ಕೊರಟಗೆರೆ | ತೆರಿಗೆ ಪಾವತಿ ಮಾಡದ ಶಿವಗಂಗ ಚಿತ್ರಮಂದಿರ ಜಪ್ತಿ

Date:

 ಲಕ್ಷಾಂತರ ರೂಪಾಯಿಗಳಷ್ಟು ತೆರಿಗೆ ಹಣಪಾವತಿ ಮಾಡದ ಶ್ರೀ ಶಿವಗಂಗ ಚಿತ್ರಮಂದಿರ, ಕಲ್ಯಾಣಮಂಟಪ ಹಾಗೂ ಹೋಟೆಲ್ ಗೆ ಬೀಗ ಹಾಕಿ ಸೀಲ್ ಮಾಡಿರುವ ಘಟನೆ ಶುಕ್ರವಾರ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಕ್ಕಿರಾಂಪುರ ಮೂಲದ ಗಂಗಾಧರಪ್ಪ ಮಾಲೀಕತ್ವದ ಶ್ರೀ ಶಿವಗಂಗಚಿತ್ರಮಂದಿರ, ಕಲ್ಯಾಣ ಮಂಟಪ, ಹೋಟೆಲ್ ಗಳಿಗೆ ಪಟ್ಟಣ ಪಂಚಾಯಿತಿ ನೋಟಿಸ್ ನೀಡಿದ್ದು, ಪ್ರತಿಕ್ರಿಯಿಸದ ಮಾಲೀಕರ ಬೇಜವಾಬ್ದಾರಿ ವರ್ತನೆಗೆ ಸ್ಥಳಕ್ಕೆಭೇಟಿ ನೀಡಿದ ಪಟ್ಟಣಪಂಚಾತಿಯಿ ಮುಖ್ಯಾಧಿಕಾರಿ ಬೀಗಜಡಿದು ಬಾಗಿಲು ಮುಚ್ಚಿಸುವ ಕೆಲಸ ಮಾಡಿದ್ದಾರೆ.

ಅನೇಕ ಬಾರಿ ನೋಟಿಸ್ ನೀಡಿದರು ಸುಮಾರು ೧೦ಲಕ್ಷ ರೂಗಳಷ್ಟು ತೆರಿಗೆ ಹಣವನ್ನು ಪಾವತಿ ಮಾಡದೆ ನಿರ್ಲಕ್ಷ್ಯ ವಹಿಸಿದ್ದ ಮಾಲೀಕರಿಗೆ ಎಚ್ಚರಿಕೆ ನೀಡುವ ಮೂಲಕ ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ತೆರಿಗೆ ಹಣ ಪಾವತಿ ಮಾಡುವವರೆಗೂ ಚಿತ್ರಮಂದಿರ ಸೇರಿದಂತೆ ಕಲ್ಯಾಣ ಮಂಟಪ ಮತ್ತು ಹೋಟೆಲ್ ನಡೆಸದಂತೆ ಬೀಗ ಹಾಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ನೋಟಿಸ್ ನೀಡದೇ ಏಕಾಏಕಿ ಬಂದು ಪಟ್ಟಣ ಪಂಚಾಯಿತಿಯವರು ಬೀಗ ಹಾಕಿಸಿ ಬಾಗಿಲು ಮುಚ್ಚಿಸಿದ್ದು, ಚಿತ್ರಮಂದಿರಕ್ಕೆ ಇಂದು ಶುಕ್ರವಾರ ವಾದಕಾರಣ ಚಲನಚಿತ್ರವನ್ನು ಪ್ರರ್ದಶನ ಮಾಡಲಾಗಿತ್ತು, ಸಿನಿಮಾ ವೀಕ್ಷಣೆಗೆ ಬಂದ ಪ್ರೇಕ್ಷಕರು ವಾಪಾಸ್ಸು ಹೋಗಿದ್ದರಿಂದ ನಮಗೆ ನಷ್ಟ ಉಂಟಾಗಿದೆ ಎಂದು ವ್ಯವಸ್ಥಾಪಕ ಆಕ್ರೋಶ ವ್ಯಕ್ತಡಿಸಿದ್ದಾರೆ.

ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಹೆಲ್ತ್ ಇನ್ಸ್ಪೆಕ್ಟರ್ ಮಹಮ್ಮದ್ ಹುಸೇನ್, ಆರ್‌ಐ ವೇಣುಗೋಪಾಲ್, ಶೈಲೇಂಧ್ರ, ವೆಂಕಟೇಶ್ ಸೇರಿದಂತೆ ಸಿಬ್ಬಂದಿಗಳು ಇದ್ದರು.

“ನೋಟಿಸ್ ನಲ್ಲಿರುವ ಪ್ರಕಾರ ಕಳೆದ ೩ದಿನಗಳ ಹಿಂದೆ ನೋಟಿಸ್ ನೀಡಬೇಕಿತ್ತು ಆದರೆ ಗುರುವಾರ ನೋಟಿಸ್ ಅಂಟಿಸಿ ಮರುದಿನ ಏಕಾಏಕಿ ಬಂದು ಗಡುವು ನೀಡದೆ ಬಾಗಿಲು ಮುಚ್ಚಿಸುವ ಕೆಲಸ ಮಾಡಿದ್ದಾರೆ. ನಮಗೆ ಇಲ್ಲಿಯವರೆಗೂ ಯಾವುದೇ ನೋಟಿಸ್ ಬಂದಿಲ್ಲ, ಕೋರ್ಟ್ ನಲ್ಲಿ ತಡೆಯಾಜ್ಞೆ ಇರುವ ಕಾರಣ ಕಂದಾಯ ಕಟ್ಟಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಆದೇಶವನ್ನು ಸ್ವೀಕರಿಸಿ ಪಟ್ಟಣಪಂಚಾಯಿತಿಗೆ ನೀಡಿ ಕಂದಾಯ ಪಾವತಿಸುತ್ತೇವೆ ಎಂದು ಶಿವಗಂಗ ಚಿತ್ರಮಂದಿರದ ಮ್ಯಾನೇಜರ್  ಅನಿಲ್ ಕುಮಾರ್ ತಿಳಿಸಿದ್ದಾರೆ.

” ಅನೇಕ ಬಾರಿ ನೋಟಿಸ್ ನೀಡಿದರೂ ಸರಿಯಾದ ರೀತಿ ತೆರಿಗೆ ಹಣಪಾವತಿ ಮಾಡಿದೆ ಸುಮಾರು ೧೦ಲಕ್ಷ ರೂಪಾಯಿಗಳಷ್ಟು ಹಣ ಬಾಕಿ ಉಳಿಸಿಕೊಂಡಿದ್ದರು. ಕಳೆದ ಬಾರಿ ಮಾಲೀಕರ ಮನವಿಗೆ ಕಾಲಾವಕಾಶ ನೀಡಿದ್ದು, ಆದರೆ ಮತ್ತೊಮ್ಮೆ ನೋಟಿಸ್ ನೀಡಲು ಬಂದಾಗ ನಿರಕರಿಸಿರುತ್ತಾರೆ ಆದ ಕಾರಣಕ್ಕೆ ಬಾಗಿಲು ಹಾಕಿಸುವ ಕೆಲಸ ಮಾಡಿದ್ದೇವೆ. ಪಟ್ಟಣದ ಅಂಗಡಿ, ಮಳಿಗೆಗಳ ಮಾಲೀಕರು ಬಾಕಿ ಉಳಿಸಿಕೊಂಡಿರುವ ಕಂದಾಯವನ್ನು ಪಾವತಿಸಲು ಈ ಮೂಲಕ ಮನವಿ ಮಾಡುತ್ತೇವೆ ಎಂದು ಕೊರಟಗೆರೆ ಪ.ಪಂ ಮುಖ್ಯಾಧಿಕಾರಿ ಕೆ.ಎಸ್ ಉಮೇಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...