ಕೊಪ್ಪಳ‌ | ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ

Date:

ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದೇಶದ ಮೊದಲ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಾಚರಣೆಯನ್ನು ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳು ಆಚರಿಸಿವೆ.

ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ಮತ್ತು ಮಾತೆ ಸಾವಿತ್ರಿಬಾಯಿ ಪುಲೆಯವರ ಫೋಟೋಗಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಸ್ವಾಮಿ ಕಲ್ಬಾಗಿಲ್ಮಠ, ಸಾವಿತ್ರಿಬಾಯಿ ಪುಲೆಯವರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಪೂರಕವಾಗಿವೆ. ಪುಲೆಯ ವಿಚಾರಧಾರೆಯನ್ನು  ನಮ್ಮ  ಮಕ್ಕಳಿಗೆ ತಿಳಿಸುವಂತ ಕೆಲಸವಾಗಬೇಕು. ಅವರ ಆದರ್ಶದ ಬದುಕು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದರು. ʼಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆʼ ಎನ್ನುವ ಮಾತು ಅಕ್ಷರಶಃ ಫುಲೆಯವರಿಗೆ ಅನ್ವಯಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೋರ್ವ ಪ್ರಗತಿಪರ ಚಿಂತಕ ನೀಲಕಂಠ ಬಡಿಗೇರ್ ಮಾತನಾಡಿ ಈ ದೇಶದಲ್ಲಿನ ಮಹಿಳೆಯರ ಶಿಕ್ಷಣಕ್ಕಾಗಿ ದಿಟ್ಟವಾಗಿ ಹೋರಾಟ ಮಾಡಿದ ದೇಶದ ಮೊದಲ ಶಿಕ್ಷಕಿ ಎಂದರೆ, ಅದು ಮಾತೆ ಸಾವಿತ್ರಿಬಾಯಿ ಪುಲೆ. ದಲಿತರ ದಮನಿತರ, ಹಿಂದುಳಿದ ವರ್ಗದ ಜನರಿಗೆ ಶಿಕ್ಷಣಕ್ಕಾಗಿ ಅನೇಕ ಶಾಲೆಗಳನ್ನ ತೆರೆದು ಶೈಕ್ಷಣಿಕ ಕ್ರಾಂತಿ ಮಾಡಿದರು.

ಶಿಕ್ಷಕರ ದಿನಾಚರಣೆಯಲ್ಲಿ ಮಾತೆ ಸಾವಿತ್ರಿ ಬಾಯಿ ಪುಲೆ ಅವರ ಪಾತ್ರ ತುಂಬಾ ಅರ್ಥ ಪೂರ್ಣ ಆದರೆ, ಆ ದಿನದ ಮಹತ್ವದಲ್ಲಿ ಸಾವಿತ್ರಿಬಾಯಿ ಪುಲೆಯವರನ್ನ ಸ್ಮರಿಸದೇ ಇರುವುದು ಇತಿಹಾಸ ಮುಚ್ಚಿಟ್ಟ ದೊಡ್ಡ ಸುಳ್ಳು. ಶಿಕ್ಷಣಧಾತೆ ಸರಸ್ವತಿಯಲ್ಲಾ ಸಾವಿತ್ರಿ ಬಾ ಪುಲೆ. ಅಕ್ಷರಧಾತ ಗಣೇಶನಲ್ಲಾ ಜ್ಯೋತಿಬಾ ಪುಲೆ ಎನ್ನುವುದನ್ನು ನಾವು ಯಾರು ಮರೆಯುವಂತಿಲ್ಲ. ಹಾಗಾಗಿ ಶಿಕ್ಷರ ದಿನಾಚರಣೆ ಸಾವಿತ್ರಿಬಾಯಿ ಪುಲೆ ಅವರ ಹೆಸರಲ್ಲಿ ನಡೆಯಬೇಕು ಎಂಬುವುದು ನಮ್ಮೆಲ್ಲರ ಅಭಿಪ್ರಾಯ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಸ್ಥಳೀಯ ಸಂಶೋಧಕ ಡಾ. ನಾಗೇಶ್ ಪೂಜಾರ್ ಮಾತನಾಡಿ, ಸಾಮಾಜಿಕ ಕ್ರಾಂತಿಯಲ್ಲಿ ಅಕ್ಷರದ ಮೂಲಕ ಸಮಾಜವನ್ನ ತಿದ್ದಿದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನ ತುಂಬಾ ಅರ್ಥಪೂರ್ಣ. ಅವರು ಸಾಮಾಜವನ್ನು ತಿದ್ದುವಲ್ಲಿ ಒಬ್ಬ ಸಾಮಾಜಿಕ ವಿಜ್ಞಾನಿಯಂತೆ ಕೆಲಸ ಮಾಡಿದ್ದಾರೆ. ಧಾರ್ಮಿಕ ಚೌಕ್ಕಟ್ಟುಗಳಿಗೆ ಬಂಧಿಯಾಗಿದ್ದ ಮಹಿಳೆರ ಶಿಕ್ಷಣಕ್ಕಾಗಿ ಅನೇಕ ಅಪಮಾನಗಳನ್ನು ನೋವುಗಳನ್ನು ಎದುರಿಸಿ ಸಾಮಾಜಿಕ ಶೈಕ್ಷಣಿಕ ಸುಧಾರಣೆಯಲ್ಲಿ ತುಂಬಾ ಮಹತ್ವದ ಪಾತ್ರ ವಹಿಸಿದರು ಎಂದರು.

ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಪಾಮಣ್ಣ ಅರಳಿಗನೂರು, ವೆಂಕಟೇಶ್ ನಿರಲೂಟಿ, ವೆಂಕಟೇಶ್ ಪೂಜಾರ, ಪಟ್ಟಣ ಪಂಚಾಯಿತಿ ಸದಸ್ಯ ಕಂಠಿರಂಗಪ್ಪ ನಾಯಕ, ಕಾಂಗ್ರೆಸ್ ವಕ್ತಾರ ಶರಣಬಸಪ್ಪ ಭತ್ತದ, ಹನುಮೇಶ್ ವಾಲೇಕರ, ಮಕ್ತುಂಸಾಬ ಚಳ್ಳಮರದ್, ಬುಷ್ಯಪ್ಪ ಬಡಿಗೇರ, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರು ಮುಂತಾದವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...