ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ ಪುತ್ರಿಯರಾದ ಹುಲಿಗೆವ್ವ ಕುರಿ (9) ಮತ್ತು ವಿಜಯಮ್ಮ ಕುರಿ (8) ಮೃತರು ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಳವ್ವ ಅವರ ಪತಿ ಶರಣಪ್ಪ ಮದ್ಯಪಾನ ಮಾಡಿ ಮನೆಗೆ ಬಂದು ಹೆಂಡತಿ ಮತ್ತು ಮಕ್ಕಳೊಂದಿಗೆ ಜಗಳ ಮಾಡುತ್ತಿದ್ದ. ಇದರಿಂದ ಬೇಸತ್ತ ಬಾಳವ್ವ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೆರೆಗೆ ತಳ್ಳಿದ ಬಳಿಕ ತಾನೂ ಕೆರೆಗೆ ಹಾರಿ ಮೃತಪಟ್ಟಿದ್ದಾರೆ ಎಂದು ಎನ್ನಲಾಗಿದೆ.
ಶರಣಪ್ಪ ಕುರಿ ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ ಮನನೊಂದು ಈ ಘಟನೆ ನಡೆದಿದೆ ಎಂದು ಬಾಳವ್ವ ಅವರ ಸಂಬಂಧಿಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ : ಬೀದರ್ ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಸಾಕಷ್ಟು ಲಭ್ಯ; ಗಾಬರಿಗೊಳ್ಳಬೇಡಿ : ಡಿಸಿ ಶಿಲ್ಪಾ ಶರ್ಮಾ





