ಉಡುಪಿ | ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿ – ಸಂಸದ ಕೋಟ ಶ್ರೀನಿವಾಸ

Date:

ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಡಾ. ಸರೋಜಿನಿ ಮಹಷಿ ವರದಿಯಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಗಳಲ್ಲಿ ಎ.ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ ಅರ್ಹತೆಯನ್ನು ಆಧರಿಸಿ, ಜಿಲ್ಲೆಯ ಸ್ಥಳೀಯ ಜನರಿಗೆ ಪ್ರಥಮ ಆದ್ಯತೆಯ ಮೇಲೆ ಶೇ. 65 ಕ್ಕಿಂತ ಹೆಚ್ಚು ಹುದ್ದೆಗಳನ್ನು ಕಲ್ಪಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಷಿ ವರದಿ ಅನ್ವಯ ಡಿ ಗ್ರೂಪ್ ಹುದ್ದೆಗಳಿಗೆ ಶೇ. 100 ರಷ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಕೆಲವು ಕೈಗಾರಿಕೆಗಳಲ್ಲಿ ಹೊರರಾಜ್ಯದ ಕಾರ್ಮಿಕರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಗಳಿಗೆ ಸ್ಥಳೀಯರು ಸೇರಲು ಮುಂದೆ ಬರುತ್ತಿಲ್ಲ ಎಂಬ ಕಾರಣ ನೀಡುತ್ತಾರೆ. ಸಾಧ್ಯವಾದಷ್ಟು ಗ್ರಾಮ ಪಂಚಾಯತಿಗಳಲ್ಲಿ ಹುದ್ದೆ ಖಾಲಿ ಇರುವ ಬಗ್ಗೆ ಮಾಹಿತಿ ಪ್ರಚಾರಪಡಿಸಿ, ಸ್ಥಳೀಯರಿಗೆ ಉದ್ಯೋಗ ನೀಡಲು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಯುವ ಜನರು ಉದ್ಯೋಗವನ್ನು ಅರಸಿ ಹೊರ ಹೋಗುತ್ತಿರುವುದು ಕಂಡುಬರುತ್ತಿದೆ. ಇದರಿಂದಾಗಿ ಭವಿಷ್ಯದಲ್ಲಿ ಮನೆಯಲ್ಲಿರುವ ವಯಸ್ಕರ ಯೋಗಕ್ಷೇಮ ನೋಡಲು ಕೊರತೆಯಾಗುವ ಸಾಧ್ಯತೆಗಳಿರುತ್ತವೆ. ಡಾ. ಸರೋಜಿನಿ ಮಹಷಿ ವರದಿ ಪಾಲನೆ ಮಾಡುವುದರೊಂದಿಗೆ ಕನ್ನಡ ಓದಲು ಹಾಗೂ ಬರೆಯಲು ಕಲಿತಿರುವ ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕು ತಪ್ಪಿದ್ದಲ್ಲಿ, ಇವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೈಗಾರಿಕೋದ್ಯಮಗಳು ತಮ್ಮ ಕೈಗಾರಿಕೆಗಳ ಮುಂಭಾಗದಲ್ಲಿ ಅಳವಡಿಸಿರುವ ನಾಮ ಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಹಾಗೂ ಇತರೆ ಭಾಷೆಯಲ್ಲಿ ಶೇ. 40 ರಷ್ಟು ಅಳತೆಯಲ್ಲಿ ಪ್ರದರ್ಶಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಇವುಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದ ಅವರು, ಘಟಕದ ಉತ್ಪನ್ನಗಳ ಪ್ಯಾಕೇಟ್ ಮೇಲೆ ಘಟಕದ ಹೆಸರು, ಮತ್ತಿತರ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ನಮೂಸಿದತಕ್ಕದ್ದು ಎಂದರು.

ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಬಾಂಗ್ಲಾದೇಶದ ಪ್ರಜೆಗಳು ಕಾರ್ಯನಿರ್ವಹಿಸುತ್ತಿದ್ದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದರು. ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಹರೀಶ್ ಕುಂದರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...