ಉಡುಪಿ | ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಬಂಧನಕ್ಕೆ ಅಗ್ರಹ

Date:

ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಬಂಧನ ವಿಳಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2 ದಿನದಲ್ಲಿ ಬಂದಿಸದಿದ್ದಲ್ಲಿ ಠಾಣೆ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳದ ಧರ್ಮ ಸಂರಕ್ಷಣಾ‌ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡುವ ಕುರಿತು ರಟ್ಟಾಡಿ ಶ್ರೀರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ನವೀನಚಂದ್ರ ಶೆಟ್ಟಿ ರಟ್ಟಾಡಿ ಅವರಿಗೆ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ 29ರ ಹರೆಯದ ರಟ್ಟಾಡಿ ಗ್ರಾಮದ ಮಹಿಳೆ ಸೆ.2ರಂದು ಕರೆ ಮಾಡಿದ್ದರು.

ಈ ವೇಳೆ ನವೀನ್‌ಚಂದ್ರ ಶೆಟ್ಟಿ ತಾನು ಮನೆಯಲ್ಲಿರುವುದಾಗಿ ಹೇಳಿದ್ದು, ಮಧ್ಯಾಹ್ನ 1ಗಂಟೆಯೊಳಗೆ ಮನೆಗೆ ಬರುವಂತೆ ತಿಳಿಸಿದರು. ಅದರಂತೆ ಮಹಿಳೆ ಮಧ್ಯಾಹ್ನ 12ಗಂಟೆಯ ಸುಮಾರಿಗೆ ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿರುವ ನವೀನ್‌ಚಂದ್ರ ಶೆಟ್ಟಿಯ ಮನೆಗೆ ಹೋಗಿದ್ದು, ಅಲ್ಲಿ ನವೀನ್ ಚಂದ್ರ ಶೆಟ್ಟಿ ಜಗುಲಿಯ ಕುರ್ಚಿಯಲ್ಲಿ ಕುಳಿತ್ತಿದ್ದರು. ಈ ವೇಳೆ ಮಹಿಳೆ ಆಮಂತ್ರಣ ಪತ್ರಿಕೆಯನ್ನು ನವೀನ್‌ಚಂದ್ರ ಶೆಟ್ಟಿಯ ಕೈಗೆ ಕೊಟ್ಟಾಗ ಆತ ಮಹಿಳೆಯ ಕೈಯನ್ನು ಸ್ವರ್ಶಿಸಿ ಆಹ್ವಾನ ಪತ್ರಿಕೆ ತೆಗೆದುಕೊಂಡನು. ಇದರಿಂದ ಮಹಿಳೆಗೆ ಮುಜುಗರ ಉಂಟಾಗಿತ್ತೆಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಮಹಿಳೆ ಹೊರಡಲು ಸಿದ್ಧರಾದಾಗ ನವೀನ್‌ಚಂದ್ರ ಶೆಟ್ಟಿ ಎರಡು ನಿಮಿಷ ನಿಲ್ಲುವಂತೆ ಒತ್ತಾಯಿಸಿ, ಮಹಿಳೆ ಕುಳಿತ ಸೋಪಾದ ಪಕ್ಕದಲ್ಲಿ ಬಂದು ಕುಳಿತು, ಮಹಿಳೆಯನ್ನು ಹತ್ತಿರಕ್ಕೆ ಎಳೆದುಕೊಂಡು ಕೆನ್ನೆಗೆ ಮುತ್ತು ಕೊಟ್ಟಿರುವುದಾಗಿ ದೂರಲಾಗಿದೆ. ಇದರಿಂದ ಗಾಬರಿಗೊಂಡ ಮಹಿಳೆ ಅಲ್ಲಿಂದ ತಕ್ಷಣ ಎದ್ದು ಹೊರ ಬರುತ್ತಿರುವಾಗ, ನವೀನ್‌ಚಂದ್ರ ಶೆಟ್ಟಿ, ವಾಪಾಸು ಮನೆಗೆ ಬರುವಂತೆ ಹೇಳುತ್ತಾ ಹಿಂಬಾಲಿಸಿಕೊಂಡು ಬಂದಿರುವುದಾಗಿ ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ.11ರಂದು ಗುರುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಠಾಣೆಗೆ ತೆರಳಿ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಎರಡು ದಿನದಲ್ಲಿ ಠಾಣೆ ಎದುರಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗೋಪಾಲ, ಜಗನ್ನಾಥ, ರಾಘವೇಂದ್ರ, ಹರೀಶ್, ಕಿಶೋರ್, ಆದಿತ್ಯ, ರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...