ಕೊರಟಗೆರೆ | ಕಾಲ್ತುಳಿತ ಪ್ರಕರಣ : ಸರ್ಕಾರವೇ ನೇರ ಕಾರಣ ; ಬಿಜೆಪಿ ಆರೋಪ

Date:

  ಐಪಿಎಲ್ ಕ್ರಿಕೆಟ್ ವಿಜಯದಿಂದ ಇಡೀ ಕನ್ನಡಿಗರು ಸಂಭ್ರಮಾಚರಣೆ ಮಾಡುವ ಮೂಲಕ ಸಂತಸದಲಿದ್ದರು, ರಾಜ್ಯ ಸರ್ಕಾರದ ಮಹಾ ಎಡವಟ್ಟಿನಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಅಮಾಯಕ ಯುವಕ-ಯುವತಿಯರ ಬಲಿ ಪಡೆದ ಕಾಂಗ್ರೇಸ್ ಸರ್ಕಾರ ನೇರಹೊಣೆ ಹೊರಬೇಕಿದೆ ಎಂದು ಬಿಜೆಪಿ ಮುಖಂಡ ಬಿ.ಹೆಚ್ ಅನಿಲ್‌ಕುಮಾರ್ ಆಗ್ರಹಿಸಿದರು.

ಕೊರಟಗೆರೆ ಪಟ್ಟಣದ ಪಂಚಾಜನ್ಯ ಕಛೇರಿಯಲ್ಲಿ ಶನಿವಾರ ಏರ್ಪಸಿದ್ದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು,  18 ವರ್ಷಗಳ ನಂತರ ಆರ್.ಸಿ.ಬಿ. ಐಪಿಎಲ್ ಟ್ರೋಫಿ ಗೆದ್ದತ್ತು, ರಾಜ್ಯ ಸರ್ಕಾರ ಯೋಜನೆ ರೂಪಿಸದೆ ಟ್ರೋಫಿ ಗೆದ್ದ ಕೆಲವೇ ಗಂಟೆಗಳಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜೂನ್ 4 ರಂದು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿ ಆರ್‌ಸಿಬಿ ತಂಡದ ಸದಸ್ಯರನ್ನು ಸನ್ಮಾನಿಸಲು ಕ್ರಿಕೆಟ್ ಅಭಿಮಾನಿಗಳನ್ನು ಆಹ್ವಾನಿಸಿರುವುದು ಕಾಂಗ್ರೆಸ್ ಸರ್ಕಾರ ಈ ನಡೆಯಿಂದ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ 11 ಜನ ಕ್ರಿಕೇಟ್ ಅಭಿಮಾನಿಗಳು ದುರ್ಮರಣ ಹೊಂದಿರುವುದು ನೇರ ಕಾರಣ ಸರ್ಕಾರ ಹೊರಬೇಕು, ರಾಜಕೀಯ ತಪ್ಪುಗಳನ್ನು ಮುಚ್ಚಿ ಹಾಕಲು ಕಮಿಷನರ್ ತಲೆದಂಡ ಮಾಡಿದ ರಾಜ್ಯಸರ್ಕಾರ ನಾಟಕದ ಆಟವಾಡಲು ಶುರು ಮಾಡಿದೆ, ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಲಿದ್ದಾಸಿಸರಿಯಲ್ಲ   ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕಾನೂನು ಸುವ್ಯಸ್ಥೆಯನ್ನು ಕಾಪಾಡಬೇಕಾದ ನಮ್ಮ ಕ್ಷೇತ್ರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಘಟನೆಯಲ್ಲಿ ನೈತಿಕ ಹೊಣೆಯನ್ನು ಒತ್ತು ಶೀಘ್ರವೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಘಟಕದ ತಾಲೂಕು ಅಧ್ಯಕ್ಷ.ದರ್ಶನ್  ಮಾತನಾಡಿ ಕಾಲ್ತುಳಿತದಿಂದ ಎದೆಮಟ್ಟಕ್ಕೆ ಬೆಳೆದ ಮಕ್ಕಳನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. 18 ವರ್ಷಗಳಲ್ಲಿ ವಿಜಯಸಾಧಿಸಿ ಐಪಿಎಲ್ ಟ್ರೋಫಿ ಗೆದ್ದ ಆರ್.ಸಿ.ಬಿ ತಂಡ. ಹತುರದ ಸನ್ಮಾನ ಕಾರ್ಯಕ್ರಮದಿಂದ ಅಭಿಮಾನಿಗಳು ಕಾಲ್ತುಳಿತಕ್ಕೆ ಬಲಿಯಾದರೆ ಇನ್ನೋಂದು ಕಡೆ ಕೈತುಳಿತ್ತಕ್ಕೆ ಅಧಿಕಾರಿಗಳು ಬಲಿಯಾಗಿದ್ದಾರೆ ಎಂದರು.

ಈ ದುರ್ಘಟನೆ ಸಂಭವಿಸಲು ಸರ್ಕಾರದ ನಿಲುವೇ ಕಾರಣವಾಗಿದೆ ಅಧಿಕಾರಿಗಳು ಸರ್ಕಾರ ನೀಡಿದ ಮಾಹಿತಿಯಂತೆ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ, ಈ ಸರ್ಕಾರಕ್ಕೆ ಗೆದ್ದಾಗ ಸಹಕಾರ ನೀಡಲು ಪೊಲೀಸ್ ಇಲಾಖೆ ಬೇಕಾಗಿದೆ, ಪೊಲೀಸ್ ಪರ ನಿಲ್ಲಲು ನಮ್ಮ ಎನ್‌ಡಿಎ ಹಾಗೂ ಜೆಡಿಎಸ್ ಪಕ್ಷ ಜೊತೆ ನಿಂತು ಸದಾ ಬೆಂಬಲಕ್ಕೆ ಸಿದ್ಧವಿದೆ ಎಂದರು.

ಸುಂದರ ಬದುಕನ್ನು ಕಟ್ಟಿಕೊಂಡು ಜೀವನ ನಡೆಸಬೇಕಿದ್ದ ಯುವಕರ ಸಾವಿಗೆ ಸರ್ಕಾರವೇ ನೇರಹೊಣೆ ಹೊರಬೇಕಾಗಿದೆ ಆದರೆ ರಾಜಕೀಯ ಉದ್ದೇಶಕ್ಕೆ ನಿಷ್ಠಾವಂತ ಕಮಿಷನರ್ ಸೇರಿದಂತೆ ಅಧಿಕಾರಗಳ ತಲೆದಂಡ ಸರಿಯಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...