ಕೆ ಆರ್ ಪೇಟೆ | ನೌಕರರು ಆರೋಗ್ಯ ಸ್ವಾಸ್ತ್ಯ ಕಾಪಾಡಿಕೊಳ್ಳಬೇಕು: ಆರ್ ದಯಾನಂದಕುಮಾರ್

Date:

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲೂಕಿನ ಬಣ್ಣೇನಹಳ್ಳಿ ಗ್ರಾಮದಲ್ಲಿರುವ ಫೆವರಿಚ್ ಗ್ರೂಪ್‌ನ ಮೆಗಾ ಫುಡ್‌ಪಾರ್ಕ್‌ನಲ್ಲಿ ರೋಟರಿ ಬೆಂಗಳೂರು, ಮಹಾಲಕ್ಷ್ಮಿ ಸೆಂಟ್ರಲ್ ಸಹಯೋಗದಲ್ಲಿ ಆವರಣದಲ್ಲಿರುವ ಉದ್ಯಮಗಳ ನೌಕರರು, ಕುಟುಂಬ ಸದಸ್ಯರಿಗೆ ಏರ್ಪಡಿಸಿದ್ದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಫೆವರಿಚ್ ಗ್ರೂಪ್‌ನ ಉಪಾಧ್ಯಕ್ಷ ಆರ್. ದಯಾನಂದಕುಮಾರ್ ನೌಕರರು ಆರೋಗ್ಯ ಸ್ವಾಸ್ಥ್ಯವನ್ನು ಕಾಪಾಡಿಕೊಂಡು, ಉದ್ಯಮಗಳ ಬೆಳವಣಿಗೆಗೆ ಕೊಡುಗೆ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.

ಫೆವರಿಚ್ ಗ್ರೂಪ್‌ಗೆ 40 ವರ್ಷದ ಅನುಭವವಿದೆ. ಸಣ್ಣ ಉದ್ಯಮದಿಂದ ದೊಡ್ಡ ಉದ್ಯಮವಾಗಿ ಗ್ರೂಪ್ ನ ಅಧ್ಯಕ್ಷ ಜಯದೇವ ಬೆಳಸಿದ್ದಾರೆ. ಮೊದಲಿಗೆ ಕೃಷಿ ಸರಕು ವ್ಯಾಪಾರ, ಆಮದು, ರಫ್ತು ಹಾಗೂ ತಯಾರಿಕಾ ಕ್ಷೇತ್ರಗಳಿಗೆ ವಿಸ್ತರಣೆ ಆಗಿದೆ. ಈಗ ಕೃಷಿ ಹಾಗೂ ಆಹಾರ ಸಂಬಂಧಿತ ಉದ್ಯಮಕ್ಕೂ ಪಾದರ್ಪಣೆ ಮಾಡಿದೆ. ಗ್ರೂಪ್ ದೇಶದಲ್ಲಿ ಸ್ನ್ಯಾಕ್ ಆಹಾರ ಕಚ್ಚಾ ವಸ್ತುಗಳ ತಯಾರಿಕೆ ಹಾಗೂ ಪೂರೈಕೆ ಮಾಡುತ್ತಿದ್ದಾರೆ. ಪೆಪ್ಸಿಕೋ, ಪಾರ್ಲೆ, ಐಟಿಸಿ ಸೇರಿದಂತೆ ಹಲವು ಜಾಗತಿಕ ಸಂಸ್ಥೆಗಳಿಗೆ ಪೂರೈಸುತ್ತಿದೆ ಎಂದು ಹೇಳಿದರು.

2014 ರಲ್ಲಿ ಹೊಸ ತಂತ್ರಜ್ಞಾನದಿಂದ ಮೂಲ ಸೌಕರ್ಯ ಕ್ಷೇತ್ರಕ್ಕೆ ಪ್ರವೇಶಿಸಿ, ಮೆಗಾ ಫುಡ್ ಪಾರ್ಕ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಿಸಲಾಗಿದ್ದು, ಉದ್ಯಮಿಗಳಿಗೆ ಸುಗಮ ಹಾಗೂ ತೊಂದರೆ ರಹಿತ ವಾತಾವರಣ ಒದಗಿಸುವುದು, ಭೂಮಿ ಹಂಚಿಕೆ, ಹೂಡಿಕೆ ಬೆಂಬಲ, ಮೂಲಭೂತ ಹಾಗೂ ಅಗತ್ಯ ಸೌಲಭ್ಯಗಳು ಹಾಗೂ ಕಾನೂನು ಅನುಮತಿಗಳ ಸಹಾಯ, ಫುಡ್ ಪಾರ್ಕ್‌ನಲ್ಲಿರುವ ಕೈಗಾರಿಕೆಗಳು ರೈತರಿಂದ ನೇರವಾಗಿ ಕಚ್ಚಾ ವಸ್ತುಗಳನ್ನು ಖರೀದಿಸುವ ಮೂಲಕ ಮಧ್ಯವರ್ತಿಗಳ ನಿವಾರಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ಗ್ರಾಮೀಣ ಯುವಕರಿಗೆ ಸ್ಮಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ, ಜನಸಂದಣಿಯ ನಗರಗಳಿಗೆ ವಲಸೆ ಹೋಗುವದನ್ನು ತಡೆಯಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಡಿ.17 ರಿಂದ 21ರವರೆಗೆ ‘ನಿರಂತರ ರಂಗ ಉತ್ಸವ-2025’

ರೋಟರಿ ಸಂಸ್ಥೆಯ ಪಿಡಿಜಿ ಡಾ. ನಾಗೇಂದ್ರ, ಬೆಂಗಳೂರಿನ ಮಹಾಲಕ್ಷ್ಮಿ ಸೆಂಟರಲ್ ರೋಟರಿ ಅಧ್ಯಕ್ಷ ಪ್ರಶಾಂತ್ ರಾವ್, ಸಂಸ್ಥೆಯ ನಿರ್ದೇಶಕ ವಿಶಾಲ್ ನಾಯಡು, ಸಂಸ್ಥೆಯ ಅಧ್ಯಕ್ಷ ಜಯದೇವ್, ಕಾರ್ಯದರ್ಶಿ ಚಿರುದೀಪ್ ಶಿಬಿರದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...