ಕೊರಗ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಇಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹಾಗೂ ವೆಂಕಟೇಶ್ ಕೋಣಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದರು.
ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರ್ಕಾರದ ಯಾವುದೇ ಸ್ಪಂದನೆ ಇಲ್ಲದಿರುವುದು ಖಂಡನೀಯ ಎಂದು ಅವರು ಹೇಳಿದರು.
ಕಳೆದ ಹಲವು ವರ್ಷಗಳಿಂದ ಕೊರಗರ ಕುಂದುಕೊರತೆ ಸಭೆಗಳನ್ನು ನಡೆಸದಿರುವುದು ಕೊರಗ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇದು ಖಂಡನೀಯ.
ಸಮಾಜದಲ್ಲಿ ನಿರ್ಲಕ್ಷ್ಯಕ್ಕೊಳಗಾದ ಸಮುದಾಯವನ್ನು ಸರಕಾರವೂ ನಿರ್ಲಕ್ಷ್ಯ ಮಾಡುತ್ತಿರುವುದು ದುರಂತ ಸರಕಾರ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಜಿಲ್ಲಾ ಉಸ್ತುವಾರಿ ಸಚಿವರು ಸರಕಾರದ ಜೊತೆಗೆ ಮಾತುಕತೆಗೆ ಏರ್ಪಾಟು ಮಾಡಬೇಕು ಎಂದು ಆಗ್ರಹಿಸಿದರು.





