ಕೋಡಿ ಕನ್ಯಾಣ- ಸಂಘ ಸಂಸ್ಥೆಗಳಿಂದ ಯಕ್ಷಕಲೆ ಉಳಿವು : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೋಯುಲ್ಲಿ ಸಂಘಸಂಸ್ಥೆಗಳ ಪಾತ್ರ ಗಣನೀಯವಾದದ್ದು ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಕೋಡಿ ಕನ್ಯಾಣ‌ ಶ್ರೀರಾಮ ದೇಗುಲದ ವಠಾರದಲಿ ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘ ಕೋಡಿ ಕನ್ಯಾಣ ಇವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇಲ್ಲೆ ಇವರ ಸಹಯೋಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಯಕ್ಷ ವೇದಿಕೆ ಕೋಡಿ ಕನ್ಯಾಣ ಇವರ ಕೂಡುವಿಕೆಯಲ್ಲಿ ಪ್ರತೀಶ್ ಕುಮಾರ್ ಬ್ರಹ್ಮಾವರ ಇವರ ನಿರ್ದೇಶನದಲ್ಲಿ ಯಕ್ಷಗಾನ ಕುಶ-ಲವ ಕುಟುಂಬ, ಜಾನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಕ್ಷಗಾನ ಕಲೆ ಅತ್ಯಂತ ಶ್ರೀಮಂತ ಕಲೆಯಾಗಿದ್ದು ಕರಾವಳಿ ಈ ಮಣ್ಣಿನ ಸೊಗಡಿಗೆ ಭಾಷಾ ಜ್ಞಾನದ ಜತೆಗೆ ಸಂಸ್ಕೃತಿಯನ್ನು ಅನಾವರಣಗೊಳಿಸಿದೆ. ಈ ದಿಸೆಯಲ್ಲಿ ಶ್ರೀರಾಮಪ್ರಸಾದಿತ ಯಕ್ಷಗಾಮ ಕಲಾ ಸಂಘ ಯುವ ಕಲಾವಿದರಿಗೆ ಸ್ಪೂರ್ತಿಯ ಸೆಲೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಶ್ರೀರಾಮಪ್ರಸಾದಿತ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಜಗನ್ನಾಥ ಅಮೀನ್ ಕೋಡಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಸಾಮಾಜಿಕ ಕಾರ್ಯಕರ್ತರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ ಕೃಷ್ಣ ಕಾಂಚನ್, ಸಂಘದ ಸಂಸ್ಥಾಕ ಮಹಾಬಲ ಭಂಡಾರಿ, ಮಾಜಿ ಜಿ.ಪಂ ಸದಸ್ಯ ಶಂಕರ್ ಎ ಕುಂದರ್, ಯಾಂತ್ರಿಕ ಮೀನುಗಾರ ಸಂಘ ಹಂಗಾರಕಟ್ಟೆ ಕೋಡಿ ಬೇಂಗ್ರೆ ಅಧ್ಯಕ್ಷ ರಾಜು ಎನ್ ಬಂಗೇರ, ಶ್ರೀ ರಾಮ ದೇಗುಲದ ಅಧ್ಯಕ್ಷ ರಾಘವೇಂದ್ರ ಕರ್ಕೇರ,ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ, ರಾಮ ದೇಗುಲದ ಪ್ರದಾನ ಅರ್ಚಕ ಭಾಸ್ಕರ್ ಬಾಯರಿ,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸುರೇಂದ್ರ ಕೋಡಿ, ಉದ್ಯಮಿ ಅಂತೋನಿ ಡಿಸೋಜ, ಕೋಡಿ ಶಾಲಾ ದೈಹಿಯ ಶಿಕ್ಷಣ ಶಿಕ್ಷಕರಾದ ವಿಜಯ ನಾಯರಿ, ಉದ್ಯಮಿ ಶಂಕರ್ ಕುಂದರ್ ಉಪಸ್ಥಿತರಿದ್ದರು.ಸಂಘದ ರಾಜೇಶ್ ಎನ್ ಕರ್ಕೇರ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು, ರಾಧಕೃಷ್ಣ ಸಾಲಿಯಾನ್ ವಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ನಂತರ ಪ್ರತೀಶ್ ಕುಮಾರ್ ನಿರ್ದೇಶನದಲ್ಲಿ ಸಂಘದ ಕಲಾವಿದರಿಂದ ಕುಶಲವ ಕುಟುಂಬ ಯಕ್ಷಗಾನ ಪ್ರದರ್ಶನ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸರಸ್ಪತಿ ಜಾನಪದ ತಂಡ ಮಲ್ಪೆ ಇವರಿಂದ ಜಾನಪದ ನೃತ್ಯೋತ್ಸವ ಸ್ಥಳೀಯ ಸಂಘ ಸಂಸ್ಥೆಗಳಿಂದ ಜನಪದ ಗೀತೆಗಳು ಮತ್ತು ಭಾವಗೀತಾ ಸಂಗೀತೆಗಳು ಜರಗಿದವು.

ಶ್ರೀ ರಾಮ ಪ್ರಸಾದಿತ ಯಕ್ಷಗಾನ ಕಲಾ ಸಂಘ ಕೋಡಿ ಕನ್ಯಾಣ ಇವರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀ ಕೃಷ್ಣ ಯಕ್ಷ ವೇದಿಕೆ ಕೋಡಿ ಕನ್ಯಾಣ ಇವರ ಕೂಡುವಿಕೆಯಲ್ಲಿ ಪ್ರತೀಶ್ ಕುಮಾರ್ ಬ್ರಹ್ಮಾವರ ಇವರ ನಿರ್ದೇಶನದಲ್ಲಿ ಯಕ್ಷಗಾನ ಕುಶ-ಲವ ಕುಟುಂಬ, ಜಾನಪದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಯುವ ಕಲಾವಿದರನ್ನು ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...