ಕೊರಟಗೆರೆ | ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು: ನಟ ಚೇತನ್ ಅಹಿಂಸಾ

Date:

ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದರು.

ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಖಾಸಗಿ ವಾಹಿನಿ ನೂತನವಾಗಿ ಪ್ರಾರಂಭಗೊಳ್ಳುತ್ತಿರುವ ಸುವರ್ಣ ಯುಗ ವಾಹಿನಿಯ ಕಚೇರಿಯಲ್ಲಿ ಆಯೋಜಿಸಲಾದ ಸಮಾನತೆ ಹಾದಿಯ ಪಯಣ ಕುರಿತು ಪ್ರೋಜೆಕ್ಟರ್ ಮೂಲಕ ಸಮಾಜದ ಬದಲಾವಣೆ ಹಾಗೂ ಸಮಾನತೆ ಕುರಿತು ಹಲವು ಮಾಹಿತಿ ನೀಡಿದ ಅವರು, ವಿವಿಧ ಸಂಘಟನೆಯ ಪದಾಧಿಕಾರಿಗಳಿಗೆ ಮಾಹಿತಿ ನೀಡಿ ಭವಿಷ್ಯದ ಕರ್ನಾಟಕ ನಿರ್ಮಾಣ ಮಾಡಬೇಕು, ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

ಪೆರಿಯಾರ್ ಮತ್ತು ಅಂಬೇಡ್ಕರ್ ಅವರು ನಾವು ಅಧಿಕಾರದಲ್ಲಿ ಬರಬೇಕು ಎಂದು ಹೇಳುತ್ತಾರೆ. ನಾವು ಎಂದರೆ ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು. ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು. ಈ ವ್ಯವಸ್ಥೆಯಲ್ಲಿ ಆದಿವಾಸಿ, ದಲಿತ, ಮಹಿಳೆಯರನ್ನು ವಿರೋಧಿಸಲಾಗುತ್ತದೆ. ಇದನ್ನು ನಾವು ಗುರುತಿಸಿಕೊಂಡು ಒಂದು ಪರ್ಯಾಯವಾದ ಶಕ್ತಿ ಕಟ್ಟಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬಾ ಸಾಹೇಬರಿಗೆ ಮೂರ್ತಿ, ವ್ಯಕ್ತಿ ಆರಾಧನೆ ಇಷ್ಟ ಇರಲಿಲ್ಲ. ವ್ಯಕ್ತಿ ಆರಾಧನೆ ಮಾಡಿದಷ್ಟು ಪ್ರಜಾಪ್ರಭುತ್ವಕ್ಕೆ ಕಷ್ಟ ಆಗುತ್ತದೆ. ನನ್ನನ್ನು ಪೂಜಿಸಬೇಡಿ, ನನ್ನನ್ನು ಓದಿ ಎಂದು ಹೇಳುತ್ತಿದ್ದರು. ನಾವು ಅವರನ್ನು ಪೂಜಿಸುತ್ತೇವೆ ಆದರೆ ಅವರ ವಿಚಾರಗಳನ್ನು ಅರ್ಥ ಮಾಡಿಕೊಳ್ಳಲ್ಲ.. ಬುದ್ಧ, ಬಸವ, ಅಂಬೇಡ್ಕರ್‌ರವರ ಆದರ್ಶ ಜೀವನವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಉತ್ತಮ ಸಮಾಜ ಎಂದರೆ ಅದೆಷ್ಟು ಜ್ಞಾನಪೀಠ ಪ್ರಶಸ್ತಿ ಪಡೆಯುತ್ತೇವೆ, ಅದೆಷ್ಟು ದೊಡ್ಡ ಬಜೆಟ್ ಸಿನಿಮಾ ಮಾಡುತ್ತೇವೆ ಎಂದಲ್ಲ. ಉತ್ತಮ ಸಮಾಜ ಎಂದರೆ ಅಂಬೇಡ್ಕರ್ ಕಂಡಂತಹ ಸಮಸಮಾಜ, ಸಮಾನತೆಯ ಸಮಾಜವಾಗಿದೆ ಎಂದು ಹೇಳಿದರು.

ಕೆಯು‌‌‌ಡಬ್ಲ್ಯೂ‌‌‌ಜೆ ಅಧ್ಯಕ್ಷ ಕೆ.ವಿ ಪುರುಷೋತ್ತಮ್ ಮಾತನಾಡಿ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಾನಮಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ದಕ್ಕಬೇಕಿದೆ. ಶೈಕ್ಷಣಿಕ, ಆರೋಗ್ಯ ಹಾಗೂ ಪರಿಸರ ಜೊತೆಗೆ ಅಭಿವೃದ್ಧಿ ಕುರಿತು ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದು ಸಂವಿಧಾನ ಆಶಯ ಈಡೇರಿಸಬೇಕಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕಿ ತಿಮ್ಮಾಜಮ್ಮ, ಉಪಾಧ್ಯಕ್ಷ ಹೆಚ್.ಎನ್ ಕೆ.ಯು‌‌‌.ಡಬ್ಲ್ಯೂ‌‌‌.ಜೆ ನಾಗರಾಜು, ಅಗ್ರಹಾರ ಗ್ರಾ.ಪಂ ಅಧ್ಯಕ್ಷ ಪ್ರಭಾಕರ್, ದಲಿತ ಮುಖಂಡ ದಾಡಿ ವೆಂಕಟೇಶ್, ದೊಡ್ಡಯ್ಯ, ವೀರಕ್ಯಾತರಾಯ, ಬಸವರಾಜು, ಪ.ಪಂ ಮಾಜಿ ಅಧ್ಯಕ್ಷ ನಯಾಜ್‌ಅಹಮದ್, ಮಹಮ್ಮದ್ ಗೌಸ್‌ಫೀರ್, ಫಾರುಕ್, ನವೀನ್, ರಾಕೇಶ್, ಉಮೇಶ್, ರಿಜ್ವಾನ್‌ಪಾಷ, ಸುರೇಶ್, ರಿಜ್ವಾನ್‌ಅಹಮದ್, ಚಿಕ್ಕಿರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...