ಕೊಪ್ಪಳ | ವಸತಿ ನಿಲಯದಲ್ಲಿ ಅವ್ಯವಸ್ಥೆ; ತಡರಾತ್ರಿ ಡಿಸಿ ಕಚೇರಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

Date:

ಕೊಪ್ಪಳದ ಹಮಾಲರ ಕಾಲನಿಯಲ್ಲಿರುವ ಎಸ್‌ಸಿ-3 ವಸತಿ ನಿಲಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಯಲ್ಲಿ ಅಡುಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಸೋಮವಾರ ತಡರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.

ವಸತಿ ನಿಲಯದಲ್ಲಿ ಶೌಚಾಲಯಗಳು ಸ್ವಚ್ಚವಾಗಿಲ್ಲ, ಊಟದಲ್ಲಿ ಸತ್ವವಿಲ್ಲ, ವಿದ್ಯಾರ್ಥಿಗಳಿಗೆ ಸರಿಯಾಗಿ ಬಾಳೆಹಣ್ಣು ಕೊಟ್ಟಿಲ್ಲ, ಸರಿಯಾಗಿ ನಿರ್ವಹಣೆ ಮಾಡದ ವಾರ್ಡನ್ ಬಸವರಾಜ ಕಟ್ಟಿ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ದೂರಿದರು. ವಾರ್ಡನ್ ಬದಲಾವಣೆ ಮಾಡುವ ಕುರಿತು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ವಿದ್ಯಾರ್ಥಿಗಳೊಂದಿಗೆ ಮಾತು ಕತೆ ನಡೆಸಿದರು.

ವಾರ್ಡನ್ ಬದಲಾವಣೆ ಮಾಡಲು ಒಂದು ವಾರ ಸಮಯ ಕೇಳಿದ ಅಧಿಕಾರಿಗಳ ಮನವಿಗೆ ಕಿವಿಗೊಡದೆ ವಿದ್ಯಾರ್ಥಿಗಳು ತಕ್ಷಣವೇ ವಾರ್ಡನ್ ಬದಲಾವಣೆ ಆಗಬೇಕು ಎಂದು ಪಟ್ಟು ಹಿಡಿದರು. ವಿದ್ಯಾರ್ಥಿಗಳ ಮನವಿಗೆ ಒಪ್ಪದ ಕಾರಣ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ವಾರ್ಡನ್ ಬದಲಾವಣೆ ಮಾಡುವ ತನಕ ಸ್ಥಳಬಿಟ್ಟು ಹೋಗುವುದಿಲ್ಲ. ಊಟದಲ್ಲಿ ಕೂದಲು, ಜಿರಳೆ ಬೀಳುವುದು ಸಾಮಾನ್ಯವಾಗಿದೆ. ಸರಿಯಾಗಿ ಮೊಟ್ಟೆ ನೀಡುವುದಿಲ್ಲ ಎಂದು ದೂರಿದರು. ಕೆಲ ವಿದ್ಯಾರ್ಥಿಗಳ ತಟ್ಟೆ ಸಮೇತ ಬಂದು ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳ | ಕೌಟುಂಬಿಕ ಕಲಹ ಬಗೆಹರಿಸಲು ಹೋದ ಯುವಕನ ಮೇಲೆ ಗುಂಪು ಹಲ್ಲೆ; ನಾಲ್ವರ ಬಂಧನ

ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಮನವೊಲಿಸಿ ಸಮಾಧಾನಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮತ್ತು ಬರುವ ಚಾಕೊಲೇಟ್ ಕೊಡಿಸಿ 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ...

ಕೊಪ್ಪಳ | ಬುಲೆರೋ- ಬೈಕ್‌ ಡಿಕ್ಕಿ; ಮೂವರು ಸಾವು

ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು...

ಕೊಪ್ಪಳ | ಅಂಬೇಡ್ಕರ್ ಪರಿನಿಬ್ಬಾಣದ ದಿನದಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಡಾ. ಬಿ ಆರ್ ಅಂಬೇಡ್ಕರ್ ಪರಿನಿ‌ಬ್ಬಾಣದ ದಿನದ ಅಂಗವಾಗಿ ತಾವರಗೇರಾದಲ್ಲಿ ಕರ್ನಾಟಕ...

ಕೊಪ್ಪಳ | ಮಕ್ಕಳ ಹಕ್ಕುಗಳ ಗ್ರಾಮಸಭೆ ಮನವಿಗೆ ಸಿಇಒ ನಿರ್ಲಕ್ಷ್ಯ: ಕೆಸಿಆರ್‌ಒ ಆರೋಪ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರವು ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಸ್ನೇಹಿ ಗ್ರಾಮ...