ಕೊಪ್ಪಳ | ಗೂಡುಕಟ್ಟದೇ ಸಾಯುತ್ತಿವೆ ರೇಷ್ಮೆ ಹುಳು; ಆತಂಕದಲ್ಲಿ ರೈತರು

Date:

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು ರೇಷ್ಮೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರೇಷ್ಮೆ ಮೊಟ್ಟೆಗಳಲ್ಲಿ ಗೋಲ್ಮಾಲ್ ಆಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯ ರೈತರು ಆರೋಪಿಸುತ್ತಿದ್ದಾರೆ.

ಹೊಸಳ್ಳಿ ಗ್ರಾಮದ ರೈತರು ಕುಷ್ಟಗಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಗುವ ರೇಷ್ಮೆ ಹುಳುಗಳನ್ನು ತಂದು ಪೋಷಿಸಿ, ಅವು ಗೂಡು ಕಟ್ಟಿದ ನಂತರ ರಾಮನಗರ ಸೇರಿದಂತೆ ಅನೇಕ ಕಡೆ ಮಾರಾಟ ಮಾಡುತ್ತಾರೆ. ಆದರೆ, ಈ ಬಾರಿ ತಂದಿರುವ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದರಿಂದ ರೇಷ್ಮೆ ಬೆಳೆಗಾರರು ಆತಂಕಕ್ಕೊಳಗಾಗಿದ್ದಾರೆ. ಮೊಟ್ಟೆಯಿಂದ ಹೊರಬಂದ ಹುಳುಗಳು ಇಪ್ಪತ್ತು ದಿನಗಳವರಗೆ ಇರುತ್ತವೆ. ನಂತರ ಅವುಗಳು ಗೂಡು ಕಟ್ಟಲು ಆರಂಭ ಮಾಡುತ್ತವೆ. ಇದೀಗ ಮೊಟ್ಟೆಯಿಂದ ಹೊರಬಂದ ಹುಳುಗಳು ಇಪ್ಪತ್ತೈದು ದಿನಗಳು ಕಳೆದ್ರು ಕೂಡ ಗೂಡು ಕಟ್ಟುತ್ತಿಲ್ಲ. ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ.

ಇದೀಗ ಹುಳುಗಳು ಗೂಡು ಕಟ್ಟದೇ ಇರುವುದು, ರೈತರ ಪ್ರಮುಖ ಆದಾಯದ ಬೆಳೆ ಹಾಳಾದಂತೆ. ಬೆಳೆ ಹಾಳಾದರೆ ತಮ್ಮ ಬದುಕು ಮೂರಾಬಟ್ಟಿಯಾಗುತ್ತದೆ ಎನ್ನುವ ಆತಂಕ ರೈತರದ್ದು. ಒಬ್ಬ ರೈತ ಎರಡೇ ಎಕರೆ ಪ್ರದೇಶದಲ್ಲಿ ಹಿಪ್ಪು ನೆರಳೆ ಬೆಳದಿದ್ರೆ, ಪ್ರತಿ ತಿಂಗಳಿಗೆ ಕನಿಷ್ಟ ಒಂದು ಕ್ವಿಂಟಲ್ ರೇಷ್ಮೆ ಗೂಡು ಸಿಗುತ್ತದೆ. ಪ್ರತಿ ಕಿಲೋಗೆ ಐನೂರು ರೂಪಾಯಿ ಮಾರಾಟವಾದ್ರು ಕೂಡ ಐವತ್ತು ಸಾವಿರ ಹಣ ಸಿಗುತ್ತಿತ್ತು. ಖರ್ಚು ಕಳೆದ್ರು ಕೂಡ ನಲವತ್ತು ಸಾವಿರ ಹಣ ಉಳಿಯುತ್ತಿತ್ತು. ಆದರೆ, ಈ ಬಾರಿ ಖರ್ಚು ಇಲ್ಲ, ಲಾಭವು ಇಲ್ಲ ಎಂದು ಕೊರಗುತ್ತಿದ್ದಾರೆ ರೈತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಟ್ಟೆಗಳ ಗೋಲ್ಮಾಲ್‌ನಿಂದಾಗಿ ಹುಳುಗಳು ಗೂಡು ಕಟ್ಟುತ್ತಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ. ಮೊಟ್ಟೆಗಳನ್ನು ತಂದು, ಅವುಗಳನ್ನು ಮರಿ ಮಾಡುವ ಕೆಲಸ ನಿರ್ವಹಿಸುವ ಜನ, ಉತ್ತಮ ಗುಣಮಟ್ಟದ ಮೊಟ್ಟೆಗಳನ್ನು ತರದೆ, ಹಣದಾಸೆಗಾಗಿ ಕಳಪೆ ಮೊಟ್ಟೆಗಳನ್ನು ತಂದು, ಮರಿ ಮಾಡಿ ಅವುಗಳನ್ನು ರೈತರಿಗೆ ನೀಡುತ್ತಿದ್ದಾರೆ. ಹೀಗಾಗಿ ಹುಳುಗಳು ಗೂಡು ಕಟ್ಟುತ್ತಿಲ್ಲ ಎನ್ನುತ್ತಿದ್ದಾರೆ ರೈತರು. ಈ ಬಗ್ಗೆ ರೇಷ್ಮೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಕೂಡ ತಂದಿದ್ದೇವೆ. ಆದರೆ, ಅವರು ಪುಡ್ ಪಾಯ್ಸನ್ ಅಂತ ಹೇಳ್ತಿದ್ದಾರೆ. ಹಾಗಂತ ಯಾವುದೇ ಹುಳುಗಳನ್ನು ತಗೆದುಕೊಂಡು ಹೋಗಿ ಪರೀಕ್ಷೆ ಮಾಡಿಲ್ಲಾ. ಬದಲಾಗಿ ಸುಮ್ಮನೇ ಹೇಳುತ್ತಿದ್ದಾರೆ. ರೇಷ್ಮೆ ಹುಳುಗಳನ್ನು ನೀಡೋರ ವಿರುದ್ದ ಕಠೀಣ ಕ್ರಮ ಕೈಗೊಳ್ಳಬೇಕು. ನಮಗೆ ಪರಿಹಾರ ನೀಡಬೇಕು ಎಂದು ರೇಷ್ಮೆ ಬೆಳೆದ ರೈತರು ಆಗ್ರಹಿಸುತ್ತಿದ್ದಾರೆ.

