ಕೊರಟಗೆರೆ | ಬೈಚಾಪುರ ಗ್ರಾಪಂ ಅಧ್ಯಕ್ಷೆಯಾಗಿ ರಾಮಲಕ್ಷ್ಮಮ್ಮ ಆಯ್ಕೆ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಪಡಿಸುವುದೇ ನಮ್ಮ ಗುರಿ ಎಂದು ನೂತನ ಅಧ್ಯಕ್ಷೆ ರಾಮಲಕ್ಷ್ಮಮ್ಮ ತಿಳಿಸಿದರು.

ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ ಗುರುವಾರ ಅವಿರೋಧ ಆಯ್ಕೆಯಾಗಿ ಮಾತನಾಡಿದರು.

ಈ ಹಿಂದೆ ತಿಪ್ಪೇಶ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. 19 ಮಂದಿ ಸದಸ್ಯರಲ್ಲಿ ೪ಮಂದಿ ಸದಸ್ಯರು ಗೈರಾಗಿದ್ದು, 15  ಸದಸ್ಯರು ಮಾತ್ರ ಚುನಾವಣೆ ವೇಳೆ ಹಾಜರಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಮಲಕ್ಷಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಸದಸ್ಯರ ಒಮ್ಮತದಂತೆ ಅವಿರೋಧ ಆಯ್ಕೆಯ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಅಪೂರ್ವ ಅಧಿಕೃತ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಗ್ರಾ.ಪಂ ಅಧ್ಯಕ್ಷೆ ರಾಮಲಕ್ಷಮ್ಮ ಮಾತನಾಡಿ, ಗೃಹ ಸಚಿವರಾದ ಡಾ.ಜಿ ಪರಮೇಶ್ವರ್‌ರವರ ಆಶೀರ್ವಾದದಿಂದ ಮತ್ತು ಸದಸ್ಯರ ಬೆಂಬಲದಿಂದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ಗ್ರಾ.ಪಂ ಎಲ್ಲಾ ಗ್ರಾಮಗಳಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿ ಪಡಿಸುವ ಉದ್ಧೇಶ ಹೊಂದಿದ್ದೇನೆ. ಆಯ್ಕೆ ಮಾಡಿದ ಸದಸ್ಯರಿಗೆ ಕೃತಜ್ಞತೆ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ವೆಂಕಟೇಶ್‌ಬಾಬು ಮಾತನಾಡಿ, ಬಸವನಹಳ್ಳಿ ಗ್ರಾಮಕ್ಕೆ ಈ ದಿನ ವಿಶೇಷವಾದ ದಿನ, 30 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಗ್ರಾಮದಿಂದ ಅಧ್ಯಕ್ಷರಾಗಿರುವುದು, ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಆಶೀರ್ವಾದದಿಂದ ಸದಸ್ಯರು ಬೆಂಬಲ ಸೂಚಿಸಿ ನಮ್ಮ ತಾಯಿ ರಾಮಲಕ್ಷಮ್ಮ ರವರನ್ನು ಆಯ್ಕೆ ಮಾಡಿದ್ದು, ಸದಸ್ಯರ ಬೆಂಬಲಕ್ಕೆ ನಮ್ಮ ಕುಟುಂಬ ಚಿರಖುಣಿಯಾಗಿದೆ ಎಂದು ಹೇಳಿ ತಾಯಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾ.ಪಂ ಪಿಡಿಓ ಉಮೇಶ್ ಮಾತನಾಡಿ, ಚುನಾವಣಾಧಿಕಾರಿ ಅಪೂರ್ವ ಅನಂತರಾಮುರವರ ನೇತೃತ್ವದಲ್ಲಿ ಸದಸ್ಯರ ಒಮ್ಮತದಂತೆ ರಾಮಲಕ್ಷಮ್ಮರವರು ಅಧ್ಯಕ್ಷೆಯಾಗಿ ಗುರುವಾರ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಈ ವೇಳೆ ಗ್ರಾ.ಪಂ ಸದಸ್ಯರಾದ ಸಮೀಉಲ್ಲಾ, ಲಕ್ಷ್ಮೀಪತಿ, ತಿಪ್ಪೇಶ್, ಗೋವಿಂದರಾಜು, ಮಂಜುನಾಥ್ ಆರ್‌ಸಿ, ಕಾಂಚನ, ವೆಂಕಟಾಚಲಯ್ಯ, ಮೀನಾಕ್ಷಿ, ಅರಸಮ್ಮ, ಶೋಭಾ, ಕರಿಯಪ್ಪ, ಕೆಂಪಲಕ್ಷಮ್ಮ, ಬಸಮ್ಮ, ನಾಗರಾಜು, ಗ್ರಾ.ಪಂ ಪಿಡಿಓ ಉಮೇಶ್, ತಾ.ಪಂ ಮಾಜಿ ಉಪಾಧ್ಯಕ್ಷ ವೆಂಕಟಪ್ಪ, ಮಾಜಿ ಗ್ರಾ.ಪಂ ಅಧ್ಯಕ್ಷ ನಾಗರಾಜು, ವೆಂಕಟೇಶ್, ತಾ.ಪಂ ಮಾಜಿ ಸದಸ್ಯ ರಾಜಣ್ಣ, ಮುಖಂಡರಾದ ನವೀನ್, ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...