ಉಡುಪಿ | ಸಾಲಿಗ್ರಾಮದಲ್ಲಿ ಅನಧಿಕೃತ ಘನ ತ್ಯಾಜ್ಯ ಘಟಕ ನಿರ್ಮಾಣ, ಪ್ರತಿಭಟನೆಯ ಎಚ್ಚರಿಕೆ

Date:

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ನ್ಯಾಯಾಲಯದ ಆದೇಶವನ್ನೂ ಮೀರಿ ಅನಧಿಕೃತ ಕಟ್ಟಡದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಘನ ತ್ಯಾಜ್ಯ ಘಟಕವನ್ನು ಉದ್ಘಾಟಿಸಲಾಗಿದೆ. ಇದರಿಂದ ಸುಮಾರು 1.80 ಕೋಟಿ ರು.ಗೂ ಮಿಕ್ಕಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ಕಾನೂನುಬಾಹಿರ ಜನವಿರೋಧಿ ಘಟಕದ ವಿರುದ್ಧ ಹೋರಾಟ ನಡೆಸುತ್ತಿರುವ ಸ್ಥಳೀಯರಾದ ನಾಗೇಂದ್ರ ಪುತ್ರನ್ ಹಾಗೂ ಮಹೇಶ್ ಪೂಜಾರಿ ಪಾರಂಪಳ್ಳಿ ಅವರು, ಸ್ಥಳೀಯ ವಿರೋಧದ ನಡುವೆಯೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉದ್ಘಾಟಿಸಿದ್ದಾರೆ ಎಂದು ಆರೋಪಿಸಿದರು.

ಈ ಘಟಕ ಸ್ಥಾಪಿಸಿರುವ 104 – 24, 25 ಸರ್ವೆ ನಂಬರ್ ಭೂಪರಿವರ್ತನೆಯಾಗಿಲ್ಲ, ಇಖಾತಾವೂ ಆಗಿಲ್ಲ, ಆದರೂ ಸಾಲಿಗ್ರಾಮ ಪಪಂ ಈ ಭೂಮಿಯನ್ನು ಖರೀದಿಸಿದ್ದು ಭೂಕಂದಾಯ ಕಾಯ್ದೆ 1964ರಡಿ ಅಕ್ರಮವಾಗಿದೆ. ಈ ಘಟಕವು ನದಿ ಪಕ್ಕದಿಂದ 50 ಮೀಟರ್ ವ್ಯಾಪ್ತಿಯೊಳಗೆ ಇರುವುದರಿಂದ ಸಿಆರ್‌ಝಡ್ ನಿಮಯ ಉಲ್ಲಂಘನೆಯಾಗಿದೆ. ಆದ್ದರಿಂದ ಸಿಆರ್‌ಝಡ್‌ನಿಂದ ಅನುಮತಿ ಸಿಕ್ಕಿಲ್ಲ, ಆದ್ದರಿಂದ ಈ ಘಟಕ ನಿರ್ಮಾಣ ಕಾನೂನು ಪ್ರಕಾರ ಅಪರಾಧವಾಗಿದೆ. ಈ ಜಮೀನಿಗೆ ತೆರಳುವ ರಸ್ತೆ ಕೂಡ ಪಂಚಾಯತ್ ಅಥವಾ ಸರ್ಕಾರಿ ರಸ್ತೆಯಲ್ಲ ಎಂದವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2013ರಲ್ಲಿಯೇ ಅಂದಿನ ಜಿಲ್ಲಾಧಿಕಾರಿ ರೇಜು ಅವರು ಈ ಕಟ್ಟಡವನ್ನು ಅನಧಿಕೃತ ಎಂದು ಘೋಷಿಸಿದ್ದಾರೆ. ಈ 104 -24, 25 ಸರ್ವೆ ನಂಬರ್ ನಲ್ಲಿರುವ ಕಟ್ಟಡ ಕಾನೂನುಬಾಹಿರ ಎಂದು ಕುಂದಾಪುರ ಜೆಎಂಸಿ ನ್ಯಾಯಾಲಯ ತೀರ್ಪು ನೀಡಿ, ಮಾಲಕನಿಗೆ 15 ಸಾವಿರ ರು. ದಂಡ ವಿಧಿಸಿದೆ. ಈ ಘಟಕ ಸ್ಥಾಪನೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಪರವಾನಿಗೆ ಪಡೆಯಲಾಗಿಲ್ಲ, ಈ ಸರ್ವೆ ನಂಬರಿನ ಭೂಮಿ ಖರೀದಿಯಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದವರು ದಾಖಲೆಗಳನ್ನು ಬಿಡುಗಡೆ ಮಾಡಿದರು.

ಅಧಿಕಾರಿಗಳು ಎಲ್ಲಾ ಗೊತ್ತಿದ್ದು ಜನಪ್ರತಿನಿಧಿಗಳನ್ನು ದಾರಿತಪ್ಪಿಸಿದ್ದಾರೆ. ಸ್ಥಳೀಯ ಜನಜೀವನದ ಮೇಲೆ ಮತ್ತು ನದಿಯ ನೀರಿನ ಮೇಲೆ ದುಷ್ಪರಿಣಾಮ ಬೀರಲಿರುವ ಈ ಘಟಕದ ವಿರುದ್ಧ ಹೋರಾಟ ಮುಂದುವರಿಯುತ್ತದೆ ಎಂದು ಹೋರಾಟಗಾರ ನಾಗೇಂದ್ರ ಪುತ್ರನ್ ಹೇಳಿದರು.

ಸ್ಥಳೀಯರಾದ ಅಶೋಕ್ ಪೂಜಾರಿ, ಗಣಪತಿ, ಗಣೇಶ ಸಾಲಿಗ್ರಾಮ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು ‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...