ರೇಷ್ಮೆ ಇಲಾಖೆಯ ಅಧಿಕಾರಿಗಳು, ವಾತಾವರಣದಲ್ಲಿ ಬದಲಾವಣೆ ಮತ್ತು ರೇಷ್ಮೆಗೆ ಬೇಕಾಗಿರುವ ಹಿಪ್ಪು ನೆರಳೆ ಸೊಪ್ಪಿಗೆ ಕೆಲ ಕೆಮಿಕಲ್​ಗಳ ಬಳಕೆ ಮಾಡುತ್ತಿರುವುದು ಕಾರಣ ಎನ್ನುತ್ತಿದ್ದಾರೆ. ಜೊತೆಗೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಸಾಕಷ್ಟು ಕೆಮಿಕಲ್​ಗಳ ಬಳಕೆ ಮಾಡುತ್ತಿದ್ದಾರೆ. ಅದು ಗಾಳಿಯ ಮೂಲಕ ಹಿಪ್ಪು ನೆರಳೆ ಸೊಪ್ಪಿನ ಮೇಲೆ ಬೀಳುತ್ತಿದೆ. ಕೆಮಿಕಲ್ ಸೇರಿರುವ ಹಿಪ್ಪು ನೆರಳೆ ಸೊಪ್ಪನ್ನು ತಿನ್ನುವುದರಿಂದ ಹುಳುಗಳು ಗೂಡು ಕಟ್ಟುತ್ತಿಲ್ಲ. ಪ್ರತಿ ವರ್ಷ ಹೆಚ್ಚು ಮಳೆ ಯಾಗುತ್ತಿತ್ತು. ನೀರಲ್ಲಿ ಕೆಮಿಕಲ್ ಹೋಗ್ತಿತ್ತು. ಆದ್ರೆ, ಈ ಬಾರಿ ಮಳೆ ಕಡಿಮೆಯಾಗಿದೆ ಎನ್ನುತ್ತಿದ್ದಾರೆ.

ರೇಷ್ಮೆ ಹುಳುಗಳ ಸಾವಿಗೆ ಅಧಿಕಾರಿಗಳು, ರೇಷ್ಮೆ ವಿಜ್ಞಾನಿಗಳು ಅಸಲಿ ಕಾರಣ ಪತ್ತೆ ಹಚ್ಚಿ, ಹುಳುಗಳನ್ನು ಮಾರಾಟ ಮಾಡೋ ವರ್ತಕರ ನಿರ್ಲಕ್ಷ್ಯಇದ್ದರೆ ಅವರ ವಿರುದ್ಧ ಕ್ರಮ ಕೈಗೊಂಡು, ರೈತರಿಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ರೇಷ್ಮೆ ಬೆಳೆದ ರೈತರು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...