ಕೊರಟಗೆರೆ | ರೈತನ ಗುಡಿಸಲಿಗೆ ಬೆಂಕಿ : ಬಿತ್ತನೆ ಬೀಜ, ರಸಗೊಬ್ಬರ ಭಸ್ಮ

Date:

ರೈತನ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯ, ಬಿತ್ತನೆ ಬೀಜ, ರಸಗೊಬ್ಬರ ದಿ‌ನಸಿ ಪದಾರ್ಥಗಳು ನಷ್ಟವಾಗಿರುವ ಘಟನೆ ಸಂಭವಿಸಿದೆ.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದ ವಾಸಿಯಾದ ರೈತ ನಾಗರಾಜು, ಗುಡಿಸಲುಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಿತ್ತನೆ ಬೀಜ, ರಸಗೊಬ್ಬರ, ದಿನಬಳಕೆ ವಸ್ತುಗಳು ಸೇರಿದಂತೆ ಸುಮಾರು ₹1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

1001803991

ಬೆಂಕಿ ಕಾಣಿಸಿಕೊಂಡಾಗ ಸಾರ್ವಜನಿಕರು ನೀರು ಹರಿಸಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ದಿನಸಿ ಸಾಮಗ್ರಿಗಳು, ಬಟ್ಟೆ, ಮನೆ ಬಳಕೆಯ ವಸ್ತುಗಳು ಸಹ ಸಂಪೂರ್ಣ ಸುಟ್ಟಿದ್ದರಿಂದ ರೈತ ನಾಗರಾಜು ತೀವ್ರ ಅಳಲು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001803998

ಪ್ರಾಣಹಾನಿ ತಪ್ಪಿದ್ದರೂ ಆರ್ಥಿಕ ಹಾನಿ ಮಾತ್ರ ಭಾರಿಯಾಗಿದೆ ಎಂದು ಸ್ಥಳೀಯರು, ರೈತನಿಗೆ ತಕ್ಷಣ ಪರಿಹಾರ ನೀಡುವಂತೆ ಸರ್ಕಾರ ಹಾಗೂ ಕೃಷಿ ಇಲಾಖೆಗಳಿಗೆ ಮನವಿ ಮಾಡಿದರು.

ಬೆಂಕಿಗೆ ಆಹುತಿಯಾಗಿ ಅವರು ವಾಸಿಸುತ್ತಿದ್ದ ಗುಡಿಸಿಲಿನಲ್ಲಿ ಶೇಂಗಾ, ಜೋಳ, ರಾಗಿ, ಅಳಸಂಡೆ ಸೇರಿದಂತೆ ಹಲವು ಬೆಳೆಗಳ ಬೀಜಗಳು ಹಾಗೂ ಕೃಷಿಗೆ ಉಪಯೋಗವಾಗುವ ಪರಿಕರಗಳು ಇಡಲಾಗಿದ್ದು ,ಆಕಸ್ಮಿಕ ಬೆಂಕಿಯಿಂದ ಎಲ್ಲವೂ ಸುಟ್ಟು ಹೋಗಿರುವ ಈ ದುರ್ಘಟನೆಯಿಂದ ರೈತ ಜೀವನದಲ್ಲಿ ಕಂಗಾಲಾಗಿದ್ದಾರೆ.

ರೈತನ ಕಷ್ಟಕ್ಕೆ ಸ್ಪಂದಿಸಿ ಧೈರ್ಯ ತುಂಬಿದ ಗ್ರಾಮಪಂಚಾಯಿತಿ

ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ಥಳಕ್ಕೆ ಭೇಟಿ ನೀಡಿದ ಪಿಡಿಒ ರವಿ ಜಾಮಗೊಂಡ, ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಜಗನ್ನಾಥ್, ಸದಸ್ಯೆ ಸಿದ್ದಗಂಗಮ್ಮ ಮತ್ತು ರವೀಶ್ ಕುಮಾರ್ ಅವರು ರೈತ ನಾಗರಾಜು ಅವರಿಗೆ ತಾತ್ಕಾಲಿಕ ಪರಿಹಾರವಾಗಿ ಚೆಕ್ ವಿತರಿಸಿ ಧೈರ್ಯ ತುಂಬಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...