ಕೊಟ್ಟೂರು | ರೈತರ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಆಗ್ರಹ

Date:

ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಭರ್ಮಣ್ಣ ಅವರು ವಿಜಯನಗರ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಕೊಟ್ಟೂರು ತಾಲೂಕಿನ ರೈತರ ಸಹಯೋಗದೊಂದಿಗೆ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ನೀಡಿ, ಮಾತನಾಡಿದ ಅವರು, “ಖರೀದಿ ಕೇಂದ್ರ ತೆರೆಯಬೇಕು, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿರುವ ಈರುಳ್ಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನಿಗದಿಮಾಡಬೇಕು” ಎಂದು ರೈತ ಮುಖಂಡ ಭರ್ಮಣ್ಣ ಒತ್ತಾಯಿಸಿದರು.

“ಕೊಟ್ಟುರು ತಾಲೂಕಿನ ರೈತರು ದಾಖಲು ಪ್ರಮಾಣದಲ್ಲಿ ಜೋಳ, ಮೆಕ್ಕೆಜೋಳ ಸೇರಿದಂತೆ ಇತರೆ ದವಸ ಧಾನ್ಯ ಹಾಗೂ ಈರುಳ್ಳಿ ಬೆಳೆದಿದ್ದಾರೆ. ಕೊಟ್ಟೂರು APMC ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರಗಳು ತೆರೆದಿಲ್ಲ, ಕಾರಣ ಶೀಘ್ರವೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ದವಸ ಧಾನ್ಯಗಳಿಗೆ ಈರುಳ್ಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗ ಆಗ್ರಹ

ಈ ಸಂದರ್ಭದಲ್ಲಿ ಕರಾರೈ ಸಂಘದ ಕೊಟ್ಟೂರು ತಾಲೂಕಧ್ಯಕ್ಷ ಶ್ರೀದರ್ ಎಸ್ ಒಡವಯರ್ ಸೇರಿದಂತೆ ಕೊಟ್ಟೂರು ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಅನೇಕ ರೈತರು ಇದ್ದರು.

ವರದಿ : ವಿ ಜಿ ವೃಷಭೇಂದ್ರ ಕೂಡ್ಲಿಗಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...