ಉಡುಪಿ | 1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ, ಶಿಕ್ಷಣ ಸಚಿವ ಘೋಷಣೆ

Date:

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಹಿಂದೆ, ಮಕ್ಕಳು 1ನೇ ತರಗತಿಗೆ ದಾಖಲಾಗಲು ಕಡ್ಡಾಯವಾಗಿ 6 ವರ್ಷದ ವಯೋಮಿತಿಯನ್ನು ಪೂರೈಸಿರಬೇಕಿತ್ತು. ಇದರಿಂದ ಅಂಗನವಾಡಿ, ಎಲ್ ಕೆಜಿ, ಯುಕೆಜಿಗಳಲ್ಲಿ ಜೊತೆಗೆ ಇದ್ದು ತನ್ನ ಸಹಪಾಠಿ ಮಗು ಒಂದನೇ ತರಗತಿಗೆ ತೇರ್ಗಡೆ ಆಗುವಾಗ ಪ್ರಾಯದಲ್ಲಿ ಬರಿ 10, 20 ದಿನಗಳ ಅಂತರವಿರುವ ಮಗು ಮುಂದಿನ ಹಂತಕ್ಕೆ ತೇರ್ಗಡೆಯ ಅವಕಾಶ ಇಲ್ಲ ಅಂದಾಗ ಮಗುವಿನ ಮಾನಸಿಕ ಸ್ಥಿತಿ ಮತ್ತು ವಿದ್ಯಾಭ್ಯಾಸದಲ್ಲಿ ವ್ಯತ್ಯಾಸ ಆಗಬಹುದು.

ಆದ್ದರಿಂದ 2025 ನೇ ಸಾಲಿನಲ್ಲಿ ಶಾಲೆಗಳು ಶೀಘ್ರದಲ್ಲಿ ಪುನಃ ಆರಂಭವಾಗಲಿದ್ದು ಸರ್ಕಾರ ಕೂಡಲೇ ಜೂನ್ ತಿಂಗಳಲ್ಲಿ ಹುಟ್ಟಿದ ಮಗುವಿಗೆ ಯುಕೆಜಿ ಯಿಂದ 1ನೇ ತರಗತಿಗೆ ಮುನ್ನಡೆಯಲು ಸರಕಾರ ರಿಯಾಯಿತಿ ಕೊಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಇವರು ಇಲಾಖಾ ಸಂಬಂಧಿತರಿಗೆ ಸಾಕಷ್ಟು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಆ ಮನವಿಗೆ ಫಲಶೃತಿಯಾಗಿ ಶಿಕ್ಷಣ ಸಚಿವರು ಇದೀಗ ವಯೋಮಿತಿಯ ಮಾನದಂಡವನ್ನು ಸಡಿಲಿಸಿದ್ದಾರೆ.
5 ವರ್ಷ 5 ತಿಂಗಳು ವಯೋಮಾನವನ್ನು ಪೂರೈಸಿದ್ದ ಮಕ್ಕಳು 1ನೇ ತರಗತಿಗೆ ದಾಖಲಾಗಬಹುದಾಗಿದೆ. ಆದಾಗ್ಯೂ ಸಂಪೂರ್ಣ ಆರು ವರ್ಷ ಪೂರೈಸಿರದ ಮಕ್ಕಳು 1ನೇ ತರಗತಿಗೆ ದಾಖಲಾಗಲು ಅವರು ಯುಕೆಜಿ ಕಲಿತಿರಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

“ಎಲ್‌ಕೆಜಿ, ಯುಕೆಜಿಯಲ್ಲಿ ಕಲಿತಿದ್ದರೆ ಮಾತ್ರವೇ 5 ವರ್ಷ 5 ತಿಂಗಳು ಆಸುಪಾಸಿನ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಈ ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ವರ್ಷಕ್ಕೆ ಮಾತ್ರವೇ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...