಷ್ಟ ಪಟ್ಟು ಓದಿದ ವಿದ್ಯಾರ್ಥಿ, ಇನ್ನೇನು ವಾರ್ಷಿಕ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ಹೆತ್ತ ತಾಯಿ ನಿಧನರಾದರೆ ಪಾಪಾ ಆ ಹುಡುಗನ ಪರಿಸ್ಥಿತಿ ಹೇಗಾಗಬೇಡ? ಸುಮ್ಮನೇ ಊಹಿಸಿಕೊಂಡರೆ ಕರುಳು ಕಿವುಚುತ್ತೆ. ಆದರೆ ಇಂತಹ ಘಟನೆ ರಾಜ್ಯದಲ್ಲಿ ಇಂದು ನಡೆದಿದೆ.

ಶುಕ್ರವಾರ (ಮಾ.21) ಗಂಗಾವತಿಯಲ್ಲಿ ಈ ನೈಜ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇಂದು ಆರಂಭವಾಗಿದ್ದು, ಬೆಳಿಗ್ಗೆ ಎದ್ದ ಹುಡುಗ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ತಾಯಿ ನಿಧನರಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆಸರಹಟ್ಟಿ ಗ್ರಾಮದ ಈ ಘಟನೆ ನಡೆದಿದೆ. ತಮ್ಮ ತಾಯಿ ಮೃತಪಟ್ಟ ದುಃಖದ ನಡುವೆಯೂ ಅಡಿವೆಯ್ಯಸ್ವಾಮಿ ಹಿರೇಮಠ ಎಂಬ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದಾನೆ. ಶೈಕ್ಷಣಿಕ ಜೀವನಕ್ಕೆ ಮಹತ್ವ ನೀಡಿ, ಮಾದರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಡಿವೆಯ್ಯಸ್ವಾಮಿ ಕೆಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾಯಿ ನಿಧನದ ಸುದ್ದಿಯ ನೋವಿನ ನಡುವೆಯೂ ಶಿಕ್ಷಕರು, ವಿದ್ಯಾರ್ಥಿ ಮತ್ತು ಅವರ ಕುಟುಂಬ ಸದಸ್ಯರ ಮನವೊಲಿಸಿ ವಿದ್ಯಾರ್ಥಿಯ ಪರೀಕ್ಷೆ ಬರೆಯಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿ ತಾಯಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.

ಕೆಲ ದಿನಗಳ ಹಿಂದೆ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ ಅವರು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ರಕ್ತ ಹೆಪ್ಪುಗಟ್ಟಿದ್ದರಿಂದ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಂಗಾವತಿಯಲ್ಲಿ ಯುವಕನ ಭೀಕರ ಹತ್ಯೆ: ಪೊಲೀಸರಿಂದ ಅರೋಪಿಗಳ ಪತ್ತೆಗೆ ಶೋಧ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಯವಕನೊರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರು ಘಟನೆ...

ಗಂಗಾವತಿ | ಮನೆಯ ಬಳಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ಹಳ್ಳಕ್ಕೆ ಬಿದ್ದು ಸಾವು

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಆರನೇ ವಾರ್ಡ್ ಮಹಬೂಬ್ ನಗರದಲ್ಲಿ ಆರು...

ಬಾಕಿ ಶುಲ್ಕದ ಬದಲಿಗೆ ತಾಳಿ, ಓಲೆ ಬಿಚ್ಚಿಸಿಕೊಂಡು ಟಿಸಿ ನೀಡಿದ್ದ ಕಾಲೇಜು ಆಡಳಿತ ಮಂಡಳಿ; ತಾಯಿಯ ಬಳಿ ಕ್ಷಮೆಯಾಚನೆ

ಬಾಕಿ ಶುಲ್ಕವನ್ನು ಪಾವತಿಸದೆ ಟಿಸಿ(ವರ್ಗಾವಣೆ ಪ್ರಮಾಣ ಪತ್ರ) ನೀಡಲು ಒಪ್ಪದ ಕಾಲೇಜು...