ಕೆಆರ್‌ಪುರಂ ಸಿಲಿಂಡರ್‌ ಸ್ಫೋಟ ಪ್ರಕರಣ: ಸ್ಥಳಕ್ಕೆ ಶಾಸಕ, ಸಚಿವರ ಭೇಟಿ; ಪರಿಹಾರ ಘೋಷಣೆ

Date:

ಇಂದು ಬೆಳಗ್ಗೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ನಡೆದ ಭಾರೀ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ್ ಭೇಟಿ ನೀಡಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಶಾಸಕ ಬೈರತಿ ಬಸವರಾಜ್‌ ಘೋಷಿಸಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, “ತ್ರಿವೇಣಿನಗರದಲ್ಲಿ ಸಂಭವಿಸಿದ ಸ್ಫೋಟದಿಂದ ಅಕ್ಕಯ್ಯಮ್ಮ ಎನ್ನುವರರು ಸಾವನ್ನಪ್ಪಿರುವುದು ದುಃಖದ ಸಂಗತಿ. ಗಟ್ಟಿ ಆರ್‌ಸಿಸಿ ಮನೆಯಲ್ಲಿ ಕೇವಲ ಸಿಲಿಂಡರ್ ಲೀಕ್‌ನಿಂದ ಇಷ್ಟು ಭಾರೀ ಹಾನಿಯಾಗಲು ಸಾಧ್ಯವೇ ಎನ್ನುವುದು ಅನುಮಾನಾಸ್ಪದವಾಗಿದೆ. ಇದು ಗ್ಯಾಸ್ ಸ್ಫೋಟವೇ ಅಥವಾ ಬೇರೆ ಕಾರಣವೋ ಎಂಬುದನ್ನು ಎಫ್‌ಎಸ್ಎಲ್ ವರದಿ ಸ್ಪಷ್ಟಪಡಿಸಬೇಕು. ಸತ್ಯ ಹೊರಬರಬೇಕು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಶಾಸಕ ಬೈರತಿ ಬಸವರಾಜ್, “ಈ ಘಟನೆ ನಮ್ಮ ಕ್ಷೇತ್ರದಲ್ಲಿ ಸಂಭವಿಸಿದ್ದು ನನಗೆ ತುಂಬಾ ದಿಗ್ಭ್ರಾಂತಿ ಉಂಟು ಮಾಡಿದೆ. ಇದು ಗ್ಯಾಸ್ ಸ್ಫೋಟದಿಂದ ಆಗಿದ್ಯೋ, ಅಥವಾ ಬೇರೆ ಯಾವುದೋ ಸ್ಫೋಟಕದಿಂದ ಆಗಿದ್ಯೋ ಎಂಬುದನ್ನು ತಿಳಿಯಲು ಸಮಗ್ರ ತನಿಖೆ ಅಗತ್ಯ. ಸಿಲಿಂಡರ್ ಬ್ಲಾಸ್ಟ್‌ನಿಂದ ಇಷ್ಟು ದೊಡ್ಡ ಹಾನಿ ಸಂಭವಿಸಿರುವುದು ಅನುಮಾನಾಸ್ಪದವಾಗಿದ್ದು, ಸತ್ಯ ಹೊರಬರಬೇಕು. ಮೃತಳ ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ಪರಿಹಾರ ನೀಡುತ್ತೇನೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನೂ ಭರಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಕೆಆರ್‌ ಪುರಂನಲ್ಲಿ ಸಿಲಿಂಡರ್ ಸ್ಫೋಟ: ಮನೆ ಧ್ವಂಸ, ಓರ್ವ ಮಹಿಳೆ ಸಾವು

ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋಟ್ ಘಟನೆ ಕುರಿತು ಪ್ರತಿಕ್ರಿಯಿಸಿ, “ಬೆಳಗ್ಗೆ ಸುಮಾರು 7.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಅಕ್ಕಯ್ಯಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಅವರು ಮಗ ಮತ್ತು ಮೊಮ್ಮಕ್ಕಳ ಜೊತೆ ವಾಸವಿದ್ದರು. ಬೆಳಗ್ಗೆ ಗ್ಯಾಸ್ ಲೀಕ್‌ನ ವಾಸನೆ ಬರುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ. ಸ್ಟವ್ ಆನ್ ಮಾಡಿದ ತಕ್ಷಣ ಬ್ಲಾಸ್ಟ್ ಆಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆ ಸಂಪೂರ್ಣ ಧ್ವಂಸವಾಗಿದೆ ಹಾಗೂ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಸೋಕೋ, ಎಫ್‌ಎಸ್ಎಲ್ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗಿದ್ದು, ತನಿಖೆ ಮುಂದುವರಿಸುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...