ಕೊರಟಗೆರೆ | ಕೆರೆಯಾಗಹಳ್ಳಿ ಸೇತುವೆ ಕಾಮಗಾರಿ : ಸಂಚಾರಕ್ಕೆ ಅಡ್ಡಿ ; ಪರ್ಯಾಯ ರಸ್ತೆ ದುರಸ್ತಿಗೆ ಆಗ್ರಹ

Date:

ಗೊರವನಹಳ್ಳಿ ರಸ್ತೆಗೆ ಸೇತುವೆ ನಿರ್ಮಿಸಲು ಕಾಮಗಾರಿ ಪ್ರಗತಿಯಲ್ಲಿದ್ದು, ಪರ್ಯಾಯವಾಗಿ ನಿರ್ಮಿಸಿದ್ದ ರಸ್ತೆಯೂ ಗುಂಡಿಗಳಿಂದ ಹದಗೆಟ್ಟಿದ್ದು, ಕಲ್ಲು ತುಂಬಿದ ಟ್ರಾಕ್ಟರ್ ಸಿಲುಕಿ ವಾಹನಗಳ ಸಂಚಾರಕ್ಕೆ ಕಿರಿಕಿರಿ ಉಂಟಾಗುತ್ತಿರುವ ಘಟನೆ ಮಂಗಳವಾರ ಜರುಗಿದೆ.

ಕೊರಟಗೆರೆ ತಾಲ್ಲೂಕಿನ ಶ್ರೀ ಕ್ಷೇತ್ರ ಗೊರವನಹಳ್ಳಿ ರಸ್ತೆಯ ಮಾರ್ಗದ ಕೆರೆಯಾಗಹಳ್ಳಿ ಗ್ರಾಮ ಸಮೀಪ ನಿರ್ಮಿಸುತ್ತಿರುವ ಸೇತುವೆಯ ಪಕ್ಕದಲ್ಲಿಯೇ ಪರ್ಯಾಯ ಮಣ್ಣಿನ ರಸ್ತೆಯಲ್ಲಿಯೇ ಟ್ರಾಕ್ಟರ್ ಸಿಲುಕಿ ವಾಹನ ಸಂಚರಿಸಲು ಹರಸಾಹಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

1001808577

ಸುಮಾರು ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಮಳೆಗಾಲದ ಸಂಧರ್ಭದಲ್ಲಿ ಕಾಮಗಾರಿ ಶುರು ಮಾಡಿರುವುದು ಪ್ರತಿದಿನ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಭಾಗದ ಜನರು ಕೊರಟಗೆರೆ ಹಾಗೂ ಬೆಂಗಳೂರು, ತುಮಕೂರು ಸೇರಿದಂತೆ ನಗರ ಪ್ರದೇಶಗಳಿಗೆ ಉದ್ಯೋಗ ಹರಸಿ ಆಟೋ, ತಮ್ಮ ದ್ವೀಚಕ್ರವಾಹನಗಳ ಮೂಲಕ ಪ್ರಯಾಣ ಬೆಳೆಸುವ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಗ್ರಾಮಸ್ಥರ ಅಭಿಪ್ರಾಯವಾಗಿದೆ

1001808576

ಕೊರಟಗೆರೆ-ಗೊರವನಹಳ್ಳಿಗೆ ಪ್ರತಿದಿನ ಸರ್ಕಾರಿ ಸಾರಿಗೆ ಬಸ್ಸು ಸಂಚರಿಸುವ ರಸ್ತೆಯೇ ಈ ರೀತಿ ಟ್ರಾಕ್ಟರ್ ಸಿಲುಕಿಕೊಂಡು ಕೆಲ ಕಾಲ ಬಸ್ಸು ನಿಂತು ಸಮಸ್ಯೆ ಬಗೆಹರಿಸಲು ಸಾಧ್ಯವಾಗದೇ ಬಸ್ಸು ಹಿಂತುರಿಗಿ ಬೇರೊಂದು ರಸ್ತೆ ಮಾರ್ಗವಾಗಿ ಸಂಚರಿಸಿ ಕೊರಟಗೆರೆ ತಲುಪವಂತಹ ವಾತಾವರಣ ನಿರ್ಮಾಣವಾಗಿದ್ದು, ಬೆಂಗಳೂರಿನಂತಹ ನಗರಗಳಿಂದ ಆಗಮಿಸುವ ಭಕ್ತಾದಸಿಗಳಿಗೂ ಈ ಸಮಸ್ಯೆಯೂ ಕಾಡಿದ್ದು ಕಂಡು ಬಂದಿದ್ದ, ಇಂತಹ ರಸ್ತೆ ಕಾಮಗಾರಿಗಳನ್ನು ಮಾಡುತ್ತಿರುವ ಸಂಬಂಧಪಟ್ಟ ಇಲಾಖೆ ಹಾಗೂ ಕಂಟ್ರಾಕ್ಟರ್ ಸೂಕ್ತ ಕ್ರಮವಹಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಂಡುವಂತೆ ಗೊರವನಹಳ್ಳಿ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ಮಾತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...