ಕೊರಟಗೆರೆ | ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯತೆ ಇಲ್ಲದಿದ್ದರೆ ಅಭಿವೃದ್ಧಿ ಅಸಾಧ್ಯ : ವಿ.ಸೋಮಣ್ಣ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ಭಾನುವಾರ ನೂತನವಾಗಿ ನಿರ್ಮಿಸಿದ್ದ ಆಂಜನೇಯಸ್ವಾಮಿ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮದ್ಯೆ ಸಮನ್ವಯತೆ ಇರಬೇಕು ಆಗ ಮಾತ್ರ ದೇಶ ಮತ್ತು ರಾಜ್ಯಗಳು ಅಭಿವೃದ್ಧಿ ಹೊಂದುತ್ತವೆ ಅಭಿಪ್ರಾಯ ಹೊರಹಾಕಿದರು.

ಕೇಂದ್ರ ಸಚಿವ ಸೋಮಣ್ಣ ಗೃಹ ಸಚಿವ ಡಾ.ಜಿ.ಪರಮೇಶ್ವರರನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಮುಂದೆಯೆ ಹಾಡಿ ಹೊಗಳುವ ಮೂಲಕ ಈ ಕಾರ್ಯಕ್ರಮಕ್ಕೆ ಡಾ.ಜಿ.ಪರಮೇಶ್ವರ ಬರಬೇಕಿತ್ತು ಈ ಭಾಗಕ್ಕೆ ಎತ್ತಿನಹೊಳೆ, ಭದ್ರಮೇಲ್ದಂಡೆ ಯೋಜನೆಗಳು ಬರಬೇಕಿದೆ, ಇದಕ್ಕಾಗಿ ಎರಡು ಸರ್ಕಾರಗಳು ಶ್ರಮಿಸುತ್ತಿವೆ, ಈ ಕ್ಷೇತ್ರದ ಶಾಸಕರು, ರಾಜ್ಯದ ಸಚಿವರಾದ ಡಾ.ಜಿಪರಮೇಶ್ವರ ಈ ಭಾಗದ ಕೆರೆಗಳಿಗೆ ನೀರು ಹರಸಲು ಕೇಂದ್ರ ಸರ್ಕಾರಕ್ಕೂ ಅರ್ಜಿ ಸಲ್ಲಿಸಿದ್ದಾರೆ, ನಾನು, ಡಾ.ಜಿ.ಪಮೇಶ್ವರ, ಕೆ.ಎನ್.ರಾಜಣ್ಣ ಮೂವರು ಜನರು ಸೇರಿ ಪಕ್ಷಭೇದ ಮರೆತು ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸುವ ತಿರ್ಮಾನ ಮಾಡಿದ್ದೇವೆ, ಈ ಭಾಗದ ಅಭಿವೃದ್ಧಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ನನಗೆ ಪೂರ್ಣ ಸಹಕಾರ ನೀಡುತ್ತಿದ್ದು ಡಾ.ಜಿ.ಪರಮೇಶ್ವರ ರಂತ ಒಳ್ಳೆಯ ಉತ್ತಮ ರಾಜಕಾರಣಿ ಅಪರೂಪ ಎಂದು ಕೊಂಡಾಡಿ ಹೊಗಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಂಬಾಡಿ ಗ್ರಾಮದ ಮುಖಂಡರ, ಜನರ ಕೋರಿಕೆ ಮೇರೆಗೆ ಇಲ್ಲಿನ ಶಾಲಾ ಕೊಠಡಿ ನಿರ್ಮಾಣಕ್ಕೆ 1

.10 ಕೋಟಿ ನೀಡುವುದಾಗಿ ಭರವಸೆ ನೀಡಿ ಆ ಕೆಲಸವನ್ನು ಶೀಘ್ರವಾಗಿ ಪ್ರಾರಂಭಿಸಿ ಮುಗಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು,ಅದೇ ರೀತಿ ಮಧುಗಿರಿ ತಾಲ್ಲೂಕಿನ ಐ.ಡಿ.ಹಳ್ಳಿ ಗ್ರಾಮದಲ್ಲಿ ಪ್ಲೋರೈಡ್ ಯುಕ್ತ ಕುಡಿಯುವ ನೀರಿದ್ದು ಅಲ್ಲಿನ ಶುದ್ದ ಕುಡಿಯುವ ನೀರಿನ ವ್ಯವಸ್ಥೆಗೆ 2 ಕೋಟಿ ಅನುದಾನದ ಮಂಜೂರು ಮಾಡಿರುವ ಬಗ್ಗೆ ಮಾಹಿತಿ ನೀಡಿದರು.

ಸಿದ್ದರಬೆಟ್ಟದ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು

ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಸಿ ಲಕ್ಷ್ಮೀಶ್, ಮಾಜಿ ಶಾಸಕ ಪಿ.ಆರ್.ಸುಧಾಕರ್‌ಲಾಲ್, ಮಾಜಿ ಜಿ.ಪಂ ಅಧ್ಯಕ್ಷ ವೈ.ಹೆಚ್ ಹುಚ್ಚಯ್ಯ, ತಾ.ಜೆಡಿಎಸ್ ಅಧ್ಯಕ್ಷ ಜಿ.ಎಂ ಕಾಮರಾಜು, ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ತುಂಬಾಡಿ ಗ್ರಾ.ಪಂ ಅಧ್ಯಕ್ಷ ನಟರಾಜು, ಉಪಾದ್ಯಕ್ಷೆ ಲತಾ, ಸದಸ್ಯರಾದ ಪ್ರಸನ್ನಕುಮಾರ್, ಹೇಮಂತ್, ಪ.ಪಂ ಸದಸ್ಯ ಕೆ. ಎನ್ ಲಕ್ಷ್ಮೀನಾರಾಯಣ, ಮುಖಂಡರುಗಳಾದ ಜೆ. ಎನ್ ನರಸಿಂಹರಾಜು, ಮುಖಂಡರಾದ ತಿಮ್ಮಜ್ಜ, ವಿನಯ್‌ಬಾಬು, ಕೃಷ್ಣಾಚಾರ್, ರಾಘವೇಂದ್ರ, ಸಿದ್ದಮಲ್ಲಯ್ಯ, ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...