ಉಡುಪಿ | ಮನುವಾದಿಗಳು ಸಂವಿಧಾನ, ನ್ಯಾಯಾಂಗದ ಮೇಲೆ ದಾಳಿ ನಡೆಸುತ್ತಿದ್ದಾರೆ – ಕೋಟ ನಾಗೇಂದ್ರ ಪುತ್ರನ್

Date:

ಮನುವಾದಿಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿಲ್ಲದೆ, ಬಾಯಿಗೆ ಬಂದಂತೆ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮನುವಾದಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಾ. ಗವಯ್ ಅವರ ಮೇಲೆ ಶೂ ಎಸೆದಿದ್ದಾರೆ. ಇದು ಕೇವಲ ವ್ಯಕ್ತಿಗೆ ಅಲ್ಲ, ಭಾರತದ ಸಂವಿಧಾನ, ನ್ಯಾಯಾಂಗ ಮೇಲಿನ ದಾಳಿ. ಇಂಥ ಕೃತ್ಯಗಳು ಸಂವಿಧಾನದ ಮೂಲ ತತ್ವಗಳನ್ನೇ ಬುಡಮೇಲು ಮಾಡಲು ಹೊರಟಿರುವ ಮನುವಾದಿಗಳ ನಿಜಸ್ವಭಾವವನ್ನು ತೋರಿಸುತ್ತದೆ. ಒಬ್ಬ ಹಿರಿಯ ವಕೀಲ ಹೀಗೆ ಮಾಡಿರುವುದು ಆಶ್ಚರ್ಯಕರ. ಮಾನ್ಯ ಸುಪ್ರೀಂ ಕೋರ್ಟ್ ಚೀಫ್ ಜಸ್ಟಿಸ್‌ಗಳ ಮೇಲೆ ಶೂ ಎಸೆದು, ಅದನ್ನು ಸಮರ್ಥಿಸಿಕೊಂಡಿರುವುದು ಅನಾಗರಿಕತೆಯ ಸೂಚನೆ. ಇದು ಕಾನೂನಿನ ಗೌರವಕ್ಕೆ ಧಕ್ಕೆ ತರುವ ಕಾರ್ಯವಾಗಿದೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗವಯ್ ಅವರ ಮೇಲೆ ನಡೆದಿರುವ ಈ ದಾಳಿ ಜಾತಿ ದ್ವೇಷದಿಂದ ಪ್ರೇರಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗವಯ್ ಅವರ ಕುತ್ತಿಗೆಗೆ ಮಡಿಕೆ ಹಾಕಿ, ಅವರಿಗೆ ಚಪ್ಪಲಿಯಲ್ಲಿ ಹೊಡೆಯುವ ಫೋಟೋಗಳನ್ನು ಹಂಚಿರುವುದನ್ನು ನಾನು ನೋಡಿದ್ದೇನೆ. ಇದು ಸಂಪೂರ್ಣವಾಗಿ ದಲಿತ ಸಮುದಾಯದ ವಿರುದ್ಧದ ಅವಮಾನಕಾರಿ ಕೃತ್ಯ, ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಬ್ರಾಹ್ಮಣ ಹುಡುಗನ ಜನಿವಾರ ತೆಗೆದ ಘಟನೆಗೆ ಬೆಂಕಿ ಹಚ್ಚಿದ ಬಿಜೆಪಿ ನಾಯಕರು, ಇದೀಗ ಗವಯ್ ಅವರ ಮೇಲೆ ಶೂ ಎಸೆದ ವಿಷಯದಲ್ಲಿ ಮೌನವಾಗಿರುವುದು ಇತಿಹಾಸದಲ್ಲಿ ಮರೆಯಲಾಗದ ಲಜ್ಜಾಸ್ಪದ ಘಟನೆ. ನ್ಯಾಯಮೂರ್ತಿ ಮೇಲೆ ಶೂ ಎಸೆದ ವ್ಯಕ್ತಿಯನ್ನು ಕಾಪಾಡುವ ಧೋರಣೆ ಅಸಹ್ಯಕರವಾಗಿದೆ. ಭಾಸ್ಕರ್ ರಾವ್ ಅವರಂತಹ ಹಿರಿಯ ಅಧಿಕಾರಿ ನ್ಯಾಯಮೂರ್ತಿ ಮೇಲೆ ಶೂ ಎಸೆದಿರುವುದು ತಪ್ಪು, ಆದರೆ ಆ ವ್ಯಕ್ತಿಯ ಧೈರ್ಯ ಮೆಚ್ಚಬೇಕು’ ಎಂದು ಹೇಳುವುದು ಅತ್ಯಂತ ಲಜ್ಜಾಸ್ಪದ. ಇದು ಕಾನೂನು ಪಾಲಕರಿಂದ ಬಂದ ಲಜ್ಜೆ ಗೆಟ್ಟ ಹೇಳಿಕೆ ಆಗಿದೆ. ಇಂಥ ವ್ಯಕ್ತಿಗಳು ಸಮಾಜದಲ್ಲಿ ಹಿತಚಿಂತಕರಾಗಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...